ಮೈಸೂರು: ಸಿಎಂ ಸಿದ್ದರಾಮಯ್ಯನವರು (CM Siddaramaiah) ಮುಡಾ ಹಗರಣಕ್ಕೆ(MUDA Scam) ಸಂಬಂಧಿಸಿದಂತೆ ಸುಳ್ಳು ಹೇಳಿದ್ರಾ ಎಂಬ ಗಂಭೀರವಾದ ಪ್ರಶ್ನೆ ಎದ್ದಿದೆ.ಬುಧವಾರ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ (Parvathy) ಅವರು ಮುಡಾಕ್ಕೆ ಬರೆದ ಪತ್ರಗಳು ಮಾಧ್ಯಮಗಳಿಗೆ ಲಭ್ಯವಾಗಿದ್ದವು. ಈ ಪತ್ರ ಬೆಳಕಿಗೆ ಬಂದ ಬೆನ್ನಲ್ಲೇ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಸಿದ್ದರಾಮಯ್ಯ, ನನ್ನ ಪತ್ನಿ ಯಾವುದೇ ಪತ್ರ ಬರೆದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಆದರೆ ಪಾರ್ವತಿ ಅವರು ಪತ್ರ ಬರೆದ ಬಗ್ಗೆ ಸಿಎಂ ಸಿದ್ದರಾಮಯ್ಯನವರೇ ಉಲ್ಲೇಖ ಮಾಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಇದನ್ನೂ ಓದಿ: MUDA Scam | ಹೊಸ ಟ್ವಿಸ್ಟ್‌ – ಸಿಎಂ ಪತ್ನಿ ಬರೆದ ಪತ್ರವನ್ನೇ ಅಧಿಕಾರಿಗಳು ವೈಟ್​ನರ್ ಬಳಸಿ ತಿರುಚಿದ್ದಾರಾ?ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯನವರಿಗೆ ಶೋಕಾಸ್‌ ನೋಟಿಸ್‌ ನೀಡಿದ್ದರು. ಈ ನೋಟಿಸ್‌ಗೆ ಸಿದ್ದರಾಮಯ್ಯನವರು ಉತ್ತರ ನೀಡಿದ್ದರು. ಈ ಉತ್ತರದಲ್ಲಿ ಪತ್ನಿ ಪಾರ್ವತಿ ಅವರು ಮುಡಾಗೆ ಬರೆದ ಪತ್ರದ ಬಗ್ಗೆ ಉಲ್ಲೇಖ ಮಾಡಿದ್ದಾರೆ. 30ನೇ ಖಂಡಿಕೆ 15ನೇ ಅನೆಕ್ಸರ್ ನಲ್ಲಿ ತಮ್ಮ ಪತ್ನಿ ಮುಡಾಗೆ ಪತ್ರ ಬರೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. Sign in to your account
Username or Email Address


Password

 Remember Me


