ಬೆಂಗಳೂರು: ನೂರು ಜನ ಸಿದ್ದರಾಮಯ್ಯನಂತಹವರು (Siddaramaiah) ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಅಂತ ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಸವಾಲ್ ಹಾಕಿದರು.ಅಗತ್ಯ ಬಿದ್ದರೆ ಕುಮಾರಸ್ವಾಮಿ ಅವರನ್ನ ಬಂಧನ ಮಾಡುತ್ತೇವೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನನ್ನ ಸಹಿಯನ್ನೇ ತಿರುಚಲಾಗಿದೆ, 1 ದಿನವಾದ್ರೂ ಜೈಲಿಗೆ ಹಾಕಲು ಪ್ಲ್ಯಾನ್‌ ನಡೆಯುತ್ತಿದೆ: ಹೆಚ್‌ಡಿಕೆ ಕಿಡಿನನ್ನ ಬಂಧನ ಮಾಡೋಕೆ ನೂರು ಜನ ಸಿದ್ದರಾಮಯ್ಯ ಬಂದರೂ ಆಗೊಲ್ಲ. ನನಗೆ ಭಯ ಶುರುವಾಗಿದೆ ಅಂತ ಸಿಎಂ ಹೇಳ್ತಾರೆ. ನನಗೆ ಭಯ ಶುರುವಾಗಿದೆಯಾ? ನನ್ನನ್ನ ನೋಡಿದ್ರೆ ಹಾಗೆ ಅನ್ನಿಸುತ್ತಾ ಅಂತ ಪ್ರಶ್ನೆ ಮಾಡಿದ್ರು.ಸಿದ್ದರಾಮಯ್ಯ ಅವರು ಒಂದು ವಾದದಿಂದ ಹೇಗೆ ನಡೆದುಕೊಂಡಿದ್ದಾರೆ ಅಂತ ಜನ ನೋಡಿದ್ದಾರೆ. ಮೈಸೂರಿನ ದಾಖಲೆಗಳೇ ಇವೆಯಲ್ಲ. ಮುಡಾ ಆಸ್ತಿ (MUDA Property) ನನ್ನ ಆಸ್ತಿ ಅಂತ ಹೇಳ್ತಿದ್ದಾರೆ. ಇಂತಹ ಭಂಡತನ ಮುಖ್ಯಮಂತ್ರಿ ನಾನು ನೋಡಿಲ್ಲ ಅಂತ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ಪತಿ-ಪತ್ನಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಹೆಂಡತಿ ಶವ ಪತ್ತೆ – ಕೆರೆಗೆ ಹಾರಿ ಗಂಡ ಆತ್ಮಹತ್ಯೆSign in to your account
Username or Email Address


Password

 Remember Me


