ಬೆಂಗಳೂರು: ಸಿದ್ದರಾಮಯ್ಯಗೆ (Siddaramaiah) ಈಗ ಮೂರು ಸಂಕಟ, ಮೂರು ಹೋರಾಟ ಇವೆ. ಭಾವನಾತ್ಮಕ ಸಂಕಟ.. ರಾಜಕೀಯ ಸಂಕಟ.. ಕಾನೂನು ಸಂಕಟಗಳು ಇವೆ.ಮೂರು ಸಂಕಟಗಳನ್ನ ಹೋರಾಟದ ಮೂಲಕವೇ ಸಮಚಿತ್ತದಿಂದ ಎದುರಿಸಬೇಕಾಗಿದೆ. ಎಫ್‌ಐಆರ್ (FIR) ದಾಖಲಾದರೇ ಸಾರ್ವಜನಿಕವಾಗಿ ಕಾಣಿಸಿ ಕೊಳ್ಳದ ಪತ್ನಿ ವಿಚಾರಣೆ ಎದುರಿಸಬೇಕು. ಇದು ಸಹಜವಾಗಿಯೇ ಸಿಎಂ ಸಿದ್ದರಾಮಯ್ಯಗೆ ಇದು ಅರಗಿಸಿಕೊಳ್ಳಲಾಗದ ವಿಷಯ. ಅನಿರೀಕ್ಷಿತವಾಗಿ ಕುಟುಂಬದಿಂದಲೇ ಬಂದ ಆರೋಪವನ್ನ ಭಾವನಾತ್ಮಕ ಹೋರಾಟದ ಮೂಲಕ ಎದುರಿಸಬೇಕಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಪೊಲಿಟಿಕಲ್ ಸೇಫ್ – ಆದ್ರೆ ಮುಂದೇನು?ಇನ್ನು ರಾಜಕೀಯ ಸಂಘರ್ಷ (Political conflict) ಮಾಡದ ಹೊರತು ಅಧಿಕಾರ ಉಳಿಸಿಕೊಳ್ಳಲು ಆಗದು. ರಾಜ್ಯಪಾಲರ ರಾಜಕೀಯ ಪಿತೂರಿ ಆರೋಪದಿಂದ ಹಿಡಿದು ಅಧಿಕಾರ ಉಳಿಸಿಕೊಳ್ಳುವ ತನಕ ರಾಜಕೀಯ ಹೋರಾಟ ಮಾಡುವುದು ಅನಿವಾರ್ಯ. ಆರೋಪ ಮುಕ್ತರಾಗಲು ಕೋರ್ಟ್ ನಲ್ಲೇ (Karnataka Highcourt) ಹೋರಾಟ ನಡೆಸಬೇಕಿದೆ. ಇದನ್ನೂ ಓದಿ: ಟ್ರೈನಿ ವೈದ್ಯೆ ಅತ್ಯಾಚಾರ & ಹತ್ಯೆ ಕೇಸ್‌; ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಇಷ್ಟು ವರ್ಷದ ರಾಜಕಾರಣದಲ್ಲಿ ಕಾಪಾಡಿಕೊಂಡು ಬಂದಿದ್ದದ್ದನ್ನ ಮರಳಿಪಡೆಯಲು ಕಾನೂನು ಹೋರಾಟ ಅಗತ್ಯ. ಕಾನೂನು ಹೋರಾಟದ ಮೂಲಕ ಜಯಿಸಿ ಬಂದು ವಿರೋಧಿಗಳಿಗೆ ಉತ್ತರ ಕೊಡಬೇಕಾದ ಅನಿವಾರ್ಯತೆಯೂ ಇದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಮೂರು ಸಂಕಟಗಳನ್ನ ಅನುಭವಿಸಿಯೇ ಮೇಲೆದ್ದು ಬರ್ತಾರಾ? ವಿರೋಧಿಗಳ ಬಾಯಿ ಮುಚ್ಚಿಸುತ್ತಾರಾ? ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: TB Dam | ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ – ತಾಂತ್ರಿಕ ತಂಡಕ್ಕೆ 2 ಲಕ್ಷ ಬಹುಮಾನSign in to your account
Username or Email Address


Password

 Remember Me


