ಬೆಂಗಳೂರು: ಮುಡಾ ಸೈಟ್ (MUDA Scam Case) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಮುಂದಾಗಿದ್ದಾರೆ.ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಕಾನೂನು ಮೊರೆ ಹೋಗಲಿದ್ದಾರೆ. ಈ ಕಾನೂನು ಸಮರ ಸಿದ್ದರಾಮಯ್ಯನವರೇ ಮಾಡಬೇಕಿದೆ. ಇದನ್ನೂ ಓದಿ: ಸಿಎಂಗೆ ಮುಡಾ ಸಂಕಷ್ಟ – ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿವೈಯಕ್ತಿಕವಾಗಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ ಎಂದು ಕಾನೂನು ಸಮರ ಮುಂದುವರೆಸಬೇಕು. ಪ್ರಾಸಿಕ್ಯೂಷನ್ ಅಸಾಂವಿಧಾನಿಕ, ಕಾನೂನುಬಾಹಿರ ಅಂತಾ ಕೋರ್ಟ್‌ಗೆ ಸಿಎಂ ಮನವರಿಕೆ ಮಾಡಬೇಕಾಗುತ್ತದೆ.ರಾಜ್ಯಪಾಲರ ವಿವೇಚನಾ ಅಧಿಕಾರ ಪ್ರಶ್ನಿಸುವ ಹಕ್ಕು ಸರ್ಕಾರಕ್ಕೆ ಇಲ್ಲ. ರಾಜ್ಯಪಾಲರು ಅನುಮತಿ ಕೊಟ್ಟ ಪ್ರಾಸಿಕ್ಯೂಷನ್ ಬಗ್ಗೆ ಪ್ರಶ್ನೆ ಮಾಡಬೇಕಾಗುತ್ತದೆ. ಇದನ್ನೂ ಓದಿ: ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ: ಪರಮೇಶ್ವರ್ಸಿಎಂ ಮುಂದಿರುವ ಆಯ್ಕೆ ಏನು?
* ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟ್‌ಗೆ ಹೋಗಬಹುದು.
* ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಸಿಎಂಗೆ ಅವಕಾಶ ಇದೆ.
* 2022ರಲ್ಲಿ ಮುಡಾ ಸೈಟ್ ಸಿಎಂಗೆ ಹಂಚಿಕೆ ಆಗಿರೋದು. ಹೀಗಾಗಿ ರಾಜ್ಯಪಾಲರಿಗೆ ಅಧಿಕಾರ ಇಲ್ಲ ಅಂತಾ ವಾದಿಸಬಹುದು.
* ಸ್ಪೀಕರ್‌ಗೆ ಅವಕಾಶ ಇದೆ ಅಂತಾ ಕೋರ್ಟ್‌ನಲ್ಲಿ ಪ್ರಸ್ತಾಪಿಸಬಹುದು.Sign in to your account
Username or Email Address


Password

 Remember Me


