– ಬೇರೆ ಧರ್ಮಗಳು ಬರುವ ಮುನ್ನ ಆಗುವ ಮುನ್ನ ಇದ್ದದ್ದೇ ಹಿಂದೂ ಧರ್ಮಹಾವೇರಿ: ಹಿಂದೂ ಅಂದ್ರೆ ಸತ್ಯಸನಾತನ ಧರ್ಮವಾಗಿದೆ. ಬೇರೆ ಧರ್ಮಗಳು ಉತ್ಪತ್ತಿ ಆಗುವ ಮುನ್ನ ಇದ್ದದ್ದೇ ಹಿಂದೂ ಧರ್ಮ. ಈ ದೇಶದಲ್ಲಿ ಇರುವ ಮುಸ್ಲಿಮರೂ ಹಿಂದೂಗಳೇ. ಅಖಂಡ ಭಾರತ ಇದು ಎಂದು ಹರಿಹರಿ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ (Vachananda Swamiji) ಅಭಿಪ್ರಾಯಪಟ್ಟರು.ಹಾವೇರಿಯಲ್ಲಿ ಮಾತನಾಡಿದ ಅವರು, ಸನಾತನ ಧರ್ಮ ಹಿಂದೂವಿನ ಭಾಗವಾಗಿದೆ. ಆರ್ಯರು ಹಿಂದೂ ಭಾಗವಾಗಿದ್ದು, ಹಿಂದೂಗಳಿಗೆ ಯಾವುದೇ ಬಾರ್ಡರ್ ಇಲ್ಲ. ಜಗತ್ತಿನ ಸಿದ್ಧಾಂತ ತತ್ವಗಳಿಗೆ ಮೂಲ ಹಿಂದೂ ಧರ್ಮವಾಗಿದೆ. ಶ್ರೀಲಂಕಾ ಅಫ್ಘಾನಿಸ್ತಾನದಲ್ಲಿ ಇರುವವರೆಲ್ಲ ಹಿಂದೂಗಳೇ. ಇನ್ನು ಧರ್ಮ ಆಚರಣೆ ಮನೇಲಿ ಇರಬೇಕು‌. ದೇಶ ಸಮುದಾಯ ಅಂತಾ ಬಂದಾಗ ನಾವೆಲ್ಲಾ ಹಿಂದೂಗಳಾಗಿದ್ದೇವೆ. ಬೇರೆ ಸ್ವಾಮೀಜಿಗಳ ಹೇಳಿಕೆ ಬಗ್ಗೆ ಪ್ರಸ್ತಾವನೆ ಮಾಡಲ್ಲ ಎಂದು ಕೆಲ ಸ್ವಾಮೀಜಿಗಳಿಗೆ ವಚನಾನಂದ ಸ್ವಾಮೀಜಿ ತಿರುಗೇಟು ನೀಡಿದರು. ಇದನ್ನೂ ಓದಿ: ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದೇನೆ, ತಪ್ಪೇನು ಅಲ್ಲ: ಕೃಷ್ಣಬೈರೇಗೌಡ ಸಮರ್ಥನೆಹಿಂದೂ ಅಂದ್ರೆ ಶುದ್ದವಾದ ಜೀವನ ಪದ್ದತಿ ಅಂತಾ ಸುಪ್ರೀಂ ಕೋರ್ಟ್ ಹೇಳಿದೆ. ಕೆಲವರು ಕಲ್ಲು ನಾಗರಕ್ಕೆ ಹಾಲೆರೆಯಬೇಡಿ, ಅನಾಥ ಮಕ್ಕಳಿಗೆ ಹಾಲು ಕೊಡಿ ಅಂತಾರೆ. ಹಾಲು ಕೊಡೋ ತಾಯಿ ಹತ್ಯೆ ಮಾಡ್ತಾ ಇದಾರೆ. ಎಷ್ಟು ಜನ ಸ್ವಾಮಿಗಳು ಗೋಹತ್ಯೆ ವಿರೋಧಿಸಿದಿರಿ? ಅನಾಥ ಮಕ್ಕಳ ಮೇಲೆ ಕರುಣೆ ಇದ್ದರೆ ಹಾಲು ಕೊಡಿ ಎಂಬ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆಗೆ ವಚನಾನಂದ ಸ್ವಾಮೀಜಿ ಕಿಡಿಕಾರಿದರು.ಲಿಂಗಾಯತ ಇರಲಿ, ವೀರಶೈವ ಇರಲಿ ಒಂದಾಗಿ ಹೋಗಬೇಕು. ಕೆಲವರು ಜಾತಿ ಸರ್ಟಿಪಿಕೇಟ್‌ಗಳಲ್ಲಿ ಹಿಂದೂ ಭೌದ್ಧ ಅಂತಾ ಇದೆ. ಹಿಂದೂ ಜೈನ ಅಂತಾ ಇದೆ. ಅದೇ ಥರ ಹಿಂದೂ ಲಿಂಗಾಯತ, ವೀರಶೈವ ಹಾಗೂ ಲಿಂಗಾಯತರು ಒಂದಾಗಿ ಮೊದಲು. ಒಂದಾಗದೇ ಹೇಗೆ ಪ್ರತ್ಯೇಕ ಧರ್ಮ ಮಾಡಬೇಕು? ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ಯಾಕೆ ಸಿಕ್ಕಿಲ್ಲ? ಕೆಲ ಸ್ವಾಮಿಗಳು ನಾವು ಹಿಂದೂಗಳಲ್ಲ ಅಂತಾ ಹೇಳ್ತಾರಲ್ಲ. ಹಾಗೆ ಹೇಳುವ ಸ್ವಾಮಿಗಳಿಗೆ ಅವರ ಸರ್ಟಿಫಿಕೇಟ್ ತೋರಿಸಿ ಅಂತಾ ಹೇಳಿ ಎಂದು ವಾಗ್ದಾಳಿ ಮಾಡಿದರು. ಬಸವಣ್ಣ ಬ್ರಾಹ್ಮಣರು, ನಾವು ಬ್ರಾಹ್ಮಣರಿಗೆ ಕೃತಜ್ಞರಾಗಿ ಇರಬೇಕು. ನಮ್ಮನ್ನು ಉದ್ದಾರ ಮಾಡೋಕೂ ಬ್ರಾಹ್ಮಣರೇ ಬರಬೇಕಾಯ್ತು. ಇಲ್ಲದಿದ್ದರೆ ಶೂದ್ರರಾಗಿ ಇರಬೇಕಿತ್ತು ಎಂದರು. ಇದನ್ನೂ ಓದಿ: ಯೋಗೇಶ್ವರ್‌ಗೆ ಬಂಡಾಯ ಸ್ಪರ್ಧೆಯೇ ಗಟ್ಟಿ; ಕಾಂಗ್ರೆಸ್ ಸೇರ್ಪಡೆ ಹಾದಿ ಮತ್ತಷ್ಟು ಕಠಿಣSign in to your account
Username or Email Address


Password

 Remember Me


