ಬೆಂಗಳೂರು: ರಂಗಾಯಣದ ಅಡ್ಡಂಡ ಕಾರ್ಯಪ್ಪನವರ ಟಿಪ್ಪು (Tipp Nija Kanasugalu) ನಿಜ ಕನಸುಗಳು ಪುಸ್ತಕ (Book) ಕರ್ನಾಟಕದಲ್ಲಿ ವಿವಾದವನ್ನು ಸೃಷ್ಟಿಸಿತ್ತು. ಈಗ ಅದೇ ಮಾದರಿಯಲ್ಲಿ ಸಿದ್ದು ನಿಜಕನಸುಗಳು (Siddu Nija Kanasugalu) ಪುಸ್ತಕ ಸೋಮವಾರ ಲೋಕಾರ್ಪಣೆಗೊಳ್ಳಲಿದೆ.ಸಚಿವ ಅಶ್ವಥ್ ನಾರಾಯಣ (Dr. Ashwathnarayan) ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ. ಚಿಂತಕ ರೋಹಿತ್ ಚಕ್ರತೀರ್ಥ, ಪತ್ರಕರ್ತ ಸಂತೋಷ್ ತಮ್ಮಯ್ಯ, ಸಂವಾದದ ಸಂಪಾದಕ ವೃಷಾಂಕ್ ಭಟ್, ಬರಹಗಾರ ರಾಕೇಶ್ ಶೆಟ್ಟಿ ಉಪಸ್ಥಿತಿ ಇರಲಿದ್ದು, ಪರಿಷತ್ ಸದಸ್ಯರಾದ ಛಲವಾದಿ ನಾರಾಯಣ ಸ್ವಾಮಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗಿಫ್ಟ್ ಜೊತೆ ಪ್ರಾಮಿಸ್ ಪಾಲಿಟಿಕ್ಸ್"ಸಿದ್ದು ನಿಜಕನಸುಗಳು" ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ.ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ. pic.twitter.com/GRnvlmqGrp— Dr. Ashwathnarayan C. N. (@drashwathcn) January 8, 2023ಚುನಾವಣಾ ಹೊಸ್ತಿಲಲ್ಲಿ ಟಿಪ್ಪುವಿಗೆ ಹೋಲಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಕುರಿತಾದ ಪುಸ್ತಕ ಹೊರಬರುತ್ತಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಟಿಪ್ಪು ನಿಜಕನಸುಗಳು ಪುಸ್ತಕದಲ್ಲಿ ಈಗಾಗಲೇ ಟಿಪ್ಪು ಮತಾಂಧ, ಕ್ರೂರಿ ಅಂತಾ ಬಿಂಬಿಸಲಾಗಿದ್ದು ಅದೇ ಟಿಪ್ಪುವನ್ನು ಸಿದ್ದುವಿಗೆ ಹೋಲಿಸಿ ಸಿದ್ದರಾಮಯ್ಯ ಹಿಂದೂ ವಿರೋಧಿ ಧೋರಣೆ ಬಗ್ಗೆ ಪುಸ್ತಕದಲ್ಲಿ ಪ್ರಸ್ತಾಪಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ಮೂರು ಗಂಟೆಗೆ ಟೌನ್ ಹಾಲ್‍ನಲ್ಲಿ ಪುಸ್ತಕ ಬಿಡುಗಡೆಯಾಗಲಿದೆ. ಇದನ್ನೂ ಓದಿ: ದೇವೇಗೌಡರ ಫೋಟೋ ಹಿಡಿದು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಅಭಿಮಾನಿಗಳು
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


