ಬೆಂಗಳೂರು: ಹೊಸ ವರ್ಷ (New Year 2023) ಒಂದೆಡೆಯಾದರೆ, ಮತ್ತೊಂದೆಡೆ ವೈಕುಂಠ ಏಕಾದಶಿ (Vaikunta Ekadashi). ಬೆಂಗಳೂರಿನ ದೇವಸ್ಥಾನಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ. ಕಳೆದ 2 ವರ್ಷದಿಂದ ಕೊರೊನಾ ಹಿನ್ನೆಲೆ ವೈಕುಂಠ ಏಕಾದಶಿಯನ್ನ ಸಂಭ್ರಮ, ಸಡಗರದಿಂದ ಆಚರಿಸಲು ಆಗಿರಲಿಲ್ಲ. ಇದೀಗ ಕೊಂಚ ಕೊರೊನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ ನಡೆಯಲಿದೆ. ದೇವಾಲಯಗಳಿಗೆ ಸಾವಿರಾರು ಭಕ್ತಾದಿಗಳ ದಂಡೇ ಹರಿದು ಬರಲಿದೆ.ಹೊಸ ವರ್ಷ ಹಿನ್ನೆಲೆ ನಿನ್ನೆ ವೈಯಾಲಿಕಾವಲ್‍ನ ಟಿಟಿಡಿ ದೇವಸ್ಥಾನಕ್ಕೆ 25 ಸಾವಿರಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ರು. ತಿರುಪತಿಯಿಂದ ಲಾಡು ಕಡಿಮೆ ಪ್ರಮಾಣದಲ್ಲಿ ಬಂದ ಹಿನ್ನೆಲೆ 10 ಸಾವಿರ ಲಾಡು ವಿತರಣೆ ಮಾಡಿದ್ರು. ಇಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬೆಳಗ್ಗೆ 3 ಗಂಟೆಯಿಂದ ರಾತ್ರಿ 12 ಗಂಟೆವರೆಗೂ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಭಕ್ತಾದಿಗಳಿಗೆ ಪಾಸ್‍ಗಳನ್ನು ವಿತರಿಸಲಾಗಿದೆ. ಇದನ್ನೂ ಓದಿ: ಕೋಲಾರ ಸಂಸದ ಮುನಿಸ್ವಾಮಿಗೆ ಮುತ್ತು ಕೊಟ್ಟ ಮಾಜಿ ಸಚಿವ ವರ್ತೂರು ಪ್ರಕಾಶ್ನಿನ್ನೆ ರಾಜಾಜಿ ನಗರದ ಇಸ್ಕಾನ್‍(Iskon) ನ ರಾಧಾಕೃಷ್ಣ ಮಂದಿರಕ್ಕೆ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸಿ ಶ್ರೀಕೃಷ್ಣ ಪರಮಾತ್ಮನನ್ನು ಕಣ್ತುಂಬಿಕೊಂಡರು. ಇಂದು ಕೂಡ ಒಂದೂವರೆ ಲಕ್ಷ ಜನ ವೈಕುಂಠ ಏಕಾದಶಿಗೆ ಬರೋ ನಿರೀಕ್ಷೆ ಇದೆ. ಬೆಳಗ್ಗೆ 3 ಗಂಟೆಯಿಂದ ಪೂಜೆಗಳು ನಡೆಯಲಿವೆ. ಸುಪ್ರಭಾತ ಸೇವೆ, ಅರ್ಚನ ಸೇವೆ, ದ್ವಾರ ಸೇವೆ ನಡೆಯುತ್ತವೆ. ಬೆಳಗ್ಗೆ 8 ಗಂಟೆಯಿಂದ ಸಾರ್ವಜನಿಕರು ದರ್ಶನಕ್ಕೆ ಬರಬಹುದು. ರಾತ್ರಿ 11 ಗಂಟೆವರೆಗೂ ದರ್ಶನ ಇರುತ್ತದೆ. ಬೆಳಗ್ಗೆ ಮತ್ತು ಸಂಜೆ ಕಲ್ಯಾಣೋತ್ಸವ ಇರುತ್ತದೆ.ಕಳೆದ 2 ವರ್ಷದಿಂದ ಕೊರೊನಾ (Corona Virus) ಹಿನ್ನೆಲೆ ವೈಕುಂಠ ಏಕಾದಶಿಯನ್ನ ಸಂಭ್ರಮ, ಸಡಗರದಿಂದ ಆಚರಿಸಲು ಆಗಿರಲಿಲ್ಲ. ಇದೀಗ ಕೊಂಚ ಕೊರೋನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ ನಡೆಯಲಿದೆ. ದೇವಾಲಯಗಳಿಗೆ ಸಾವಿರಾರು ಭಕ್ತಾದಿಗಳ ದಂಡೇ ಹರಿದು ಬರಲಿದೆ. ಇದನ್ನೂ ಓದಿ: ಮಹದಾಯಿ ಯೋಜನೆಗೆ ಡಿಪಿಆರ್‌ ಆಗಿದೆ; ಕಾಂಗ್ರೆಸ್‌ ಟೀಕೆಗೆ ತಲೆಕೆಡಿಸಿಕೊಳ್ಳಲ್ಲ – ಸಿಎಂ
Sign in to your account
Username or Email Address


Password

 Remember Me


