ದೊಡ್ಮನೆಯಲ್ಲಿ ಪ್ರೇಮಪಕ್ಷಿಗಳು ಎಂದೇ ರೂಪೇಶ್ (Roopesh Shetty) ಮತ್ತು ಸಾನ್ಯ (Sanya Iyer) ಜೋಡಿ ಹೈಲೈಟ್ ಆಗಿದ್ದರು. ಒಟಿಟಿಯಿಂದ ಟಿವಿ ಬಿಗ್ ಬಾಸ್‌ವರೆಗೂ ಜೊತೆಯಾಗಿದ್ದರು. ಇದೀಗ ಬಿಗ್ ಬಾಸ್ ಮನೆಯಿಂದ (Bigg Boss House) ಹೊರ ಬಂದ್ಮೇಲೆ ಸಾನ್ಯಗೆ ಹೇಳುವ ಮಾತು ಏನಾಗಿರಲಿದೆ ಎಂದು ರೂಪೇಶ್ ಬಿಚ್ಚಿಟ್ಟಿದ್ದಾರೆ.ಟಿವಿ ಬಿಗ್ ಬಾಸ್‌ನಲ್ಲಿ ಸಾನ್ಯ ಅವರು ಎಲಿಮಿನೇಟ್ (Eliminate) ಆದಾಗ ರೂಪೇಶ್ ಶೆಟ್ಟಿ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದರು. ದಯವಿಟ್ಟು ಬದಲಾಗಬೇಡ. ನನಗಾಗಿ ಕಾದಿರು ಎಂದು ಸಾನ್ಯ ಬಳಿ ರೂಪೇಶ್ ಮನವಿ ಮಾಡಿಕೊಂಡಿದ್ದರು. ಈಗ ದೊಡ್ಮನೆಯ ಹೊರಗೆ ಸಾನ್ಯರನ್ನ ಭೇಟಿ ಮಾಡುವ ಸಮಯ ಹತ್ತಿರ ಆಗಿದೆ. ಭೇಟಿ ಆದಾಗ ತಮ್ಮ ಮೊದಲು ಮಾತು ಏನಾಗಿರಲಿದೆ ಎಂಬುದನ್ನು ಅವರು ದೊಡ್ಮನೆ ಒಳಗೆ ಹೇಳಿಕೊಂಡಿದ್ದಾರೆ. ಈ ಬಗ್ಗೆ ದಿವ್ಯಾ ಮತ್ತು ರಾಜಣ್ಣ, ರೂಪೇಶ್‌ಗೆ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:ಜನವರಿ 8ಕ್ಕೆ ಯಶ್ ಅಭಿಮಾನಿಗಳಿಗೆ ಕಾದಿದೆ ಗುಡ್ ನ್ಯೂಸ್ಸಾನ್ಯ ಅಯ್ಯರ್  (Sanya Iyer) ಹತ್ತಿರ ರೂಪೇಶ್ ಶೆಟ್ಟಿ ಅವರು, ಹೇಗಿದ್ದೀಯಾ? ಎಂದು ಹೇಳಿ ಹಗ್ ಮಾಡಿಕೊಳ್ತೀನಿ. ನನ್ನನ್ನು ಎಷ್ಟು ಮಿಸ್ ಮಾಡಿಕೊಂಡೆ ನನ್ನ ಬಗ್ಗೆ ಇರುವ ಕಾಳಜಿ, ಪ್ರೀತಿ ಎಲ್ಲ ಹಾಗೆ ಇದೆಯಾ ಈಗ ಏನು ಮಾಡುತ್ತಿದ್ದೀಯಾ ಪ್ರಾಜೆಕ್ಟ್ಗಳು ಬಂತಾ ನಾನು ಸಾನ್ಯ ಅವರನ್ನು ಬಿಗ್ ಬಾಸ್ ಮನೆಯಲ್ಲಿ ನೋಡಿದ್ದೆ, ಆ ಅನುಭವ ಇದೆ, ಹೊರಗಡೆ ಸಾನ್ಯ ಅವರನ್ನು ನಾನು ನೋಡಿಲ್ಲ. ನನ್ನ ಮೇಲೆ ಬಿಗ್ ಬಾಸ್ ಮನೆಯಲ್ಲಿ ಇದ್ದ ಅಭಿಪ್ರಾಯ ಈಗ ಹಾಗೆ ಇದೆಯಾ ಎಂಬ ಮುಂತಾದ ಪ್ರಶ್ನೆಗಳನ್ನು ಕೇಳಲಿದ್ದೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.ಇನ್ನೂ ದಿವ್ಯಾ ಉರುಡುಗ (Divya Uruduga) ಎಲಿಮಿನೇಷನ್ ನಂತರ ರೂಪೇಶ್ ಶೆಟ್ಟಿ, ರಾಜಣ್ಣ, ದೀಪಿಕಾ ದಾಸ್, ರಾಕೇಶ್ ಅಡಿಗ ನಡುವೆ ಪೈಪೋಟಿ ಮುಂದುವರೆದಿದೆ. ಯಾರಾಗಲಿದ್ದಾರೆ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಎಂದು ಕಾದುನೋಡಬೇಕಿದೆ.
Sign in to your account
Username or Email Address


Password

 Remember Me


