ಮಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರಿಯಲ್ಲಿ ಆಯೋಜಿಸಲಾಗಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಯುವಕರಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುವುದು ಸ್ಕೌಟ್ಸ್ ಮತ್ತು ಗೈಡ್ಸ್‌ನ ಉದ್ದೇಶವಾಗಿದೆ. ಈ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ದೇಶದ ಸಾವಿರಾರು ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್, ರೇಂಜರ್‌ಗಳು, ವಿದ್ಯಾರ್ಥಿಗಳು ಮತ್ತು ಘಟಕದ ನಾಯಕರು ಮತ್ತು ಇತರ ದೇಶಗಳ ಪ್ರಜೆಗೆಳು ಭಾಗವಹಿಸುತ್ತಿದ್ದಾರೆ. ಡಿಸೆಂಬರ್ 21 ರಿಂದ 7 ದಿನಗಳವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶ ಮತ್ತು ರಾಜ್ಯದ ಶ್ರೀಮಂತ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅನೇಕ ಕಲಾವಿದರು ಪ್ರದರ್ಶಿಸುತ್ತಿರುವುದು ಶ್ಲಾಘನೀಯ ಎಂದರು. ಇದನ್ನೂ ಓದಿ: ವಂದೇ ಭಾರತ್, ಶತಾಬ್ದಿ ಸೂಪರ್‌ಫಾಸ್ಟ್ ರೈಲುಗಳ ವೇಳಾಪಟ್ಟಿ ಬದಲಾವಣೆಗೆ ಪರಿಶೀಲಿಸಿ ಕ್ರಮ- ಸೋಮಣ್ಣಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ, ಕೊರೊನಾ ವಾರಿಯರ್ ಆಗಿ ನಿಮ್ಮ ಕೆಲಸವು ಶ್ಲಾಘನೀಯವಾಗಿದೆ. ಪ್ರಧಾನ ಮಂತ್ರಿಯವರ ನೇತೃತ್ವದಲ್ಲಿ, ಭಾರತ ಸರ್ಕಾರವು “ಸಬ್ಕಾ ಸಾಥ್, ಸಬ್ಕಾ ವಿಕಾಸ್ ಔರ್ ಸಬ್ಕಾ ವಿಶ್ವಾಸ್” ಎಂಬ ಮಂತ್ರದ ಜೊತೆಗೆ “ಏಕ್ ಭಾರತ್, ಶ್ರೇಷ್ಠ ಭಾರತ್, ಆತ್ಮನಿರ್ಭರ್ ಭಾರತ್” ಮಿಷನ್‌ನಲ್ಲಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಅಭಿವೃದ್ಧಿಪಡಿಸಲು ‘ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ’ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಸ್ವಚ್ಛ ಮತ್ತು ಹಸಿರು ಭಾರತವನ್ನು ನಿರ್ಮಿಸಲು, ‘ಸ್ವಚ್ಛ ಭಾರತ್ ಮಿಷನ್’ ಅನ್ನು ಪ್ರಾರಂಭಿಸಲಾಗಿದೆ. ಮುಂದಿನ 25 ವರ್ಷಗಳ ಪ್ರಯಾಣವು ನವ ಭಾರತ ನಿರ್ಮಾಣಕ್ಕೆ ಸುವರ್ಣಯುಗವಾಗಿದೆ. ಈ ಅಮೃತಕಲ್‌ನಲ್ಲಿ ನಮ್ಮ ಸಂಕಲ್ಪಗಳ ಸಾಧನೆಯು ನಮ್ಮನ್ನು ಸ್ವಾತಂತ್ರ್ಯದ 100 ವರ್ಷಗಳವರೆಗೆ ಕೊಂಡೊಯ್ಯುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮಗಳ ಬರ್ತ್‌ಡೇ ಆಚರಿಸಲು ಸುವರ್ಣ ಸೌಧ ಬಾಡಿಗೆಗೆ ಕೊಡಿ – ಸಭಾಪತಿಗೆ ವಕೀಲ ಮನವಿ ಪತ್ರಭಾರತವು “ವಸುದೈವ ಕುಟುಂಬಕಂ” ಚಿಂತನೆ ಮತ್ತು “ಸರ್ವೇ ಭವಂತು ಸುಖಿನಃ, ಸರ್ವೇ ಸಂತು ನಿರಾಮಯಾಃ” ಎಂಬ ಮನೋಭಾವದಿಂದ ವಿಶ್ವದಲ್ಲಿ ಏಕತೆಯ ಸಾರ್ವತ್ರಿಕ ಭಾವನೆಯನ್ನು ಉತ್ತೇಜಿಸಲು ಮತ್ತು “ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ” ಮಂತ್ರದೊಂದಿಗೆ ಮುನ್ನಡೆಯುತ್ತಿದೆ ಎಂದು ತಿಳಿಸಿದರು.ಧರ್ಮಸ್ಥಳದ ಪೀಠಾಧಿಪತಿ ಹಾಗೂ ರಾಜ್ಯಸಭಾ ಸಂಸದ ಡಾ. ಡಿ.ವೀರೇಂದ್ರ ಹೆಗ್ಗಡೆ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಉಮಾನಾಥ್ ಕೋಟ್ಯಾನ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂದ್ಯಾ, ವಿಶ್ವ ಸಂಸ್ಥೆಯ ಸ್ಕೌಟ್ ಆಂದೋಲನದ ಪ್ರಧಾನ ಕಾರ್ಯದರ್ಶಿ ಅಹ್ಮದ್ ಅಲ್ಹೆಂದವಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
Sign in to your account
Username or Email Address


Password

 Remember Me


