– ಏ ಕುಮಾರಸ್ವಾಮಿ, ಏ ಅಶೋಕಾ, ಏ ವಿಜಯೇಂದ್ರ ನಿಮಗೆ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ?ಮೈಸೂರು: ಈ ಬಂಡೆ ಸಿದ್ದರಾಮಯ್ಯ (Siddaramaiah) ಜೊತೆಗಿದೆ. ನನ್ನ ಜೊತೆ 136 ಮಂದಿ ಶಾಸಕರಿದ್ದಾರೆ. ನಿಮ್ಮ ಕೈಯಲ್ಲಿ ಏನು ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ದೋಸ್ತಿ ನಾಯಕರ ವಿರುದ್ಧ ಗುಡುಗಿದ್ದಾರೆ.ಮಹಾರಾಜ ಕಾಲೇಜಿನಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, ಏ ಕುಮಾರಸ್ವಾಮಿ, ಏ ಅಶೋಕಾ, ಏ ವಿಜಯೇಂದ್ರ ನಿಮಗೆ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ? ನನ್ನನ್ನು ಮಾಧ್ಯಮದವರು ಬಂಡೆ ಎಂದು ಹೇಳಿದರು. ನಮ್ಮ ಸರ್ಕಾರವನ್ನು 10 ತಿಂಗಳಲ್ಲಿ ತೆಗೆಯುತ್ತೇವೆ ಎಂದು ಹುನ್ನಾರ ಮಾಡುತ್ತಿದ್ದಾರೆ. ನಮ್ಮ ಯೋಜನೆಗಳ ರಕ್ಷಣೆಗೆ ಈ ಹೋರಾಟ ಎಂದು ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ಜನರು ಅಧಿಕಾರಕ್ಕೆ ಬಂದ ಹಾಗೆ. ನಮ್ಮ ಜನಾಂದೋಲನ ರಾಜ್ಯದ, ಸಂವಿಧಾನದ ರಕ್ಷಣೆಗಾಗಿ. ಕುಮಾರಸ್ವಾಮಿ ನಿನ್ನ ಅಧ್ಯಕ್ಷತೆಯಲ್ಲಿ ಜೆಡಿಎಸ್‌ 19 ಸೀಟ್ ಗೆದ್ದಿದೆ. ಈ ಡಿಕೆ ಶಿವಕುಮಾರ್ ನೇತೃತ್ವದಲ್ಲಿ 136 ಸ್ಥಾನ ಗೆದ್ದಿದೆ. ಬ್ರಿಟಿಷರಿಂದ ಕಾಂಗ್ರೆಸ್ ತೆಗೆಯಲು ಆಗಲಿಲ್ಲ. ನೀನು ಎರಡು ಜನ್ಮ ಎತ್ತಿದರೂ ನಮ್ಮನ್ನ ತೆಗೆಯಲು ಆಗುವುದಿಲ್ಲ ಕುಮಾರಸ್ವಾಮಿ ಎಂದು ಏಕವಚನದಲ್ಲೇ ಹರಿಹಾಯ್ದರು. ಇದನ್ನೂ ಓದಿ: ಲೂಮಿನಲ್ ಟೆಸ್ಟ್‌ನಲ್ಲಿ ʻದಾಸʼನಿಗೆ ಟ್ವಿಸ್ಟ್‌ | ಒಗೆದು ಒಣಹಾಕಿದ್ದ ಬಟ್ಟೆಯಲ್ಲಿ ರಕ್ತದ ಕಲೆ ಪತ್ತೆಯಾಗಿದ್ದು ಹೇಗೆ? ಸಿದ್ದರಾಮಯ್ಯ ಧರ್ಮಪತ್ನಿ ಪಾರ್ವತಿ ಅವರ ಅಣ್ಣ ಅರಿಶಿನ ಕುಂಕುಮಕ್ಕೆ ಜಮೀನು ಕೊಟ್ಟಿದ್ದಾರೆ. ಸಾಮಾನ್ಯ ಜನರು ಅಕ್ಕ-ತಂಗಿಯರಿಗೆ ಜಮೀನು ಕೊಡುತ್ತಾರೆ. ಪಾರ್ವತಿ ಅವರಿಗೆ ಅದೇ ರೀತಿ ಕೊಟ್ಟಿದ್ದಾರೆ. ಅದು ಸಿದ್ದರಾಮಯ್ಯ ಅವರಿಗೆ ಗೊತ್ತಿರಲಿಲ್ಲ. ಡಿನೋಟಿಫೀಕೇಶನ್ ಆದ ಜಮೀನನ್ನು ಕೊಡಿ ಎಂದು ಪಾರ್ವತಿ ಅವರು ಕೇಳಿದ್ದಾರೆ. ಬಳಿಕ ಆ ಜಮೀನಿನ ಬದಲಿಗೆ 14 ಸೈಟ್ ಕೊಟ್ಟಿದ್ದಾರೆ. ನನ್ನಂತವನು ಇದ್ದರೆ ಆ ಹೋರಾಟವೇ ಬೇರೆ ಇತ್ತು. ಇದರಲ್ಲಿ ಏನು ತಪ್ಪಿದೆ? ಸಿದ್ದರಾಮಯ್ಯನವರು ನನ್ನ ಹೆಂಡತಿಗೆ ಜಮೀನು ನೀಡಿ ಎಂದು ಪತ್ರ ಬರೆದಿದ್ದಾರಾ? ಬಸವರಾಜ ಬೊಮ್ಮಯಿ ನಿನ್ನ ಕಾಲದಲ್ಲೇ ಸೈಟ್ ಕೊಡಲಾಗಿದೆ. ನಿಮ್ಮ ತಟ್ಟೆಯಲ್ಲಿ ಹೆಗ್ಗಣಗಳು ಇವೆ. ನಿಮ್ಮ ಕಾಲದಲ್ಲಿ 28 ಹಗರಣಗಳು ಇವೆ ಎಂದು ಕಿಡಿಕಾರಿದರು. Sign in to your account
Username or Email Address


Password

 Remember Me


