ಬೆಂಗಳೂರು: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ(Mangaluru Blast Case) ರೂವಾರಿ ಶಾರೀಕ್‌ಗೆ(Shariq) ಮಂಗಳವಾರ ಶಸ್ತ್ರಚಿಕಿತ್ಸೆ ನಡೆಯಲಿದೆ.ಶಾರೀಕ್‌ಗೆ ಮಂಗಳೂರಿನಲ್ಲಿ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಬೆಂಗಳೂರಿಗೆ(Bengaluru) ಕರೆ ತರಲಾಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ನಾವು ಹಿಂದೂಗಳೇ – ಹುಟ್ಟಿದ್ದು ಹಿಂದೂವಾಗಿ ಸಾಯುವುದು ಹಿಂದೂವಾಗಿಯೇ: ಡಿಕೆಶಿಬಾಂಬ್‌ ಸ್ಫೋಟದ ತೀವ್ರತೆಗೆ ಶಾರೀಕ್‌ನ ಎರಡು ಕೈ ಮತ್ತು ಎದೆ ಭಾಗದಲ್ಲಿ ಗಂಭೀರ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್‌ ಸರ್ಜನ್‌ ಕೆ.ಟಿ ರಮೇಶ್‌ ನೇತೃತ್ವದಲ್ಲಿ ಚಿಕಿತ್ಸೆ ನೀಡಲು ಎನ್‌ಐಎ ಮುಂದಾಗಿದೆ.ಚಿಕಿತ್ಸೆ ನಡೆದು 7 ದಿನದ ಬಳಿಕ ಶಾರೀಕ್‌ ಡಿಸ್ಚಾರ್ಜ್‌ ಆಗುವ ಸಾಧ್ಯತೆಯಿದ್ದು, ನಂತರ ಹೆಚ್ಚಿನ ವಿಚಾರಣೆಯನ್ನು ಎನ್‌ಐಎ ತಂಡ ನಡೆಸಲಿದೆ.
Sign in to your account
Username or Email Address


Password

 Remember Me


