ಕರ್ನಾಟಕ ಕುಳ್ಳ ಖ್ಯಾತಿಯ ನಟ ದ್ವಾರಕೀಶ್ ಅವರಿಗೆ ಬೆಂಗಳೂರು ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇಂದು ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. 57ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆದಿದ್ದು, ಜ್ಞಾನಜ್ಯೋತಿ ಆಡಿಟೋರಿಯಂ ನಲ್ಲಿ ನಡೆದ ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾಲಯದ ಅನುದಾನ ಆಯೋಗದ ಅಧ್ಯಕ್ಷ ಪ್ರೊ.ಎಂ.ಜಗದೀಶ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಭಾಗವಹಿಸಿದ್ರು.ಘಟಿಕೋತ್ಸವದಲ್ಲಿ ಚಿತ್ರ ನಟ ದ್ವಾರಕೀಶ್, ಖ್ಯಾತ ಕಲಾವಿದ ಅಮರನಾಥ್ ಗೌಡ, ಸಮಾಜ ಸೇವಕ ಡಾ.ಟಿ. ಅನಿಲ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. 34337 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 300 ಚಿನ್ನದ ಪದಕ, 73 ನಗದು ಬಹುಮಾನ, 267 ಅಭ್ಯರ್ಥಿಗಳಿಗೆ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದನ್ನೂ ಓದಿ: ಪ್ರೀ ವೆಡ್ಡಿಂಗ್ ಪಾರ್ಟಿಯಲ್ಲಿ ಮಿಂಚಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿಸ್ನಾತಕೋತ್ತರ ಪದವಿ ವಿಭಾಗದಲ್ಲಿ ಕೀರ್ತಿ ನೇಗಿನ್ಹಾಲ್ 7 ಚಿನ್ನದ ಪದಕ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ. ಅರ್ಚನ 7 ಚಿನ್ನದ ಪದಕ, ರಸಾಯನಶಾಸ್ತ್ರ, ಬೆಂಗಳೂರು ವಿವಿ. ಮಯೂರ 6 ಚಿನ್ನದ ಪದಕ, ಸಂಸ್ಕೃತ ವಿಭಾಗ ಬೆಂಗಳೂರು ವಿಶ್ವವಿದ್ಯಾಲಯದಿಂದ ಅತಿ ಹೆಚ್ಚು ಚಿನ್ನದ ಪದಕ ಪಡೆದರು. ಸ್ನಾತಕ ಪದವಿ ವಿಭಾಗದಲ್ಲಿ, ರಾಮ್ ಕುಮಾರ್ ಬಿಎಸ್ಸಿ, 6 ಚಿನ್ನದ ಪದಕ, ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ & ಸೈನ್ಸ್, ಸ್ಪೂರ್ತಿ 6 ಚಿನ್ನದ ಪದಕ, ಬಿಕಾಂ, ಜ್ಞಾನವಿಕಾಸ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ & ಕಾಮರ್ಸ್, ಧನುಷ 5 ಚಿನ್ನದ ಪದಕ, ಬಿಬಿಎ, ಸುರಾನ ಕಾಲೇಜು ಅತಿ ಹೆಚ್ಚು ಪದಕ ಬೇಟೆ ಆಡಿದರು.
Sign in to your account
Username or Email Address


Password

 Remember Me


