ಚಾಮರಾಜನಗರ: ಭಾರತೀಯ ಕ್ರಿಕೆಟ್‌ನಲ್ಲಿ (Cricket) ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ (Reservation) ತರಬೇಕು ಎಂದು ನಟ ಚೇತನ್ (Chetan Ahimsa) ಹೇಳಿಕೆ ನೀಡಿದ್ದಾರೆ.ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿ, 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ. 4 ಪರ್ಸೆಂಟ್‌ನಿಂದ ನಿಂದ 12 ಪರ್ಸೆಂಟ್‌ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್‌ ಏಕಾಂಗಿ ಹೋರಾಟ ವ್ಯರ್ಥ, ಶಕೀಬ್‌ ಆಲ್‌ರೌಂಡರ್‌ ಆಟ – ಬಾಂಗ್ಲಾದೇಶಕ್ಕೆ 1 ವಿಕೆಟ್‌ ರೋಚಕ ಜಯಅಷ್ಟು ಜನಸಂಖ್ಯೆ ಇದ್ರೆ ಮೀಸಲಾತಿ ಹೆಚ್ಚಳ ತಪ್ಪಿಲ್ಲ ಅಂದಿದ್ದಾರೆ. ಇದೇ ವೇಳೆ, ದಕ್ಷಿಣ ಆಫ್ರಿಕಾ ತಂಡದಲ್ಲಿ 6 ಮಂದಿ ಕರಿಯರಿಗೆ ಮೀಸಲಾತಿ ಇದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ಎಸ್ಸಿ, ಎಸ್ಟಿಗೆ ಮೀಸಲಾತಿ (SC ST Reservation) ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತೆ ಅಂತ ಚೇತನ್ ಅಭಿಪ್ರಾಯ ಪಟ್ಟಿದ್ದಾರೆ. ಇದನ್ನೂ ಓದಿ: ಗುಜರಾತ್ ಚುನಾವಣೆ- ತಾಯಿಯ ಆಶೀರ್ವಾದ ಪಡೆದ ಮೋದಿಇಂದು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ (Team India) 186 ರನ್‌ಗಳಿಗೆ ಆಲೌಟ್ ಆಯಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಬಾಂಗ್ಲಾದೇಶ 187 ರನ್ ಗಳಿಸಿ ಒಂದು ವಿಕೆಟ್ ರೋಚಕ ಜಯ ಸಾಧಿಸಿತು.
Sign in to your account
Username or Email Address


Password

 Remember Me


