ಬೆಂಗಳೂರು: 15ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ(Karnataka Graduate Primary Teacher Selection List) ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್‌(High Court) ತಡೆ ನೀಡಿದೆ.ಮೀಸಲಾತಿ(Reservation) ಸಂಬಂಧ ಹಲವು ಅಭ್ಯರ್ಥಿಗಳ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್‌ ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮುಂದಿನ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಅಂತಿಮ ಆಯ್ಕೆ ಪಟ್ಟಿಗೆ ಮುಂದಿನ ವಿಚಾರಣೆವರೆಗೂ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು ವಿಚಾರಣೆಯನ್ನು ಮುಂದೂಡಿದೆ. ಇದನ್ನೂ ಓದಿ: iPhone ತಯಾರಿಸುವ ಕೋಲಾರದ ವಿಸ್ಟ್ರಾನ್‌ ಖರೀದಿಗೆ ಮುಂದಾದ ಟಾಟಾ15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನ.19 ರಂದು ಪ್ರಕಟಿಸಲಾಗಿದ್ದು, ಆ ಪೈಕಿ 13,363 ಅಭ್ಯರ್ಥಿಗಳಷ್ಟೇ ಆಯ್ಕೆ ಆಗಿದ್ದರು. ಉಳಿದ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದ ಕಾರಣ ಅವು ಖಾಲಿ ಉಳಿದಿದ್ದವು.ಅಕ್ಷತಾ ಚೌಗುಲೆ ಸೇರಿದಂತೆ ಇತರೆ 20 ಮಂದಿ ಅಭ್ಯರ್ಥಿಗಳು ಮೀಸಲಾತಿ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ ಎಂದು ಆಕ್ಷೇಪಿಸಿ ಅರ್ಜಿ ಸಲ್ಲಿಸಿದ್ದರು.
Sign in to your account
Username or Email Address


Password

 Remember Me


