ಧಾರವಾಡ: ಶಬರಿಮಲೆಗೆ(Sabarimala) ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಿಂದ ಪಾದಯಾತ್ರೆಗೆ ಹೊರಟ ಮೂವರು ಭಕ್ತರ(Devotees) ಜೊತೆ ಒಂದು ಶ್ವಾನ ಕೂಡಾ ಸೇರಿಕೊಂಡಿದೆ.ನವೆಂಬರ್ 20 ರಂದು ಗ್ರಾಮದಿಂದ ಹೊರಟ ಮಂಜು ಕಮ್ಮಾರ, ರವಿ ಹಾಗೂ ನಾಗನಗೌಡ ಅವರಿಗೆ ಶ್ವಾನ ಧಾರವಾಡ ಬೈಪಾಸ್ ರಸ್ತೆಯಲ್ಲಿ ಸಿಕ್ಕಿದೆ. ಈ ಮೂವರು ಊಟಕ್ಕೆ ಕುಳಿತಾಗ ಶ್ವಾನಕ್ಕೂ ಆಹಾರ ಹಾಕಿದ್ದಾರೆ. ನಂತರ ಇವರು ಅಲ್ಲಿಂದ ಪಾದಯಾತ್ರೆ(Padayatra) ಮುಂದುವರಿಸಿದಾಗ ಅವರ ಹಿಂದೆಯೇ ಶ್ವಾನ ಹೆಜ್ಜೆ ಹಾಕಿದೆ. ಇದನ್ನೂ ಓದಿ: ತನ್ನ ಕೂದಲನ್ನೇ ತಿಂದ ಬಾಲಕಿ – ಸ್ಕ್ಯಾನಿಂಗ್ ರಿಪೋರ್ಟ್ ನೋಡಿ ದಂಗಾದ ವೈದ್ಯರುಮೂವರು ಭಕ್ತರು ಉತ್ತರ ಕನ್ನಡ ಜಿಲ್ಲೆ ದಾಟಿ ಮುಂದಕ್ಕೆ‌‌ ಹೊರಟಿದ್ದಾರೆ. ಶ್ವಾನವನ್ನು ವಾಪಸ್ ಒಡಿಸಲು ಪ್ರಯತ್ನ ಮಾಡಿದ್ದಾರೆ.‌ ಆದರೆ ಎಲ್ಲಾ ಪ್ರಯತ್ನಗಳು ವಿಫಲವಾಗಿದ್ದು ನಾಯಿ ಇವರ ಜೊತೆ ಹೆಜ್ಜೆ ಹಾಕುವುದನ್ನು ಮಾತ್ರ ಬಿಡಲಿಲ್ಲ. ಹೀಗಾಗಿ ಅನಿವಾರ್ಯವಾಗಿ ಇವರೆಲ್ಲ‌‌ರೂ ಶ್ವಾನವನ್ನು ಶಬರಿ‌‌ಮಲೆಯವರೆಗೆ ಕರೆದುಕೊಂಡು ಹೋಗುವ ನಿರ್ಧಾರ ಮಾಡಿದ್ದಾರೆ.ಈಗಾಗಲೇ ರಾಜ್ಯದಲ್ಲಿ 500 ಕಿಲೋ ಮೀಟರ್ ಪಾದಯಾತ್ರೆ ಪೂರ್ಣಗೊಂಡಿದ್ದು, ಕರ್ನಾಟಕ ದಾಟಿದ ಮೇಲೆ‌‌ ಕೇರಳಕ್ಕೆ ಹೋಗಬೇಕಿದೆ.‌ ಅಲ್ಲಿಯವರೆಗೆ ಹೋಗಲು‌ ಇನ್ನು 500 ಕಿಲೋ ಮೀಟರ್ ಯಾತ್ರೆ ಮಾಡಬೇಕಿದೆ.‌
Sign in to your account
Username or Email Address


Password

 Remember Me


