ಚಾಮರಾಜನಗರ: ಪೊಲೀಸ್ ಜೀಪ್‍ನಿಂದ (Police Jeep) ಬಿದ್ದು ಆರೋಪಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸರ (Police) ವಿರುದ್ಧ ಎಫ್‍ಐಆರ್ ದಾಖಲಾಗಿದೆ.ಯಳಂದೂರು ವೃತ್ತದ ಸಿಪಿಐ ಶಿವಮಾದಯ್ಯ, ಮಾಂಬಳ್ಳಿ ಠಾಣೆಯ ಎಸ್‍ಐ ಮಾದೇಗೌಡ, ಪೊಲೀಸ್ ಕಾನ್ಸ್‌ಟೇಬಲ್ ಸೋಮಣ್ಣ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಪೊಲೀಸರು ಮಗನನ್ನು ಹಿಂಸಿಸಿ ಕೊಂದಿದ್ದಾರೆಂದು ಮೃತ ನಿಂಗರಾಜು ತಾಯಿ ಮಹದೇವಮ್ಮ ದೂರು ಕೊಟ್ಟಿದ್ದಾರೆ. ಯಳಂದೂರು ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.ಘಟನೆಯೇನು?: ಅಪ್ರಾಪ್ತ ಬಾಲಕಿ ಅಪಹರಣ ಕೇಸ್‍ಗೆ ಸಂಬಂಧಿಸಿದಂತೆ ನಿಂಗರಾಜು ವಿರುದ್ಧ ಮಾಂಬಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆಗಾಗಿ ಪೊಲೀಸರು ನಿಂಗರಾಜುನನ್ನು ಠಾಣೆಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಜೀಪ್‍ನಿಂದ ನಿಂಗರಾಜು ನೆಗೆದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಜೀಪ್‍ನಿಂದ ನೆಗೆದ ಬಳಿಕ ಗಂಭೀರ ಗಾಯಗಳಾಗಿದ್ದರಿಂದ ಯಳಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲಘಟನೆ ನಂತರ ಪೊಲೀಸರೇ ಮಗ ನಿಂಗರಾಜು ಸಾವಿಗೆ ಕಾರಣ ಎಂದು ಮೃತ ನಿಂಗರಾಜು ತಾಯಿ ಆರೋಪಿಸಿದ್ದರೆ, ನಿನ್ನೆ ಯಳಂದೂರು ಠಾಣೆ ಬಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಇದಾದ ನಂತರ ಕುಟುಂಬಸ್ಥರು ಪೊಲೀಸರ ವಿರುದ್ಧ ದೂರು ದಾಖಲಿಸಿದ್ದಾರೆ. ಈಗ ದೂರಿನನ್ವಯ ಮೂವರು ಪೊಲೀಸರ ವಿರುದ್ಧ ಯಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ನಿನ್ನೆ ಎಸ್ಪಿ ಶಿವಕುಮಾರ್ ಕೂಡ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ಕೊಟ್ಟಿದ್ದರು. ಇದನ್ನೂ ಓದಿ: BMTCಯಿಂದ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ – ಸ್ಮಾರ್ಟ್ ಕಾರ್ಡ್ ಮಾದರಿಯ ಪಾಸ್ ನೀಡಲು ಚಿಂತನೆ
Sign in to your account
Username or Email Address


Password

 Remember Me


