ಕಾರವಾರ: ಮೀನು ತುಂಬಿಕೊಂಡಿದ್ದ ಬುಲೆರೋ ವಾಹನ ಕಾರ್ಮಿಕನ ಮೇಲೆ ಹಾದು ಹೋಗಿ ಸ್ಥಳದಲ್ಲೇ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದ (Karwar) ಬೈತಕೋಲ್‌ನಲ್ಲಿ (Baithkol) ನಡೆದಿದೆ.ಮೃತ ಕಾರ್ಮಿಕನನ್ನು ಹಾವೇರಿ (Haveri) ಮೂಲದ ಹನುಮಂತ್ ವಡ್ಡರ್ (27) ಎಂದು ಗುರುತಿಸಲಾಗಿದ್ದು, ಮುಂದಿನ ತಿಂಗಳು ಕಾರ್ಮಿಕನ (Labour) ಮದುವೆ ಕೂಡ ನಿಶ್ಚಯವಾಗಿತ್ತು. ಕಾರವಾರದ ಬೈತಕೋಲ್‌ನಲ್ಲಿ ಮೀನುಗಾರಿಕಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಬುಧವಾರ ಕೊಪ್ಪಳದ ಐದು ಜನ ಸ್ನೇಹಿತರೊಂದಿಗೆ ಕೆಲಸ ಮುಗಿಸಿ ಬಂದರಿನಲ್ಲಿ ಮಲಗಿದ್ದ.ಇದನ್ನೂ ಓದಿ: ನಾನು ಬಳ್ಳಾರಿ ಹೋಗೋವಾಗ ಪಾದಯಾತ್ರೆ ಮಾಡಿ ಸಿಎಂ ಆದವರು ಮನ:ಶಾಂತಿ ಕಳೆದುಕೊಂಡಿದ್ದಾರೆ: ಜನಾರ್ದನ ರೆಡ್ಡಿಗುರುವಾರ ಮುಂಜಾನೆ ಮೀನು ತುಂಬಿಕೊಂಡಿದ್ದ ಬುಲೆರೋ ವಾಹನ ಹೊರಡುವ ಸಮಯದಲ್ಲಿ ಚಾಲಕ ಈ ಕಾರ್ಮಿಕನನ್ನು ಮಲಗಿರುವುದನ್ನು ನೋಡದೇ ವಾಹನ ಚಲಾಯಿಸಿದ್ದು, ಈತನ ತಲೆಯ ಮೇಲೆ ಹರಿದು ಸ್ಥಳದಲ್ಲೇ ಮೃತಟ್ಟಿದ್ದಾನೆ.ಸದ್ಯ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ರಾಯಚೂರಿನಲ್ಲಿ ಮಹಿಳಾ ಅರ್ಚಕಿ ನೇಣು ಬಿಗಿದುಕೊಂಡು ಆತ್ಮಹತ್ಯೆSign in to your account
Username or Email Address


Password

 Remember Me


