ಕಾರವಾರ: ಶಿರೂರು ಭೂ ಕುಸಿತ ದುರಂತದ (Shiruru LandSlide) ಹಿನ್ನೆಲೆ ನಡೆಯುತ್ತಿದ್ದ ಮೂರನೇ ಹಂತದ ಡ್ರಜ್ಜಿಂಗ್ ಕಾರ್ಯಾಚರಣೆಯನ್ನು (Dregding Operation) ಸ್ಥಗಿತಮಾಡಲಾಗಿದೆ.ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲದ (Ankola) ಶಿರೂರು ಭೂ ಕುಸಿತದ ಹಿನ್ನೆಲೆ ಮೂರನೇ ಹಂತದ ಕಾರ್ಯಾಚರಣೆಯು ನಡೆಯುತ್ತಿತ್ತು. 13 ದಿನ ಪೂರೈಸಿದ ಡ್ರಜ್ಜಿಂಗ್ ಬೋಟ್ ಮೂಲಕ ನಡೆಯುತ್ತಿದ್ದ ಕಾರ್ಯಾಚರಣೆಯನ್ನು ಇಂದು ಸ್ಥಗಿತಮಾಡಲಾಗಿದೆ.ಇದನ್ನೂ ಓದಿ: ಒಳಮೀಸಲಾತಿಗೆ ಆಗ್ರಹಿಸಿ ರಾಯಚೂರು ಬಂದ್: ಬಸ್ ಸಂಚಾರ ಸಂಪೂರ್ಣ ಸ್ಥಗಿತಕಳೆದ 13 ದಿನದಿಂದ ಅಂಕೋಲದ ಗಂಗಾವಳಿ ನದಿಯಲ್ಲಿ ಓಷಿಯನ್ ಕಂಪನಿ ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿತ್ತು. 90 ಲಕ್ಷದ ಮೊತ್ತದಲ್ಲಿ 13 ದಿನ ಕಾರ್ಯಾಚರಣೆ ಪೂರ್ಣಗೊಂಡಿದೆ. 13 ದಿನದ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಅರ್ಜುನ್ ಶವ ಹಾಗೂ ಲಾರಿ ಹೊರತೆಗೆದಿದ್ದು, ನಂತರ ಮನುಷ್ಯನ ಮೂಳೆಗಳು ಹಾಗೂ ಕೆಲವು ವಸ್ತುಗಳನ್ನು ಸಹ ಹೊರತೆಗೆಯಲಾಗಿದೆ.ಇದಾದ ಬಳಿಕ ಗಂಗಾವಳಿ ನದಿಯಲ್ಲಿ ಬಿದ್ದಿದ್ದ ಬೃಹತ್ ಆಲದ ಮರ ಹೊರತೆಗೆಯಲಾಗಿತ್ತು. ಆದರೆ ಇದೀಗ ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ ಮಾಡಲು ನಿರ್ಧರಿಸಿದ್ದಾರೆ. ಇದರ ಬದಲಿಗೆ ಇಂದಿನಿಂದ ಇಬ್ಬರು ಮುಳುಗು ತಜ್ಞರು ಹಾಗೂ ಪೋಕ್ ಲೈನ್ ಮೂಲಕ ಹೋಟೆಲ್ ಕುಸಿದುಹೋದ ಸ್ಥಳದಲ್ಲಿ ನಿಗದಿ ಮಾಡಿದ ಎರಡನೇ ಪಾಯಂಟ್‌ನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.ಭೂಕುಸಿತ ದುರಂತದಲ್ಲಿ ಸತತ 77 ದಿನದ ದೀರ್ಘ ಕಾರ್ಯಾಚರಣೆ ಇದಾಗಿದ್ದು, ಒಟ್ಟು ಮೂರು ಹಂತದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಸದ್ಯ ಸಿಕ್ಕ ಮೂಳೆಗಳ ಡಿ.ಎನ್.ಎ ವರದಿ ಬರಬೇಕಿದ್ದು, ಕಾಣೆಯಾದ ಜಗನ್ನಾಥ್, ಲೋಕೇಶ್ ಶವ ಶೋಧ ನಡೆಯಬೇಕಿದೆ.ಇದನ್ನೂ ಓದಿ: 1 ವರ್ಷ ದೇವಿಯ ಆಶೀರ್ವಾದ ಸಿಗಲಿ ಎನ್ನುತ್ತಾ ಅಧಿಕಾರ ಹಂಚಿಕೆಯ ಸುಳಿವು ನೀಡಿದ್ರಾ? – ಕುತೂಹಲ ಮೂಡಿಸಿದ ಸಿಎಂ ಮಾತುSign in to your account
Username or Email Address


Password

 Remember Me


