ಕೋಲಾರ: ಆತ ಮಗಳನ್ನು (Daughter) ಪ್ರೀತಿಯಿಂದ ಬೆಳೆಸಿದ್ದ. ತನ್ನ ಮಗಳಿಗಾಗಿ ಕೇಳಿದ್ದೆಲ್ಲವನ್ನು ತಂದು ಕೊಡುತ್ತಿದ್ದ ತಂದೆ (Father). ಆದರೂ ಆತನಿಗೆ ಕಾಡಿದ ಅದೊಂದು ಸಾಲದ (Loan) ಬಾಧೆ, ಹೂಡಿಕೆಯಲ್ಲಿನ ನಷ್ಟ ತನ್ನ ಕೈಯಾರೆ ಆಡಿಸಿದ್ದ ಮಗಳನ್ನು ತಾನೇ ಎದೆಗೆ ಬಿಗಿದಪ್ಪಿ ಕೊಂದುಹಾಕಿದ್ದಾನೆ.ನವೆಂಬರ್ 16 ರಂದು ನಡೆದಿದ್ದ ಘಟನೆ, ಗುಜರಾತ್ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ (Techie) ಒಬ್ಬ ತನ್ನ ಮಗಳನ್ನು ಕೊಂದು ತಾನೂ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ ಎಂದುಕೊಂಡಿದ್ದ ಪ್ರಕರಣದ ಅಸಲಿಯತ್ತು ಇದೀಗ ಬಯಲಾಗಿದೆ. ತನ್ನ ಮಗಳನ್ನು ತನ್ನ ಕೈಯಾರೆ ಕೊಂದ ತಂದೆ ಹೇಳಿದ ಕಥೆ ಕೇಳಿದರೆ ಎಂತಹವರಿಗೂ ಕಣ್ಣಾಲೆಗಳು ತುಂಬಿ ಬರುತ್ತವೆ.ಗುಜರಾತ್ ಮೂಲದ ಸಾಪ್ಟ್‌ವೇರ್ ಎಂಜಿನಿಯರ್ ರಾಹುಲ್ ಬೆಂಗಳೂರಿನ ಬಾಗಲೂರಿನಲ್ಲಿ ತಾನು ಪ್ರೀತಿಸಿ ಮದುವೆಯಾಗಿದ್ದ ಭವ್ಯ ಜೊತೆ ರಾಗಾ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ. 5-6 ವರ್ಷಗಳ ದಾಂಪತ್ಯ ಜೀವನಕ್ಕೆ ಸಾಕ್ಷಿ ಎಂಬಂತೆ ರಾಹುಲ್ ಮತ್ತು ಭವ್ಯಾ ದಂಪತಿಗೆ 3 ವರ್ಷದ ಒಂದು ಮುದ್ದಾದ ಹೆಣ್ಣು ಮಗು ಇತ್ತು. ಆಕೆಯ ಹೆಸರು ಜಿಯಾ.2016 ರಿಂದ ಬಿಟ್‌ಕಾಯಿನ್ ಮೇಲೆ ಹೂಡಿಕೆ ಮಾಡಿ ಸಾಕಷ್ಟು ನಷ್ಟ ಅನುಭವಿಸಿದ್ದ ರಾಹುಲ್ ಕಳೆದ ಒಂದೂವರೆ ವರ್ಷಗಳಿಂದ ಕೆಲಸವೂ ಇಲ್ಲದೆ ಕುಳಿತಿದ್ದ. ನವೆಂಬರ್ 15 ರಂದು ಮಗಳನ್ನು ಶಾಲೆಗೆ ಬಿಡಲು ಹೊರಡುವ ವೇಳೆಗೆ ಆತನ ಸಮಸ್ಯೆಗಳೆಲ್ಲಾ ಮನೆ ಬಾಗಿಲಿಗೆ ಬಂದು ನಿಂತಿದ್ದವು. ಸಾಲಗಾರರು ಮನೆಯ ಬಳಿ ಬಂದು ನಿಂತಿದ್ದರು. ತಾನು ನೀಡಿದ್ದ ಸುಳ್ಳು ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಬಂದು ಠಾಣೆಗೆ ಬರುವಂತೆ ಕರೆದಿದ್ದರು. ಇದರ ಜೊತೆಗೆ ತನ್ನ ಪತ್ನಿ ಕೇಳಿದ್ದನ್ನು ಕೊಡಿಸಿ ಸಂತೋಷವಾಗಿಡಬೇಕು ಎನ್ನುವ ಜವಾಬ್ದಾರಿ. ಇಂತಹ ಪರಿಸ್ಥಿತಿಯಲ್ಲಿ ಜೇಬಲ್ಲಿ ಒಂದು ನಯಾಪೈಸೆ ಇಲ್ಲದಿರುವಾಗ ಅಂದು ತನ್ನ ಮಗಳನ್ನು ಶಾಲೆಗೆ ಬಿಟ್ಟು ಬರುವುದಾಗಿ ಹೋದ ರಾಹುಲ್ ವಾಪಾಸ್ ಮನೆಗೆ ಮರಳಲಾಗದ ಸ್ಥಿತಿ ಆತನಿಗೆ ಬಂದಿತ್ತು. ಒಂದು ವೇಳೆ ಮನೆಗೆ ಹೋದರೂ ಅಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದು ಭಾವಿಸಿ, ತನ್ನ ಮುದ್ದಿನ ಮಗಳೊಂದಿಗೆ ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದ.ಸಾಯುವ ನಿರ್ಧಾರ ಮಾಡಿ ಮನೆಯಿಂದ ಹೊರಟ ರಾಹುಲ್ ತನ್ನ ಮಗಳೊಂದಿಗೆ ಸೀದಾ ಹೊಸಕೋಟೆ ಮಾರ್ಗವಾಗಿ ಕೋಲಾರ ತಾಲೂಕು ಕೆಂದಟ್ಟಿ ಗ್ರಾಮದ ಕೆರೆಯ ಬಳಿ ಬಂದು ನಿಂತಿದ್ದ. ಅಷ್ಟೊತ್ತಿಗೆ ಸಂಜೆಯಾಗಿತ್ತು. ತನ್ನ ಮಗಳೊಂದಿಗೆ ರಾಹುಲ್ ಕೆರೆಯಲ್ಲಿ ಮುಳುಗಿ ಸಾಯಲು ನಿರ್ಧರಿಸಿದ್ದ. ಆದರೆ ಮಗಳು ಬದುಕಿ ತಾನು ಸಾಯಬಾರದು ಎಂದು ಮೊದಲು ಮಗಳನ್ನು ಬಿಗಿದಪ್ಪಿಕೊಂಡು ಉಸಿರುಗಟ್ಟಿಸಿ ಸಾಯಿಸಿದ್ದಾನೆ. ನಂತರ ಮಗಳನ್ನು ಎದೆಗಪ್ಪಿಕೊಂಡು ನೀರಿಗೆ ಹಾರಿದ್ದಾನೆ. ಆದರೆ ನೀರು ಆಳವಿರಲಿಲ್ಲ. ಸಾಯಲು ಸಾಧ್ಯವಾಗಿಲ್ಲ. ಅಷ್ಟು ಹೊತ್ತಿಗೆ ರಾಹುಲ್‌ಗೆ ಸಾಯಲು ಧೈರ್ಯ ಬರಲಿಲ್ಲ. ಇದನ್ನೂ ಓದಿ: ಬಾವ್ಲಾ ರ‍್ಯಾಲಿ ವೇಳೆ ಮೋದಿಗೆ ಭದ್ರತಾ ಲೋಪ – ನಿಯಮ ಉಲ್ಲಂಘಿಸಿ ಡ್ರೋನ್ ಹಾರಿಸಿದ ಮೂವರು ವಶಕ್ಕೆಸಾವಿಗೆ ಹೆದರಿ ರಾಹುಲ್ ಮಗಳ ಮೃತದೇಹವನ್ನು ಅಲ್ಲೇ ಬಿಟ್ಟು ಕಾರ್‌ನಲ್ಲಿ ತನ್ನ ಮೊಬೈಲ್, ಪರ್ಸ್, ಎಲ್ಲವನ್ನೂ ಬಿಟ್ಟು, ಅಪರಿಚಿತ ವ್ಯಕ್ತಿಯೊಬ್ಬರ ಸಹಾಯದಿಂದ ಬಂಗಾರಪೇಟೆ ರೈಲ್ವೆ ನಿಲ್ದಾಣಕ್ಕೆ ಡ್ರಾಪ್ ತೆಗೆದುಕೊಂಡು, ರೈಲು ಹತ್ತಿ ಹೊರಟಿದ್ದಾನೆ. ರಾಹುಲ್ ತಮಿಳುನಾಡು, ಆಂಧ್ರ, ಮಹಾರಾಷ್ಟ್ರ, ದೆಹಲಿ, ಹೀಗೆ ರೈಲಿನಲ್ಲಿ 4-5 ರಾಜ್ಯಗಳನ್ನು ಸುತ್ತಾಡಿದ್ದಾನೆ. ರೈಲಿನಲ್ಲಿ ಪ್ರಯಾಣ ಮಾಡುವ ವೇಳೆಯೂ ರೈಲಿನಿಂದ ಹಾರಿ ಸಾಯಲು ಯತ್ನಿಸಿದ್ದಾನೆ. ಆದರೂ ಆತನಿಗೆ ಸಾಯಲು ಧೈರ್ಯ ಸಾಕಾಗಲಿಲ್ಲ. ಈ ವೇಳೆ ತನ್ನ ಹೆಂಡತಿ ಹಾಗೂ ಮನೆಯವರಿಗೆ ಪೋನ್ ಮಾಡಿ ಕಿಡ್ನ್ಯಾಪ್ ಕಥೆ ಕಟ್ಟಿದ್ದಾನೆ. ಆಗ ಇವನಿಗಾಗಿ ಹುಡುಕಾಟ ನಡೆಸಿದ ಪೊಲೀಸರು ರಾಹುಲ್ ಆಂಧ್ರ ಪ್ರದೇಶದಿಂದ ರೈಲಿನಲ್ಲಿ ಬೆಂಗಳೂರಿನತ್ತ ಹೊರಟಿದ್ದಾಗ ಸಿಕ್ಕಿ ಬಿದ್ದಿದ್ದಾನೆ. ಆತನನ್ನು ಪೊಲೀಸರು ಬಂಧಿಸಿ, ಕರೆತಂದು ವಿಚಾರಣೆ ಮಾಡಿದಾಗ ಅಸಲಿ ವಿಷಯ ತಿಳಿದು ಬಂದಿದೆ. ಇದನ್ನೂ ಓದಿ: ಚಾರ್ಮಾಡಿ ಘಾಟಿಯಲ್ಲಿ ಅಂಬುಲೆನ್ಸ್-ಆಟೋ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ
Sign in to your account
Username or Email Address


Password

 Remember Me


