ಮಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಕೆ.ಎಲ್.ರಾಹುಲ್ (KL Rahul) ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subramanya) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಸ್ನೇಹಿತರೊಂದಿಗೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ರಾಹುಲ್‍ ಅವರನ್ನು ದೇವಾಲಯದ ಆಡಳಿತ ಮಂಡಳಿ ಸನ್ಮಾನಿಸಿದೆ. ಮಂಗಳೂರು (Mangaluru) ಮೂಲದ ಕೆ.ಎಲ್. ರಾಹುಲ್ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ಮಹಾಪೂಜೆಯಲ್ಲಿ ಭಾಗಿಯಾಗಿದ್ದಾರೆ. ಇವರನ್ನು ದೇವಳದ ವತಿಯಿಂದ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಭುವನೇಶ್ವರಿ ಭಾವಚಿತ್ರಕ್ಕೆ ಭುಗಿಲೆದ್ದ ವಿವಾದಇತ್ತೀಚೆಗೆ ನಡೆದ ಟಿ-20 ವಿಶ್ವಕಪ್‍ನಲ್ಲಿ ಕೆ.ಎಲ್. ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ವಿಶ್ವಕಪ್ ಮುಗಿದ ಬೆನ್ನಲ್ಲೇ ರಾಹುಲ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.  ಇದನ್ನೂ ಓದಿ: ICC ಮಾಸ್ಟರ್ ಪ್ಲ್ಯಾನ್‌ – ಹೊಸ ಮಾದರಿಯಲ್ಲಿ 2024ರ T20 ವಿಶ್ವಕಪ್
Sign in to your account
Username or Email Address


Password

 Remember Me


