ಬೆಂಗಳೂರು: ನಾಡ ದೇವಿಯ(Nada Devi) ಭಾವಚಿತ್ರ ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ. ನಾಡದೇವಿ ಕನ್ನಡಾಂಬೆಯ ಪ್ರಮಾಣಿತ ಮತ್ತು ಅಧಿಕೃತ ಭಾವಚಿತ್ರಕ್ಕೆ ಸರ್ಕಾರ(Karnataka Government) ಅನುಮೋದನೆ ನೀಡಿದೆ.ಈ ಮೂಲಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿ ನೀಡಿದ್ದ ಶಿಫಾರಸ್ಸುಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.ನೇತೃತ್ವದಲ್ಲಿ ಐವರು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಆಯ್ಕೆ ಮಾಡಿ ಶಿಫಾರಸ್ಸು ಮಾಡುವ ಚಿತ್ರವನ್ನು ಅಂತಿಮಗೊಳಿಸಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಉಪಯೋಗಿಸಲು ಹಾಗೂ ಶಾಲಾ-ಕಾಲೇಜುಗಳ ಗೋಡೆಯ ಮೇಲೆ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ.2/2— Sunil Kumar Karkala (@karkalasunil) November 21, 2022ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಶಾಲಾ-ಕಾಲೇಜುಗಳ ಕಾರ್ಯಕ್ರಮ, ಕೊಠಡಿಗಳಲ್ಲಿ ಇದೇ ಭಾವಚಿತ್ರ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಬೆಂಗಳೂರು ವಿವಿ ಆವರಣದಲ್ಲಿ ಇದೇ ಮಾದರಿಯ ನಾಡದೇವಿ ಪ್ರತಿಮೆ ಸ್ಥಾಪಿಸಲು ಸರ್ಕಾರದಿಂದ ನಿರ್ಧಾರ ಮಾಡಿದೆ.ಹಲವು ಕಾರ್ಯಕ್ರಮಗಳಲ್ಲಿ ಕರ್ನಾಟಕ ರಾಜ್ಯದ ನಾಡದೇವತೆಯ ಭಾವಚಿತ್ರವಾಗಿ ದುರ್ಗಾದೇವಿ, ಸರಸ್ವತಿ ಚಿತ್ರಗಳನ್ನು ಬಳಸಲಾಗುತ್ತಿತ್ತು. ಅಧಿಕೃತ ಚಿತ್ರಕೃತಿ ಘೋಷಣೆಯಾದ ಕಾರಣ ಸರ್ಕಾರ ಒಂದು ನಿರ್ದಿಷ್ಟವಾದ ಚಿತ್ರವನ್ನು ಆಯ್ಕೆ ಮಾಡಲು ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ಶಿಫಾರಸ್ಸಿನಂತೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
Sign in to your account
Username or Email Address


Password

 Remember Me


