ಚಿಕ್ಕಮಗಳೂರು: ಹಣಕಾಸಿನ ವಿಚಾರ (Financial Issue0 ಕ್ಕೆ ಸ್ನೇಹಿತರೇ ಸ್ನೇಹಿತನನ್ನ ಕೊಲೆ ಮಾಡಿರುವ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ (APMC Yard) ನಲ್ಲಿ ನಡೆದಿದೆ.ಮೃತನನ್ನ 30 ವರ್ಷದ ಓಂಕಾರ್ ಎಂದು ಗುರುತಿಸಲಾಗಿದೆ. ಕೊಲೆ ಸಂಬಂಧ ಧನರಾಜ್, ವಿಜಯ್ ಹಾಗೂ ಸುನಿಲ್ ಎಂಬ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಹೇಳದೇ ಎಲ್ಲೋ ಹೋಗಿದ್ದಾಳೆ – ಮಗಳನ್ನೇ ಕೊಂದು ಟ್ರಾಲಿ ಬ್ಯಾಗ್‍ನಲ್ಲಿ ಶವ ತುಂಬಿ ಎಸೆದ ತಂದೆತಲೆಮರೆಸಿಕೊಂಡಿರುವ ಮತ್ತೊಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ನಿನ್ನೆ ರಾತ್ರಿ 10.30ರ ಸುಮಾರಿಗೆ ಮನೆಯಲ್ಲಿದ್ದ ಓಂಕಾರನನ್ನು ಸ್ನೇಹಿತರೇ ಕರೆದುಕೊಂಡು ಬಂದಿದ್ದರು. ಎಪಿಎಂಸಿ ಯಾರ್ಡ್ ನಲ್ಲಿ ಮಾತುಕತೆ ಮಾಡುವ ವೇಳೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.ಆರೋಪಿಗಳು ಹಾಗೂ ಕೊಲೆಯಾದ ಓಂಕಾರ ಎಲ್ಲರೂ ಸ್ನೇಹಿತರಾಗಿದ್ದು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಹಣಕಾಸಿನ ವಿಚಾರದಲ್ಲಿ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Sign in to your account
Username or Email Address


Password

 Remember Me


