ಮಡಿಕೇರಿ: ವಯನಾಡು ಭೂಕುಸಿತ (Wayanad landslides) ದುರಂತದಲ್ಲಿ ನಾಪತ್ತೆಯಾಗಿದ್ದ ಕೊಡಗಿನ (Kodagu), ನೆಲ್ಯಹುದಿಕೇರಿ ಮೂಲದ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರ ಮೃತದೇಹಗಳು ಪತ್ತೆಯಾಗಿವೆ.ಕುಶಾಲನಗರ ತಾಲ್ಲೂಕಿನ ನಲ್ವತ್ತೇಕರೆ ನಿವಾಸಿ ಪೊನ್ನಮ್ಮ ಎಂಬವರ ಮಗಳು ದಿವ್ಯಾ (35) ಅವರನ್ನು ಚೂರಲ್ ಮಲೈಗೆ ಮದುವೆ ಮಾಡಿ ಕೊಡಲಾಗಿತ್ತು. ಭೂಕುಸಿತದ ಬಳಿಕ ದಿವ್ಯಾ ಸೇರಿದಂತೆ ಕುಟುಂಬದ 9 ಮಂದಿ ನಾಪತ್ತೆಯಾಗಿದ್ದರು. ಮಗಳು ಹಾಗೂ ಕುಟುಂಬಸ್ಥರನ್ನು ಹುಡುಕಿಕೊಡುವಂತೆ ಪೊನ್ನಮ್ಮ ಸರ್ಕಾರಕ್ಕೆ ಮನವಿ ಮಾಡಿದ್ದರು.ಕುಟುಂಬದ 9 ಮಂದಿಯ ಪೈಕಿ 8 ಮಂದಿಯ ಮೃತದೇಹ ಪತ್ತೆಯಾಗಿದೆ. ದಿವ್ಯಾ ಹಾಗೂ ಮಗ ಲಕ್ಷಿತ್ ಮೃತದೇಹ ಒಟ್ಟಿಗೆ ಪತ್ತೆಯಾಗಿವೆ. ದಿವ್ಯಾ ವಯನಾಡುವಿನ ಮಿಮ್ಸ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.Sign in to your account
Username or Email Address


Password

 Remember Me


