ಚಿಕ್ಕೋಡಿ: ಕಾಮಗಾರಿ ಮಾಡುತ್ತಿದ್ದ ವೇಳೆ ಕರೆಂಟ್‌ ತಗುಲಿ ಇಬ್ಬರು ಕಾರ್ಮಿಕರು (Labor) ಮೃತಪಟ್ಟಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದ್ದು, ಈ ದುರಂತಕ್ಕೆ ಹೆಸ್ಕಾಂ (Hescom) ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹನಮಂತ ಮಗದುಮ್(34) ಹಾಗೂ ಅಶೋಕ್ ಮಾಳಿ(36) ಮೃತ ದುರ್ದೈವಿಗಳು. ಹನಮಂತ ಹಾಗೂ ಅಶೋಕ್ ಇಬ್ಬರು ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ನೇಮಕವಾಗಿದ್ದರು. ಮೃತ ಹನಮಂತ ಹಾಗೂ ಅಶೋಕ್ ರಾಯಭಾಗ ತಾಲೂಕಿನ ಹಿಡಕಲ್ ಗ್ರಾಮದ ನಿವಾಸಿಗಳಾಗಿದ್ದರು.ಬಳ್ಳಿಗೇರಿ ಗ್ರಾಮದಿಂದ ದೇವನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಕಾಮಗಾರಿ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಈ ಇಬ್ಬರು ಕಾರ್ಮಿಕರು ವಿದ್ಯುತ್ ಕಂಬ ಏರಿ ದುರಸ್ತಿ ಮಾಡುತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಗಂಡಸರ ಸುದ್ದಿ ನನಗೆ ಬೇಡಪ್ಪ – ಅಶ್ವಥ್ ನಾರಾಯಣಗೆ ಡಿಕೆಶಿ ತಿರುಗೇಟುಘಟನೆಗೆ ಸಂಬಂಧಿಸಿ ಅಲ್ಲಿನ ಸ್ಥಳೀಯರು ಸ್ಟೇಷನ್ ಆಪರೇಟರ್ ನಿರ್ಲಕ್ಷ್ಯಕ್ಕೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಪರೀಕ್ಷಾ ನಿಯಮ ಪಾಲಿಸದ 2 ಪರೀಕ್ಷಾ ಕೇಂದ್ರ ರದ್ದು
Sign in to your account
Username or Email Address


Password

 Remember Me


