ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂದುವರಿದ ಧಾರಾಕಾರ ಮಳೆ ಹಿನ್ನೆಲೆ ನಿಯಂತ್ರಣ ತಪ್ಪಿ ಉಕ್ಕಿಹರಿಯುವ ಮಾರ್ಕಂಡೇಯ ನದಿಗೆ (Markandeya River) ಬೈಕ್ ಬಿದ್ದಿರುವ ಕಂಗ್ರಾಳಿ ಬಳಿಯ ಮಾರ್ಕಂಡೇಯ ನದಿಯಲ್ಲಿ ಘಟನೆ ನಡೆದಿದೆ.ಬೆಳಗಾವಿ ತಾಲೂಕಿನ ಅಲತ್ತಗಾ ಗ್ರಾಮದ ಓಂಕಾರ ಅರುಣ ಪಾಟೀಲ (23), ನಾಪತ್ತೆಯಾದವ, ಜ್ಯೋತಿನಾಥ್ ಪಾಟೀಲ ಈಜಿ ದಡ ಸೇರಿದವ. ಬೈಕ್‌ನಲ್ಲಿ ಹೋಗುತ್ತಿದ್ದ ಸಹೋದರರ ಪೈಕಿ ಓರ್ವನ ರಕ್ಷಣೆ ಮಾಡಿದ್ದು ಮತ್ತೋರ್ವ ನಾಪತ್ತೆ ಆಗಿದ್ದಾನೆ. ಸದ್ಯ ನಾಪತ್ತೆಯಾದ ಮತ್ತೋರ್ವ ಸಹೋದರನ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು ಬೆಳಗಾವಿ ತಾಲೂಕಿನ ಕಂಗ್ರಾಳಿ ಬಳಿಯಿರುವ ಮಾರ್ಕಂಡೇಯ ನದಿಯಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ವಯನಾಡು ಭೂಕುಸಿತಕ್ಕೆ ಗೋ ಹತ್ಯೆ ಕಾರಣ – ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆಸೋಮವಾರ (ಆ.4) ಶ್ರಾವಣ ಅಮಾವಾಸ್ಯೆ ಹಿನ್ನೆಲೆ ಕಟ್ಟಿಂಗ್ ಮಾಡಿಸಿಕೊಳ್ಳಲು ಬೆಳಗಾವಿಗೆ ಬರುತ್ತಿದ್ದಾಗ ಬೈಕ್ ಸವಾರನ ನಿಯಂತ್ರಣ ತಪ್ಪಿ ಹರಿಯುವ ನೀರಿನಲ್ಲಿ ಬೈಕ್ ಬಿದ್ದಿದೆ. ಈ ವೇಳೆ ಜ್ಯೋತಿನಾಥ ಪಾಟೀಲ ಅಪಾಯದಿಂದ ಪಾರಾಗಿದ್ದು ಈಜಿಕೊಂಡು ದಡ ಸೇರಿದ್ದು ಮತ್ತೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಶೋಧ ಕಾರ್ಯಾಚರಣೆ ಮುಂದಯವರಿದಿದೆ. ಸ್ಥಳಕ್ಕೆ ಬೆಳಗಾವಿ ನಗರ ಡಿಸಿಪಿ ಪಿ.ವಿ ಸ್ನೇಹಾ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕಾಕತಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: 104 ಸಂಭವನೀಯ ಭೂಕುಸಿತ, ಪ್ರವಾಹ ಪ್ರದೇಶಗಳ ಗುರುತು – 2,995 ಕುಟುಂಬಗಳ ಸ್ಥಳಾಂತರಕ್ಕೆ ಪ್ಲ್ಯಾನ್ Sign in to your account
Username or Email Address


Password

 Remember Me


