ಬೆಂಗಳೂರು: ಎಲೆಕ್ಷನ್ ಸನಿಹದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ(Karnataka Government) ಗುಡ್ ನ್ಯೂಸ್ ಕೊಟ್ಟಿದೆ. ಸರ್ಕಾರಿ ನೌಕರರ ಬಹಳ ದಿನಗಳಿಂದ ಎದಿರು ನೋಡುತ್ತಿದ್ದ ಏಳನೇ ವೇತನ ಆಯೋಗದ(7th Pay Commission) ರಚನೆ ಮಾಡಿದೆ.ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದಲ್ಲಿ ಆಯೋಗದ ಸಮಿತಿ ರಚಿಸಲಾಗಿದೆ. ಈ ಆಯೋಗ ರಚನೆಯಿಂದ 5.40 ಲಕ್ಷ ಸರ್ಕಾರಿ ನೌಕರರು, 3 ಲಕ್ಷ ನಿಗಮ ಮಂಡಳಿ, ಪ್ರಾಧಿಕಾರ, ವಿವಿಗಳ ಸಿಬ್ಬಂದಿ ಮತ್ತು 4 ಲಕ್ಷ ನಿವೃತ್ತ ನೌಕರರಿಗೆ ಅನುಕೂಲ ಆಗಲಿದೆ. ಇದನ್ನೂ ಓದಿ:  ನನ್ನ ತೇಜೋವಧೆ ಆಗ್ತಿದೆ – ವಿವಾದಿತ ಹೇಳಿಕೆಯನ್ನು ಹಿಂಪಡೆದ ಸತೀಶ್ ಜಾರಕಿಹೊಳಿಈ ಸಂಬಂಧ ಸರ್ಕಾರ ಇನ್ನಷ್ಟೇ ಅಧಿಸೂಚನೆ ಹೊರಡಿಸಬೇಕಿದೆ. ಈ ಆಯೋಗ ಫೆಬ್ರವರಿ ಹೊತ್ತಿಗೆ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ ಇದೆ. ಎಲೆಕ್ಷನ್‍ಗೂ ಮೊದಲೇ ಏಳನೇ ವೇತನ ಆಯೋಗದ ಅನ್ವಯ ವೇತನ ಪರಿಷ್ಕರಣೆ ಆಗುವ ಸಂಭವ ಇದೆ.
Sign in to your account
Username or Email Address


Password

 Remember Me


