ರಾಯಚೂರು: ವೀರಶೈವ (Veerashaiva), ಲಿಂಗಾಯತ (Lingayat) ಅಂತಾ ಪ್ರತ್ಯೇಕ ಧರ್ಮ ಅಥವಾ ಒಂದು ಜಾತಿಯಿಲ್ಲ. ವೀರಶೈವ, ಲಿಂಗಾಯತ ಎರಡೂ ಒಂದೇ ಅಂತಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಶಂಕರ ಮಹದೇವ ಬಿದರಿ ಸ್ಪಷ್ಟಪಡಿಸಿದ್ದಾರೆ.ರಾಯಚೂರಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ (All India Veerashaiva Lingayat Mahasabha) ನಡೆದ ಬಯಲು ಸಿರಿ ಬೆಳಕು ಪ್ರಶಸ್ತಿ ಪ್ರದಾನ ಹಾಗೂ ಮಹಿಳಾ ಕಾನೂನು (Women’s Law) ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಪತಿಯ ಕಿರುಕುಳ – ಪ್ರೀತಿಸಿ ಮದುವೆಯಾಗಿದ್ದ ತುಂಬು ಗರ್ಭಿಣಿ ನೇಣಿಗೆ ಶರಣುವೀರಶೈವ, ಲಿಂಗಾಯತ ಎರಡೂ ಒಂದೇ, ವೀರಶೈವ ಮಹಾಸಭೆಯಲ್ಲಿ ಇತ್ತೀಚೆಗೆ ವಿನಂತಿ ಮಾಡಿಕೊಂಡು ಲಿಂಗಾಯತ ಪದವನ್ನ ಕೂಡಿಸುವ ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಹನಿಟ್ರ್ಯಾಪ್ ಕೇಸ್ – ಪ್ರೀತ್ಸೋ ನೆಪದಲ್ಲಿ ಮಾಯಾಂಗನೆ ಹನಿಟ್ರ್ಯಾಪ್ ಖೆಡ್ಡಕ್ಕೆ ಬಿದ್ದ ಯುವಕಒಳ್ಳೆಯ ರೀತಿಯಲ್ಲಿ ಒಗ್ಗಟ್ಟಾಗಿದ್ದ ನಮ್ಮ ಸಮಾಜದಲ್ಲಿ ಕೆಲವರು ಚಿಲ್ಲರೆ ವಿಚಾರಗಳು ಹಾಗೂ ತಾತ್ವಿಕ ವಿಚಾರಗಳನ್ನ ತಂದು ಸಮಾಜ ಒಡೆಯುವಂತ ಪ್ರಯತ್ನ ನಡೆಯಿತು. ಇದಕ್ಕಾಗಿ ಮಹಾಸಭಾದಲ್ಲಿ ಲಿಂಗಾಯತ ಪದ ಸೇರಿಸಿದ್ದೇವೆ. ವೀರಶೈವ ಲಿಂಗಾಯತ ಸಮಾಜವನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ. ಆದರೆ ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಅಭಿವೃದ್ಧಿ ಹೊಂದಲು ಪ್ರಯತ್ನಿಸಬೇಕಿದೆ. ಎಲ್ಲರ ಒಗ್ಗಟ್ಟಿನಿಂದ ಮಾತ್ರ ಸಮಾಜ ಉಳಿಯಲು ಸಾಧ್ಯ ಎಂದು ಸಲಹೆ ನೀಡಿದ್ದಾರೆ.
Sign in to your account
Username or Email Address


Password

 Remember Me


