ಮೈಸೂರು: ಅಪಘಾತದಲ್ಲಿ ಕೇಂದ್ರ ಇಂಟೆಲಿಜೆನ್ಸ್ ಬ್ಯೂರೋ (Intelligence Bureau) ನಿವೃತ್ತ ಅಧಿಕಾರಿ ಮೃತಪಟ್ಟಿರುವ ಘಟನೆ ಮೈಸೂರಿನ ಮಾನಸಗಂಗೋತ್ರಿ (Manasagangothri) ಕ್ಯಾಂಪಸ್‍ನಲ್ಲಿ ನಡೆದಿದೆ.ಆರ್.ಎಸ್. ಕುಲಕರ್ಣಿ (83) ಅಪಘಾತದಲ್ಲಿ ಮೃತಪಟ್ಟ ಇಂಟೆಲಿಜೆನ್ಸ್ ಬ್ಯೂರೋದ ನಿವೃತ್ತ ಅಧಿಕಾರಿ. ಮಾನಸ ಗಂಗೋತ್ರಿ ಕ್ಯಾಂಪಸ್‍ನ ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ಕುಲಕರ್ಣಿ ಅವರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಅಪಘಾತ ಮಾಡಿ ಕೊಲೆ ಮಾಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಇದನ್ನೂ ಓದಿ: ಚಂದ್ರು ಕಾರು ಅಪಘಾತ ಆಗಿರೋದು ನಿಜ: FSL ತಜ್ಞತೀವ್ರ ಗಾಯಗೊಂಡಿದ್ದ ಕುಲಕರ್ಣಿ ಅವರನ್ನು ತಕ್ಷಣ ಆಸ್ಪತ್ರೆಗೆ (Hospital) ದಾಖಲಿಸಿದರೂ ಬದುಕುಳಿದಿಲ್ಲ. ಕುಲಕರ್ಣಿಯವರು ಸೇವೆಯಿಂದ ನಿವೃತ್ತರಾಗಿ 23 ವರ್ಷವಾಗಿತ್ತು. ಮೇಲ್ನೋಟಕ್ಕೆ ಇದೊಂದು ಹಿಟ್ ಅಂಡ್ ರನ್ ಪ್ರಕರಣವಾಗಿದ್ದು, ನಂಬರ್ ಪ್ಲೇಟ್ ಇಲ್ಲದ ಕಾರು ಇವರಿಗೆ ಡಿಕ್ಕಿಯಾಗಿದೆ. ಜಯಲಕ್ಷ್ಮೀ ಪುರಂ ಪೊಲೀಸ್ (Police) ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನನ್ನ ಮಗನ ಮರ್ಮಾಂಗ ಊದಿಕೊಂಡಿತ್ತು, ಅದಕ್ಕೆ ಇಂಜೆಕ್ಷನ್ ಮಾಡಿದ್ದಾರೆ- ಮೃತ ಚಂದ್ರು ತಂದೆ ಗಂಭೀರ ಆರೋಪ
Sign in to your account
Username or Email Address


Password

 Remember Me


