ಬೆಳಗಾವಿ: 132 ಸಮಾಜ ಘಾತುಕ ಕೃತ್ಯಗಳಲ್ಲಿ (Crime) ಭಾಗಿಯಾಗಿದ್ದ 12 ಜನ ಆರೋಪಿಗಳನ್ನ (Accused) ಬೆಳಗಾವಿ (Belagavi) ಎಸ್ಪಿ ಡಾ.ಸಂಜೀವ್ ಪಾಟೀಲ್ ಗಡಿಪಾರು ಮಾಡಿದ್ದಾರೆ.ಬೆಳಗಾವಿ ಜಿಲ್ಲೆಯ ಅಥಣಿ ಉಪವಿಭಾಗದಲ್ಲಿ ಮದಬಾವಿ ಗ್ರಾಮದ ಮೀರಸಾಬ್ ಬಾಗಡಿ, ರಡ್ಡೇರಹಟ್ಟಿ ಗ್ರಾಮದ ಸದಾಶಿವ ಗೊಡಮಾಲೆ, ಉಗಾರ ಬಿ.ಕೆ.ಗ್ರಾಮದ ಮಹಾದೇವ ಕಾಂಬಳೆ, ಕೋಹಳಿ ಗ್ರಾಮದ ರವಿ ಶಿಂಗೆ, ಹಾಲಳ್ಳಿ ಗ್ರಾಮದ ಕಾಶಪ್ಪ ಕಾರಿಕೊಳ್ಳ, ಕಮರಿ ಗ್ರಾಮದ ಪ್ರದೀಪ್ ಕರಡಿ, ಕುಡಚಿ ಗ್ರಾಮದ ಅಲಿಮುರ್ತುಜಾ ಚಮನಮಲೀಕ್, ಸಾಹೇಬ್‌ಹುಸೇನ್ ಚಮನಮಲೀಕ್, ನಜೀರ್ ಹುಸೇನ್ ತಾಂಬೋಳಿ, ಮೊರಬ ಗ್ರಾಮದ ಬಾಬಾಸಾಬ್ ನದಾಫ್, ಚಿಂಚಲಿ ಗ್ರಾಮದ ಲಕ್ಷ್ಮಣ ಪೋಳ, ಅಲ್ತಾಫ್ ಹುಸೇನ್ ಮೇವಗಾರ ಎಂಬ ಆರೋಪಿಗಳನ್ನು ಗಡಿಪಾರು ಮಾಡಲಾಗಿದೆ. ಇದನ್ನೂ ಓದಿ: ಗೆಹ್ಲೋಟ್‌ ಹೊಗಳಿದ ಮೋದಿ – ಲಘುವಾಗಿ ಪರಿಗಣಿಸಬಾರದು ಎಂದು ಎಚ್ಚರಿಸಿದ ಪೈಲಟ್‌ಈ 12 ಜನರು 132 ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
Sign in to your account
Username or Email Address


Password

 Remember Me


