ಕಾರವಾರ/ನವದೆಹಲಿ: ಶಿರೂರು ಗುಡ್ಡ ಕುಸಿತ (Shirur Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwara Hegde Kageri) ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಭೂಕುಸಿತವಾಗಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯೇ ಕಾರಣ. ಶಿರೂರು ಭೂಕುಸಿತದಲ್ಲಿ ಮೃತರಾದವರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಡಿ ಪರಿಹಾರ ನೀಡಬೇಕು. NDRFನ ಮತ್ತೊಂದು ತಂಡವನ್ನು ಶಿರೂರಿಗೆ ಶೋಧ ಕಾರ್ಯ ನಡೆಸಲು ಕಳುಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Shirur Landslide; ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಿರ್ಧಾರ: ಈಶ್ವರ್ ಮಲ್ಪೆವಯನಾಡಿನಲ್ಲಿ ಆಗಿರುವಂತೆ ಶಿರೂರಿನಲ್ಲಿ ಸಹ ಗುಡ್ಡ ಕುಸಿತವಾಗಿದೆ. ಅಭಿವೃದ್ಧಿ ಆಗಬೇಕು. ಅಭಿವೃದ್ಧಿ ಮಾಡುವಾಗ ವೈಜ್ಞಾನಿಕ ಅಧ್ಯಯನದ ವರದಿ ಮೂಲಕ ಅಭಿವೃದ್ಧಿ ಮಾಡಬೇಕು. ಪಶ್ಚಿಮಘಟ್ಟ ಬಹಳ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಅದರ ಕ್ಯಾರಿಂಗ್ ಕ್ಯಪಾಸಿಟಿ ಅಧ್ಯಯನ ಆಗುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡುತ್ತಿರುವ ಕೆಲಸ ಅವೈಜ್ಞಾನಿಕವಾಗಿದೆ. ಅವೈಜ್ಞಾನಿಕವಾಗಿರುವುದರಿಂದಲೇ ಗುಡ್ಡ ಕುಸಿದಿದೆ ಎಂಬುದಾಗಿ ಹೇಳಲಾಗುತ್ತಿದೆ ಎಂದು ಸಂಸತ್‌ನಲ್ಲಿ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: Landslide In Karnataka: ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ತಪ್ಪಿದ ಭಾರೀ ಅನಾಹುತಮುಂದಿನ ದಿನಗಳಲ್ಲಿಯಾದರೂ ಕಾಮಗಾರಿ ಮಾಡುವಾಗ ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಆಗಬೇಕು ಎಂದು ಸಂಸತ್‌ನಲ್ಲಿ ಕಾಗೇರಿ, ಜಿಲ್ಲೆಯ ಸಮಸ್ಯೆ ಕುರಿತು ಸಂಸತ್ ಗಮನಕ್ಕೆ ತಂದಿದ್ದಾರೆ.Sign in to your account
Username or Email Address


Password

 Remember Me


