ರಾಮನಗರ: ಬಂಡೇಮಠದ (Bande Mutt)  ಬಸವಲಿಂಗ ಸ್ವಾಮೀಜಿ (Basavalinga Swamiji) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸರ (Police) ವಶಕ್ಕೆ ನೀಡಲಾಗಿದೆ.ಇಂದು ಮಾಗಡಿ 1ನೇ ಜೆಎಂಎಫ್‍ಸಿ ನ್ಯಾಯಾಲಯದ (JMFC Court) ನ್ಯಾಯಾಧೀಶರಾದ ಧನಲಕ್ಷ್ಮೀ ಎದುರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಕೇಳಿದ್ದರು. ಪೊಲೀಸರ ಬೇಡಿಕೆಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಲು ಸಮ್ಮತಿ ನೀಡಿದ್ದಾರೆ. ನವೆಂಬರ್ 5 ರವರೆಗೂ ಆರೋಪಿಗಳು ಪೊಲೀಸರ ವಶದಲ್ಲಿದ್ದು ನಂತರ ಅವರನ್ನು ಮತ್ತೊಮ್ಮೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಬಂಡೆಮಠ ಶ್ರೀ ಆತ್ಮಹತ್ಯೆ ಪ್ರಕರಣ- ನೀಲಾಂಬಿಕೆ ಮೊಬೈಲ್‍ನಿಂದ ನಿತ್ಯ ಮೆಸೇಜ್!ವಿಚಾರಣೆ ಅಗತ್ಯವಿದೆ ಎಂದಾದರೆ ಪೊಲೀಸರು ಅವರನ್ನು ನವೆಂಬರ್ 5 ರ ಬಳಿಕ ಮತ್ತೆ ವಶಕ್ಕೆ ಕೇಳುವ ಸಾಧ್ಯತೆ ಇದೆ. ಸದ್ಯ ಮೃತ ಬಸವಲಿಂಗ ಸ್ವಾಮೀಜಿ ತಮ್ಮ ಡೆತ್‍ನೋಟ್‍ನಲ್ಲಿ ಉಲ್ಲೇಖಿಸಿರುವ ಇತರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಇಸ್ಪೀಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು
Sign in to your account
Username or Email Address


Password

 Remember Me


