– ಎಲ್ಲಾ ಪಕ್ಷದ ಒಳ ಒಪ್ಪಂದದ ಗಿರಾಕಿಗಳು ಹೊರಬಂದು ಹೊಸ ಪಕ್ಷ ಕಟ್ಟಲಿವಿಜಯಪುರ: ಮೈಸೂರಿನ ಮುಡಾ ಹಗರಣ (MUDA Scam) ಸಿಬಿಐ ತನಿಖೆ ಮಾಡಿದರೆ ಯಡ್ಡಿಯೂರಪ್ಪ (B.S.Yediyurappa) ಇದ್ದಾನೋ, ವಿಜಯೇಂದ್ರ (B.Y Vijayendra) ಇದ್ದಾನೋ ಅಥವಾ ಯಡ್ಡಿಯೂರಪ್ಪರ ಅಕ್ಕನ ಮಕ್ಕಳು ಇದ್ದಾರೋ ಎಂಬುದು ಬಹಿರಂಗವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಏಕವಚನದಲ್ಲೇ ಸ್ವಪಕ್ಷಿಯರ ವಿರುದ್ಧ ಹರಿಹಾಯ್ದಿದ್ದಾರೆ.ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ನೀಡಿದರೆ ಮಾತ್ರ ಸತ್ಯ ಬಹಿರಂಗವಾಗಲಿದೆ. ಹೀಗಾಗಿ ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕು. ಈ ಪ್ರಕರಣ ಸರಿಯಾಗಿ ತನಿಖೆಯಾದ್ರೆ ಸಿಎಂ ಸಿದ್ದರಾಮಯ್ಯ ದಲಿತ ಹಾಗೂ ಕಾಂಗ್ರೆಸ್ ವಿರೋಧಿ ಎಂಬುದು ಬಹಿರಂಗವಾಗುತ್ತದೆ ಎಂದು ಅವರು ಹೇಳಿದ್ದಾರೆ.ಮುಂದುವರಿದು ಮಾತನಾಡಿದ ಅವರು, ರಾಜು ಯಾರ ಶಿಷ್ಯ ಎಂದು ವಿಜಯೇಂದ್ರ ಹೇಳಬೇಕು. ಲೋಕಸಭೆ ಚುನಾವಣೆ ವೇಳೆ ರಾಜು ಯಾಕೆ ಕಾಂಗ್ರೆಸ್ ಸೇರಿದ್ದು? ರಾಜಕೀಯ ಹೊಂದಾಣಿಕೆಗಾಗಿ ಮಾಡಿದ ತಂತ್ರ ಇದು. ಮೈಸೂರು, ಚಾಮರಾಜನಗರ ಗೆಲ್ಲಲು ಕಾಂಗ್ರೆಸ್‌ಗೆ ಪರೋಕ್ಷವಾಗಿ ಬೆಂಬಲ ನೀಡಲು ಸೇರಿದ್ದು. ಅಲ್ಲದೇ ಸಿದ್ದರಾಮಯ್ಯ ನೇತೃತ್ವದಲ್ಲಿ ಇದನ್ನೆಲ್ಲ ಮುಚ್ಚಿ ಹಾಕಲು ಕಾಂಗ್ರೆಸ್ ಸೇರಿದ್ದಾನೆ. ಇದು ರಾಜು ಬಿಜೆಪಿಯಲ್ಲಿದ್ದಾಗಲೇ ಆದ ಹಗರಣ ಎಂದು ಅವರು ಆರೋಪಿಸಿದ್ದಾರೆ.ಮುಡಾ ಹಗರಣದಲ್ಲಿ ಕೇವಲ ಸಿಎಂ ಸಿದ್ದರಾಮಯ್ಯ ಅವರನ್ನು ಮಾತ್ರ ಟಾರ್ಗೆಟ್ ಮಾಡಿದರೆ ಸಾಲದು, ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪ, ಸಿದ್ಧರಾಮಯ್ಯ, ಡಿಕೆಶಿ ಮತ್ತು ಜಮೀರ್ ಅಹ್ಮದ್ ಹೊಂದಾಣಿಕೆ ರಾಜಕಾರಣ ಮಾಡಿದವರೇ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.ಮೂರು ರಾಜಕೀಯ ಪಕ್ಷಗಳಲ್ಲಿಯೂ ಒಳ ಒಪ್ಪಂದದ ಗಿರಾಕಿಗಳಿದ್ದಾರೆ. ಅವರೆಲ್ಲ ಹೊರಗೆ ಬಂದು ಒಂದು ಹೊಸ ಪಕ್ಷ ಕಟ್ಟಬೇಕು. ಅದಕ್ಕೆ ಒಳ ಒಪ್ಪಂದದ ಪಾರ್ಟಿ ಎಂದು ಹೆಸರಿಡಬೇಕು. ಆಗ ಉಳಿದ ಪಕ್ಷಗಳು ಸರಿ ಆಗುತ್ತವೆ ಎಂದು ಅವರು ವ್ಯಂಗ್ಯವಾಡಿದ್ದಾರೆ.ಈಗ ಎಲ್ಲಾ ಸೋತ ಎಂಪಿಗಳು ಮಾತನಾಡಲು ಶುರು ಮಾಡಿದ್ದಾರೆ. ಪಾಪಾ ಈಶ್ವರಪ್ಪನವರಿಗೂ ಅನ್ಯಾಯ ಮಾಡಿದ್ರೂ. ಅವರು ಏನು ತಪ್ಪು ಮಾಡಿದ್ದರು ಎಂದು ಅವರು ಇದೇ ವೇಳೆ ಹೇಳಿದ್ದಾರೆ.Sign in to your account
Username or Email Address


Password

 Remember Me


