ಇದು ಹಾಸನ ಜಿಲ್ಲೆಯ ಒಂದು ತಾಲೂಕು ಹಾಗೂ ತಾಲೂಕು ಕೇಂದ್ರ. ಹಾಸನ, ಆಲೂರು,ಹಾಗೂ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲ್ಲೋಕುಗಳನ್ನು ಮತ್ತು ಕೊಡಗು ಜಿಲ್ಲೆಯ ಸೋಮವಾರಪೇಟೆ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಿಂದ ಸುತ್ತುವರೆದಿದೆ. ಕೊಣನೂರು ಹ್ಯಾಂಗಿಂಗ್ ಬ್ರಿಡ್ಜ್, ರಾಮನಾಥಪುರದ ದೇಗುಲಗಳಲ್ಲಿ ಗೊರೂರು ಅಣೆಕಟ್ಟು, ಶೆಟ್ಟಿಹಳ್ಳಿ ಚರ್ಚ್, ನರಸಿಂಹಸ್ವಾಮಿ, ಸುಬ್ರಹ್ಮಣ್ಯ ದೇಗುಲ ಇಲ್ಲಿನ ಆಕರ್ಷಣೀಯ ಪ್ರವಾಸಿ ತಾಣಗಳು. ಭತ್ತ, ತೆಂಗು, ಅಡಿಕೆ, ತಂಬಾಕು, ಆಲೂಗೆಡ್ಡೆ ಈ ತಾಲೂಕಿನ ಪ್ರಮುಖ ಬೆಳೆಗಳು. ದೊಡ್ಡಮ್ಮ ದೇವಿ ದೇವಸ್ಥಾನ ಇದ್ದು ಐದು ವರ್ಷಕ್ಕೆ ಒಮ್ಮೆ ದೊಡ್ಡಮ್ಮ ಹಬ್ಬ ಮತ್ತು ಚಿಕ್ಕಮ್ಮ ಹಬ್ಬದಲ್ಲಿ ಎಲ್ಲಾ ಭಕ್ತಾದಿಗಳು ಪಾಲ್ಗೊಂಡು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ ಅರಕಲಗೂಡು ಮಲೆನಾಡು ಅರೆ ಮಲೆನಾಡು ಬಯಲು ಸೀಮೆಯ ಪ್ರದೇಶಗಳನ್ನು ಹೊಂದಿದೆ. ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಏ ಮಂಜು ಅವರು ಈ ಬಾರಿ ಜಯಗಳಿಸಿದ್ದಾರೆ. == ಪ್ರಮುಖ ಸ್ಥಳಗಳು == ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ ದೊಡ್ಡಮ್ಮ ತಾಯಿಯ ದೇವಾಲಯವಿದೆ. ಅರಕಲಗೂಡಿಗೆ ಹೊಂದಿಕೊಂಡಂತೆಯೆ ಇರುವ ಗೊರೂರಿನಲ್ಲಿ ಹೇಮಾವತಿ ನದಿಗೆ ಅಣೆಕಟ್ಟು ನಿರ್ಮಿಸಲಾಗಿದ್ದು ನೀರಾವರಿಗೆ ಇಂಬು ನೀಡಲಾಗಿದೆ. ಕೊಣನೂರಿನಲ್ಲಿರುವ ತೂಗು ಸೇತುವೆ ಹಾಸನ ಜಿಲ್ಲೆಯ ರಾಮನಾಥಪುರದಿಂದ ಐದು ಕಿ.ಮೀ ದೂರದಲ್ಲಿದೆ. ಕೊಣನೂರಿನಿಂದ ಕಟ್ಟೇಪುರ ಗ್ರಾಮಕ್ಕೆ ಜನರು ಸುಲಭವಾಗಿ ಸಂಚರಿಸಲು ಅನುಕೂಲವಾಗುವಂತೆ ಕಾವೇರಿ ನದಿಗೆ ಅಡ್ಡಲಾಗಿ ಇದನ್ನು ಸ್ಥಾಪಿಸಲಾಗಿದೆ. ಇದಲ್ಲದೆ ಐತಿಹಾಸಿಕ ಪ್ರಾಮುಖ್ಯತೆಯ ಅನೇಕ ದೇವಾಲಯಗಳು ಗ್ರಾಮದಲ್ಲಿವೆ. == ಬಾಹ್ಯ ಕೊಂಡಿಗಳು == ೧.ಹಾಸನ ಇತಿಹಾಸ ೨.ಹೊಯ್ಸಳ ಟೂರಿಸಮ್ 2014-02-09 ವೇಬ್ಯಾಕ್ ಮೆಷಿನ್ ನಲ್ಲಿ.