ಈ ಬಳ್ಳಿಯು ಬೀಳು ಭೂಮಿಯಲ್ಲಿ ಮತ್ತು ಹಾದಿಬದಿಯಲ್ಲಿ ಬೆಳೆಯುತ್ತದೆ.ದುಂಡನೆಯ ಬಳ್ಳಿಕಾಂಡವು ಬೇಲಿಗಿಡಗಳ ಮೇಲೆ ಇಲ್ಲವೆ ನೆಲದ ಮೇಲೆ ಹಬ್ಬಿಬೆಳೆಯುತ್ತದೆ.ಸರಳವಾದ ಉದ್ದ-ಅಂಡಾಕಾರದ ಮತ್ತು ಸ್ವಲ್ಪ ದಪ್ಪನೆಯ ಎಲೆಗಳು ಕಾಂಡದ ಮೇಲೆ ಅಭಿಮುಖವಾಗಿ ಜೋಡಣೆಯಾಗಿರುತ್ತವೆ.ಎಲೆಯ ಮೇಲ್ಭಾಗ ಹೊಳಪಿನಿಂದ ಕೂಡಿರುತ್ತದೆ ಮತ್ತು ಕೆಳಭಾಗದಲ್ಲಿ ಸೂಕ್ಷ್ಮಮೃದು ರೋಮಗಳಿರುತ್ತವೆ.ಎಲೆಯ ಕಂಕುಳದಲ್ಲಿ ಛತ್ರಿಯಾಕಾರದ ಪುಷ್ಪಮಂಜರಿಯಲ್ಲಿ ಎಕ್ಕದ ಹೂವನ್ನು ಹೋಲುವ ಹಳದಿ ಬಣ್ಣದ ಹೂಗಳಿರುತ್ತವೆ.ಒಂದು ಹೂ ತೊಟ್ಟಿನ ಮೇಲೆ ಎರಡು ಕಾಯಿಗಳು ಅಭಿಮುಖವಾಗಿ ಜೋಡಣೆಯಾಗಿರುತ್ತವೆ.ರಸ್ತೆ ಬದಿಯಲ್ಲಿ, ಹೊಲಗಳ ಬದುಗಳ ಮೇಲೆ, ತೋಟದಲ್ಲಿ ಹಾಗೂ ಕಾಡಿನಲ್ಲಿ ಬೆಳೆಯುವಂತಹ ಉಪಯುಕ್ತವಾದಂತಹ ಗಿಡಮೂಲಿಕೆಯ ಸಸ್ಯ ಇದಾಗಿದೆ. ನೆಲದ ಮೇಲೆ ಅಥವಾ ಮುಳ್ಳು ತಂತಿಗಳ ಮೇಲೆ ಹಬ್ಬುತ್ತದೆ. ಬುಡದಿಂದ ಹೊರಟು ಬಳ್ಳಿಗಳು ಒಂದಕ್ಕೊಂದು ಹೆಣೆದುಕೊಂಡು ಬೆಳೆಯುತ್ತದೆ. ಎಲೆಗಳು ಹಸಿರು ಮತ್ತು ಮೃದುವಾಗಿರುತ್ತದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಎಲ್ಲರಿಗೂ ಚಿರಪರಿಚಿತವಿರುವ ಗಿಡಮೂಲಿಕೆ ಇದಾಗಿದೆ.ಒಂದರಿಂದ ನಾಲ್ಕು ಮೀಟರ್ ಎತ್ತರ ಬೆಳೆಯುವ ಹಸಿರು ಕಾಂಡದ ಗಿಡ. ಇದರ ಎಲೆಗಳು ಮಾವಿನೆಲೆಯನ್ನು ಹೋಲುತ್ತದೆ. ಆದರೆ ಮೃದು ಮತ್ತು ನುಣುಪಾಗಿರುತ್ತದೆ. ಎಲೆಗಳು ಕೆಳಗಡೆ ವಾಲಿರುತ್ತವೆ. ಎಲೆಗಳ ತೊಟ್ಟು ಕಾಂಡಕ್ಕೆ ಸೇರುವ ತ್ರಿಕೋನದಲ್ಲಿ ಹೂ ಗೊಂಚಲು ಬಿಡುವುದು. ಪುಷ್ಪಪಾತ್ರೆ ಹೂವಿನ ತೊಟ್ಟಿನ ತುದಿಯಲ್ಲಿರುವುದು. ಇದರ ಮೇಲೆ ಹೂವುಗಳು ಗುಂಪಾಗಿ ತೆನೆಯಂತಿರುತ್ತದೆ. ಹೂವಿನ ಗುಚ್ಛವು ಬಿಳಿವರ್ಣದ್ದಾಗಿದ್ದರೂ ಅಲ್ಲಲ್ಲಿ ತಿಳಿ ನೇರಳೆ ಅಥವಾ ತಿಳಿ ಗುಲಾಬಿ ಬಣ್ಣವಿರುವುದು. ಕಾಯಿ ಚಪ್ಪಟೆಯಾಗಿರುತ್ತದೆ. ಇದರ ಒಳಗಡೆ ನಾಲ್ಕು ಬೀಜಗಳು ಇರುತ್ತವೆ. ಸಾಮಾನ್ಯವಾಗಿ ಪ್ರತಿ ಹಳ್ಳಿಯಲ್ಲಿಯೂ ಈ ಗಿಡವನ್ನು ಕಾಣಬಹುದಾಗಿದೆ. ಇದು ಬಹಳ ಉಪಯುಕ್ತವಾದುದು. ಇದರ ಎಲೆಗಳು ಸಿಂಹದ ಹಸ್ತದಂತಿರುತ್ತವೆ. ಆದುದರಿಂದ ಈ ಮೂಲಿಕೆಗೆ ಸಿಂಹಪರ್ಣಿ ಎಂದು ಸಂಸ್ಕ್ರತ ಗ್ರಂಥಗಳು ತಿಳಿಸುತ್ತವೆ. ಇದರಲ್ಲಿ ‘ವ್ಯಾಸಿಸೈನ್’ ಎನ್ನುವ ಕಟು ಕಹಿ ಕ್ಷಾರವಿರುತ್ತದೆ. ಇದು ಉಸಿರಾಟದ ಶ್ವಾನನಾಳಗಳ ವ್ಯಾಧಿಯನ್ನು ಗುಣಪಡಿಸುವುದರಲ್ಲಿ ಗಮನಾರ್ಹ ಪಾತ್ರವನ್ನು ವಹಿಸುತ್ತದೆ. ವಸಾಕ ಅನ್ನುವುದು ಮತ್ತೊಂದು ಹೆಸರು. ಜೇನು ದುಂಬಿಗಳು ಅತಿಯಾಗಿ ಬಯಸುವ ಮಕರಂದ ಭರಿತ ಪುಷ್ಪ ಬಿಡುವ ಗಿಡ. == ವೈಜ್ಞಾನಿಕ ಹೆಸರು == ಟೈಲೊಫೊರ ಇಂಡಿಕ ( (.) ) ಟೈ. ಆಸ್ತಮ್ಯಾಟಿಕ (.(..) & .) == ವರ್ಣನೆ == ರಸ್ತೆ ಬದಿಯಲ್ಲಿ, ಹೊಲಗಳ ಬದುಗಳ ಮೇಲೆ, ತೋಟದಲ್ಲಿ ಹಾಗೂ ಕಾಡಿನಲ್ಲಿ ಬೆಳೆಯುವಂತಹ ಉಪಯುಕ್ತವಾದಂತಹ ಗಿಡಮೂಲಿಕೆಯ ಸಸ್ಯ ಇದಾಗಿದೆ. ನೆಲದ ಮೇಲೆ ಅಥವಾ ಮುಳ್ಳು ತಂತಿಗಳ ಮೇಲೆ ಹಬ್ಬುತ್ತದೆ. ಬುಡದಿಂದ ಹೊರಟು ಬಳ್ಳಿಗಳು ಒಂದಕ್ಕೊಂದು ಹೆಣೆದುಕೊಂಡು ಬೆಳೆಯುತ್ತವೆ. ಎಲೆಗಳು ಹಸಿರು ಮತ್ತು ಮೃದುವಾಗಿರುತ್ತದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಎಲ್ಲರಿಗೂ ಚಿರಪರಿಚಿತವಿರುವ ಗಿಡಮೂಲಿಕೆ ಇದಾಗಿದೆ. == ಸಸ್ಯದ ಕುಟುಂಬ == ಆಸ್ಲ್ಕಿಪಿಯಡೇಸಿ() == ಕನ್ನಡದ ಇತರ ಹೆಸರುಗಳು == ಅಂತಮುಲ ಆಡುಮುತ್ತಡ ಕಿರುಮಂಜಿ == ಇತರ ಭಾಷೆಯ ಹೆಸರುಗಳು == ಸಂಸ್ಕೃತ-ಅನಂತಮುಲ,ಆಂತ್ರಪಾಚಕ ಹಿಂದಿ-ಅಂತಮುಲ್,ಜಂಗ್ಲಪಿಕ್ವನ್ ತಮಿಳು-ಪ್ಯೆಪ್ಪಾಲೈ,ನಾಚೊಹೊರಪ್ಪನ್,ನಾಯ್ ಪಾಲೈ ತೆಲುಗು-ಕಾಕಪಾಲ,ಕುಕ್ಕಪಾಲ,ವೆಟ್ಟಿಪಾಲ,ವೇರಿಫಲ ಇಂಗ್ಲೀಷ್-ಕಂಟ್ರಿ ಇಪಿಕಾಕ್ಯುನ == ಉಪಯೋಗಗಳು == ಎಲೆ ಮತ್ತು ಬೇರನ್ನು ಅರೆದು ಕುಡಿಸುವುದರಿಂದ ಗೂರಲು,ದಮ್ಮು ಮತ್ತು ಭೇದಿ,ರಕ್ತಭೇದಿ ಶಮನವಾಗುತ್ತವೆ.(ಸೂಚನೆ: ಈ ಗಿಡದ ಬೇರಿನ ಗಂಧವನ್ನು ವಾಂತಿ ಮಾಡಿಸಲು ಯೋಗ್ಯವಾದ ಶ್ವಾಸಕೋಶ ರೋಗಿಗಳಿಗೆ ಮಾತ್ರ ಬಳಸಬೇಕು.) ಆಡುಮುಟ್ಟದ ಸೊಪ್ಪಿನರಸ ¼ ಲೀಟರ್ ಗೆ, ಅರಿಸಿನ ೨೦ ಗ್ರಾಂ ಮತ್ತು ಕೊಬ್ಬರಿಎಣ್ಣೆ ¼ ಲೀಟರ್ ಸೇರಿಸಿ ಜೊತೆಗೆ ಸ್ವಲ್ಪ ಬಜೆಯ ಗಂಧ ಸೇರಿಸಿ ಇಡಬೇಕು.ಮರುದಿವಸ ಈ ರಸವನ್ನು ಕಾಯಿಸಿ ತೈಲಮಾಡಿ ಬಾಟಲ್ನಲ್ಲಿ ಸಂಗ್ರಹಿಸಿಟ್ಟುಕೊಂಡು,ಪ್ರತಿದಿವಸ ಮುಖಕ್ಕೆ ಈ ಎಣ್ಣೆಯನ್ನು ಲೇಪಿಸಿ ಅರ್ಧ ಗಂಟೆಯನಂತರ ಮುಖವನ್ನು ಹೆಸರುಬೇಳೆ ಹಿಟ್ಟಿನಿಂದ ತೊಳೆದುಕೊಳ್ಳಬೇಕು.ಈ ರೀತಿ ಕೆಲವು ದಿವಸ ಚಿಕಿತ್ಸೆಯನ್ನು ಅನುಸರಿಸುವುದರಿಂದ ಮುಖದಲ್ಲಿ ಮೊಡವೆಗಳು ಏಳುವುದಿಲ್ಲ ಜೊತೆಗೆ ಮುಖವು ಕಾಂತಿಯುಕ್ತವಾಗುತ್ತದೆ. ಆಡುಮುಟ್ಟದ ಬಳ್ಳಿಯ ಬೇರಿನ ರಸ ಸುಮಾರು ೧೫-೨೦ ತೊಟ್ಟುಗಳನ್ನು ಹಾಲಿಗೆ ಹಾಕಿ ಕುಡಿಯಲಿಕ್ಕೆ ಕೊಟ್ಟರೆ ಪಿತ್ತಯುಕ್ತ ಕಫ ವಾಂತಿಯಾಗುವುದು. ಆಡುಮುಟ್ಟದ ಬಳ್ಳಿಯ ಬೇರು ೧ ತೊಲ ಮತ್ತು ಎಲೆ ೧ ತೊಲದಷ್ಟನ್ನು ಹಾಲಿನೊಡನೆ ಅರೆದು ಮದ್ದೀಡಾದವರಿಗೆ(ಕೈಮಸುಕಿನ ವಿಷಕ್ಕೆ ಒಳಗಾದವರಿಗೆ)ಕುಡಿಸಿದರೆ ವಾಂತಿಯಾಗಿ ಮದ್ದು ಹೊರಬಂದು ಆರೋಗ್ಯವಂತರಾಗುತ್ತಾರೆ. ಪಥ್ಯ: ಮಜ್ಜಿಗೆ ಅನ್ನ. == ಸರಳ ಚಿಕಿತ್ಸೆಗಳು == == ದಮ್ಮು, ಶ್ವಾಸವಿಕಾರದಲ್ಲಿ == ಬೆಳ್ಳುಳ್ಳಿ, ಹಿಪ್ಪಲಿ, ಮೆಣಸು, ಕಟುಕರೋಹಿಣಿ ಮತ್ತು ಆಡುಸೋಗೆ ಎಲೆಗಳನ್ನು ಸಮತೂಕದಷ್ಪು ಬಿಸಿನೀರಿನಲ್ಲಿ ಅರೆದು ಸ್ವಲ್ಪ ಜೇನುತುಪ್ಪ ಸೇರಿಸಿ ಶೋಧಿಸಿ ದಿನಕ್ಕೆ ಎರಡು ಬಾರಿ ಉಪಯೋಗಿಸುವುದು ಅಥವಾ ಆಡುಸೋಗೆ ಎಲೆಯ ಒಣಗಿದ ಚೂರ್ಣದ ಹೊಗೆಯನ್ನು ಬೀಡಿ ರೂಪದಲ್ಲಿ ಸೇದುವುದರಿಂದ ದಮ್ಮು ವ್ಯಾಧಿ ಉಪಶಮನವಾಗುತ್ತದೆ. == ಕೆಮ್ಮು == ಸುಮಾರು 5ಗ್ರಾಂ ಆಡುಸೋಗೆ, 5ಗ್ರಾಂ ಹಸಿರು ಅಮೃತಬಳ್ಳಿಯ ಕಷಾಯ ಮಾಡಿ ಆರಿಸಿ ಶೋಧಿಸಿಟ್ಟುಕೊಳ್ಳುವುದು. ಇದನ್ನು ದಿವಸಕ್ಕೆರಡು ಬಾರಿ 10 ಗ್ರಾಂ ನಷ್ಟು ಶುದ್ಧ ಜೇನಿನಲ್ಲಿ ಕುಡಿಸುವುದು. ಇದು ಒಂದು ಉಪಯುಕ್ತವಾದ ವನೌಷಧಿ. ಮಕ್ಕಳಿಗಾದರೆ ಆಡುಸೋಗೆ ಎಲೆಗಳ 5ಗ್ರಾಂ ರಸವನ್ನು ಸ್ವಲ್ಪ ಜೇನಿನಲ್ಲಿ ಸೇರಿಸಿ, ಸ್ವಲ್ಪ ಬಿಸಿಮಾಡಿ ದಿವಸಕ್ಕೆ 4 ರಿಂದ 5 ಬಾರಿ ಕುಡಿಸುವುದು. == ಅಸ್ತಮ, ಗೂರಲು == ಜ್ಯೇಷ್ಠಮಧು 10ಗ್ರಾಂ, ಹಿಪ್ಪಲಿ 20ಗ್ರಾಂ ಹಾಗೂ 5 ಗ್ರಾಂ ಆಡುಸೋಗೆ ಎಲೆಗಳನ್ನು ಚೆನ್ನಾಗಿ ಅರೆದು ಅಷ್ಟಾಂಶ ಕಷಾಯವನ್ನು ಮಾಡಿ ದಿವಸಕ್ಕೆ ಮೂರು ಬಾರಿ ಸ್ವಲ್ಪ ಜೇನು ಸೇರಿಸಿ ಕುಡಿಯುವುದು. ಅಥವಾ ಆಡುಸೋಗೆ ಎಲೆಯ ರಸ ಮತ್ತು ಸಮಭಾಗ ಸಕ್ಕರೆ ಸೇರಿಸಿ ರಸಾಯನ ಮಾಡಿ ಬೆಳಿಗ್ಗೆ, ಮಧ್ಯಾಹ್ನ, ಸಾಯಂಕಾಲ ರಾತ್ರಿ ನೆಕ್ಕಿಸುವುದು. ಅಥವಾ 10-12 ಆಡುಸೋಗೆ ಎಲೆಗಳನ್ನು ನೀರಿನಲ್ಲಿ ಕುದಿಸಿ ಕಷಾಯವನ್ನು ಮಾಡಿ ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿಸುವುದು. == ರಕ್ತಕಾಸ == ಆಡುಸೋಗೆ ಎಲೆ ಮತ್ತು ಹಿಪ್ಪಲಿ ಚೂರ್ಣ ಸೇರಿಸಿ ಮಾಡಿದ ಕಷಾಯವನ್ನು ಪ್ರತಿ ದಿವಸ ಬೆಳಿಗ್ಗೆ ಮತ್ತು ಸಂಜೆ ಕುಡಿಸುವುದು. ಪ್ರಮಾಣ ಎರಡು ಟೀ ಚಮಚ ಅಥವಾ ಆಡುಸೋಗೆ ಮತ್ತು ಕೊತ್ತಂಬರಿ ಬೀಜ ನುಣ್ಣಗೆ ರುಬ್ಬಿ ಕಷಾಯವನ್ನು ಮಾಡಿ ಬೆಳಿಗ್ಗೆ ಮತ್ತು ರಾತ್ರಿ ಸ್ವಲ್ಪ ಕುಡಿಸುವುದು. == ಮೂತ್ರಾಶಯದ ಭಾದೆ, ನೋವು == 20ಗ್ರಾಂ ಆಡುಸೋಗೆ ಎಲೆಗಳ ರಸಕ್ಕೆ 20ಗ್ರಾಂ ಜೇನು ತುಪ್ಪವನ್ನು ಸೇರಿಸಿ ದಿವಸಕ್ಕೆ ಎರಡು ವೇಳೆ ಸೇವಿಸುವುದು ಹಾಗೂ ಬೇವಿನ ಎಲೆ ಮತ್ತು ಆಡುಸೋಗೆ ಎಲೆಗಳನ್ನು ಜಜ್ಜಿ ಸ್ವಲ್ಪ ಬಿಸಿ ಮಾಡಿ ಕಿಬ್ಬೊಟ್ಟೆಗೆ ಕಟ್ಟುವುದು ಅಥಾವ ಬಟ್ಟೆಯಲ್ಲಿ ಕಟ್ಟಿ ಶಾಖ ಕೊಡುವುದು ಇದರಿಂದ ಮೂತ್ರಾಶಯದ ನೋವು ನಿಲ್ಲುವುದು. == ಹಳುಕಡ್ಡಿ, ತುರಿ, ನವೆ == ಆಡುಸೋಗೆಯ ಚಿಗುರೆಲೆಗಳ ಜೊತೆಗೆ ಸ್ಪಲ್ಪ ಅರಿಷಿಣ ಸೇರಿಸಿ ಗೋಮೂತ್ರದಲ್ಲಿ ನುಣ್ಣಗೆ ಅರೆದು ಲೇಪಿಸುವುದು. ಎಣ್ಣೆ ಪದಾರ್ಥಗಳನ್ನು ವರ್ಜಿಸುವುದು. ಸೋಪನ್ನು ಬಳಸದೆ ಶೀಗೆಕಾಯಿ ಹಚ್ಚಿ ಸ್ನಾನ ಮಾಡುವುದು. == ರಕ್ತಪಿತ್ತ == ಶರೀರದ ಯಾವುದೇ ಭಾಗದಿಂದ ವಿನಾಕಾರಣ ರಕ್ತ ಬೀಳುವ ಕಾಯಿಲೆ ಅಂದರೆ ಕಿವಿ, ಕಣ್ಣು, ಮೂಗು, ಬಾಯಿ, ಮಲದ್ವಾರ ಹಾಗೂ ದೇಹದ ಒಳಗಡೆ ಅಂದರೆ ಕರಳು ಜಠರ ಇವುಗಳಿಂದ ರಕ್ತ ಬೀಳುವುದು. ಆಡುಸೋಗೆ ಹಸಿ ಎಲೆರಸ ಸುಮಾರು 15 ಗ್ರಾಂನಷ್ಟುನ್ನು ಸ್ವಲ್ಪ ಜೇನುತುಪ್ಪ ಸೇರಿಸಿ ದಿನಕ್ಕೆರಡು ವೇಳೆ ಐದು ದಿವಸ ಕುಡಿಸುವುದು ಅಥವಾ ಪರ್ಪಾಷ್ಠಕ ಆಡುಸೋಗೆ ಸೊಪ್ಪು, ಕೊತ್ತಂಬರಿ, ಒಣಗಿದ ದ್ರಾಕ್ಷಿ ಇವುಗಳ ಸಮತೂಕದಷ್ಟನ್ನು ಚೆನ್ನಾಗಿ ಕಿವುಚಿ 30 ಗ್ರಾಂ ನಷ್ಷು ಕುಡಿಯುವುದು. ದಿನಕ್ಕೆ ಮೂರುಬಾರಿ ಬಳಸುವುದು ಅಥವಾ ಮೇಲಿನ ವಸ್ತುಗಳ ನಯವಾದ ಚೂರ್ಣ ಮಾಡಿ ಒಂದು ಟೀ ಚಮಚದಷ್ಟು ಚೂರ್ಣವನ್ನು ಒಂದು ಬಟ್ಟಲು ಶುದ್ಧವಾದ ತಣ್ಣೀರಿನಲ್ಲಿ ರಾತ್ರಿ ಹಾಕಿ ಬೆಳಿಗ್ಗೆ ಈ ನೀರನ್ನು ಕುಡಿಯುವುದು. == ಕಫದ ಕೆಮ್ಮು, ಜ್ವರ, ಉಬ್ಬಸ == ಅಮೃತಬಳ್ಳಿ, ಗುಳ್ಳದ ಬೇರು ಮತ್ತು ಆಡುಸೋಗೆ ಬೇರು ಇವುಗಳ 30 ಗ್ರಾಂ ಗಳಷ್ಟು ಕಷಾಯವನ್ನು ಮಾಡುವುದು, ಕಷಾಯವನ್ನು ಎರಡು ಭಾಗ ಮಾಡಿ, ಬೆಳಿಗ್ಗೆ ಸಾಯಂಕಾಲ ಕುಡಿಸುವುದು. ಈ ಮೂಲಿಕೆಗೆ ಶ್ವಾಸಕೋಶಗಳ ಬಾಧೆ ನೀಗಿ ಕೆಮ್ಮು, ದಮ್ಮು, ಉಬ್ಬಸ, ಗೂರಲು ವಾಸಿ ಮಾಡುವ ಮಹಾ ಗುಣವಿದೆ. ಶ್ವಾಶಕೋಶ ಶ್ವಾಸನಾಳದಲ್ಲಿರುವ ಕಫವನ್ನು ಕರಗಿಸಿ ಹೊರ ಹಾಕಿ ರಕ್ತ ಶುದ್ಧ ಮಾಡಿ ಜ್ವರವನ್ನು ತಗ್ಗಿಸಿ ರಕ್ತ ಉಗುಳುವ ವ್ಯಾಧಿಯನ್ನು ವಾಸಿ ಮಾಡುವ ಅಪೂರ್ವ ಶಕ್ತಿ ಇದೆ. == ವಾಸಾದಿಘೃತ(ಚರಕ ಸಂಹಿತ) == ಆಡುಸೋಗೆ ಎಲೆಗಳ ರಸ ತ್ರಿಕಟು, ಹಿಪ್ಪಲಿ, ಜೀರಿಗೆ ಅಜಮೋದ, ಚಿತ್ರಮೂಲ, ಕಾಡು ಮೆಣಸಿನ ಬೇರು, ಇವುಗಳ ಕಲ್ಕದಿಂದ ತಯಾರಿಸಿದ ಮತ್ತು ಹಸುವಿನ ತುಪ್ಪದಿಂದ ಮಾಡಿದ ಘೃತವನ್ನು ಅರ್ಧ ಚಮಚದಷ್ಟಕ್ಕೆ ಒಂದು ಟೀ ಚಮಚ ಅಪ್ಪಟ ಜೇನು ಸೇರಿಸಿ ಸೇವಿಸುವುದು. ಕಫದ ಕೆಮ್ಮು ವಾಸಿಯಾಗುವುದು. ಇದು ಚರಕ ಮಹರ್ಷಿಗಳ ಅಮೂಲ್ಯ ಕೊಡುಗೆ. == ಪಶುರೋಗ ಚಿಕಿತ್ಸೆಯಲ್ಲಿ == ಆಡುಮುಟ್ಟದ ಸೊಪ್ಪು ೨ ತೊಲ,ಲಕ್ಕಿ ಸೊಪ್ಪು ೧ ತೊಲ, ತುಂಬೆಸೊಪ್ಪು ೨ ತೊಲ,ಹಾಲಿವಾಣದ ಸೊಪ್ಪು ೨ ತೊಲ,ಕರಿಮೆಣಸು ½ ತೊಲ,ಬೆಳ್ಳುಳ್ಳಿ ೧ ತೊಲ,ಇವುಗಳೆಲ್ಲವನ್ನು ನೀರಿನಲ್ಲಿ ಅರೆದು ದಿವಸಕ್ಕೆ ಎರಡು ಬಾರಿಯಂತೆ ೩ ದಿವಸ ಕುಡಿಸಿದರೆ ಪಶುಗಳ ತಲೆದೂಗುವ ರೋಗ ವಾಸಿಯಾಗುತ್ತದೆ. ಆಡುಮುಟ್ಟದ ಬಳ್ಳಿಯನ್ನು ಹಾವು ಕಚ್ಚಿದಾಗ ಉಪಯೋಗಿಸುತ್ತಾರೆ. ಆಡುಮುಟ್ಟದ ಬೇರನ್ನು ಕೆಮ್ಮು,ದಮ್ಮು ಗೂರಲಿಗೆ ಬಳಸುತ್ತಾರೆ. == ಉಲ್ಲೇಖ ==