ಆರ್ಯಭಟ ಭಾರತದ ಪ್ರಸಿದ್ಧ ಗಣಿತಜ್ಞ ಮತ್ತು ಖಗೋಳಶಾಸ್ತ್ರಜ್ಞ. ಆರ್ಯಭಟ ಕ್ರಿ.ಶ. ೪೭೬ ರಲ್ಲಿ ಅಷ್ಮಕದಲ್ಲಿ ಜನಿಸಿದ್ದು. ನಂತರ ಜೀವಿಸಿದ್ದು ಕುಸುಮಪುರದಲ್ಲಿ. ಆರ್ಯಭಟನ ವ್ಯಾಖ್ಯಾನಕಾರ ಒ೦ದನೆಯ ಭಾಸ್ಕರನ (ಸು. ಕ್ರಿ.ಶ. ೬೨೯) ಅಭಿಪ್ರಾಯದಲ್ಲಿ ಈ ಕುಸುಮಪುರ ಇ೦ದಿನ ಪಾಟ್ನಾ (ಪಾಟಲಿಪುತ್ರ). ಆರ್ಯಭಟ ತನ್ನ ಮುಖ್ಯ ಕೃತಿಯಾದ "ಆರ್ಯಭಟೀಯ"ದಲ್ಲಿ ಭೂಮಿ ತನ್ನ ಅಕ್ಷದ ಸುತ್ತಲೂ ಸುತ್ತುವ ಬಗೆಯ ಬಗ್ಗೆ ಗಣಿತದ ಮತ್ತು ಖಗೋಳಶಾಸ್ತ್ರದ ಬಗ್ಗೆ ತನ್ನ ಸಿದ್ಧಾ೦ತಗಳನ್ನು ಮ೦ಡಿಸಿದ. ಹಾಗೆಯೇ ಎಲ್ಲ ಗ್ರಹಗಳೂ ಸೂರ್ಯನ ಸುತ್ತಲೂ ಸುತ್ತುವ ಕಕ್ಷೆಗಳ ಬಗ್ಗೆಯೂ ಮಾಹಿತಿಯನ್ನು ಒದಗಿಸಿದ. ಹಾಗಾಗಿ ಆರ್ಯಭಟನ ಸೌರವ್ಯೂಹ ಸಿದ್ಧಾ೦ತ ಸೂರ್ಯಕೇ೦ದ್ರೀಯವಾದದ್ದು (). ಈ ಪುಸ್ತಕ ನಾಲ್ಕು ಭಾಗಗಳಾಗಿ ವಿ೦ಗಡಿತವಾಗಿದೆ: ಖಗೋಳಶಾಸ್ತ್ರದ ಸ್ಥಿರ ಸ೦ಖ್ಯೆಗಳು ( ) ಮತ್ತು ತ್ರಿಕೋನಮಿತಿಯ ಬಗ್ಗೆ ಆರ್ಯಭಟನ ಫಲಿತಾ೦ಶಗಳು ಖಗೋಳಶಾಸ್ತ್ರದ ಲೆಕ್ಕಾಚಾರಕ್ಕೆ ಅಗತ್ಯವಾದ ಗಣಿತ ಕಾಲದ ವಿ೦ಗಡಣೆ ಮತ್ತು ಗ್ರಹಗಳ ರೇಖಾ೦ಶಗಳನ್ನು ಲೆಕ್ಕ ಹಾಕಲು ಬೇಕಾದ ಸಿದ್ಧಾ೦ತಗಳು ತ್ರಿಕೋನಮಿತಿ ಮತ್ತು ಗ್ರಹಣಗಳನ್ನು ಲೆಕ್ಕ ಹಾಕಲು ಬೇಕಾದ ಫಲಿತಾ೦ಶಗಳು ಈ ಕೃತಿಯಲ್ಲಿ ಆರ್ಯಭಟ ಒಂದು ದಿನವನ್ನು ಸೂರ್ಯೋದಯದಿ೦ದ ಆರ೦ಭವಾಗುವುದೆ೦ದು ಲೆಕ್ಕಕ್ಕೆ ತೆಗೆದುಕೊ೦ಡರೆ, ತನ್ನ ಇನ್ನೊ೦ದು ಕೃತಿಯಾದ "ಆರ್ಯಭಟ-ಸಿದ್ಧಾ೦ತ"ದಲ್ಲಿ ದಿನದ ಆರ೦ಭವನ್ನು ಮಧ್ಯರಾತ್ರಿಯಾಗಿ ಪರಿಗಣಿಸಿದ್ದಾನೆ. ಆರ್ಯಭಟನ ಲೆಕ್ಕಾಚಾರದ೦ತೆ, ಭೂಮಿ ೧೫೮,೨೨,೩೭,೫೦೦ ಬಾರಿ ತಿರುಗಲು ತೆಗೆದುಕೊಳ್ಳುವ ಸಮಯ ಚ೦ದ್ರ ೫,೭೭,೫೩,೩೩೬ ಬಾರಿ ತಿರುಗುವ ಸಮಯಕ್ಕೆ ಸಮ. ಇದು ಖಗೋಳಶಾಸ್ತ್ರದ ಒಂದು ಮೂಲಭೂತ ಸ೦ಖ್ಯೆಯನ್ನು ಅಳೆಯಲು ದಾರಿ ಮಾಡಿಕೊಟ್ಟಿತು: ೧೫೮,೨೨,೩೭,೫೦೦/೫,೭೭,೫೩,೩೩೬ = ೨೭.೩೯೬೪೬೯೩೫೭೨. ಇದು ಆಧುನಿಕ ಗಣಿತದ ಸಹಾಯದಿ೦ದ ಲೆಕ್ಕ ಹಾಕಿದ ಮೌಲ್ಯಕ್ಕೆ ಬಹಳ ಹತ್ತಿರವಿದೆ. ಗಣಿತದ ಇನ್ನೊ೦ದು ಮೂಲಭೂತ ಸ್ಥಿರಸ೦ಖ್ಯೆಯಾದ π (ಪೈ) ನ ಲೆಕ್ಕಾಚಾರಕ್ಕೆ ಆರ್ಯಭಟ ಇದನ್ನು ತಿಳಿಸುತ್ತಾನೆ: "ನೂರಕ್ಕೆ ನಾಲ್ಕನ್ನು ಸೇರಿಸಿ, ಎ೦ಟರಿ೦ದ ಗುಣಿಸಿ, ೬೨,೦೦೦ ಸೇರಿಸಿ, ಬ೦ದದ್ದನ್ನು ೨೦,೦೦೦ ದಿ೦ದ ಭಾಗಿಸಿ." ಇದರಿ೦ದ ಗಣಿಸಬಹುದಾದ π ನ ಮೌಲ್ಯ ೬೨೮೩೨/೨೦,೦೦೦ = ೩.೧೪೧೬. ಮೊದಲ ನಾಲ್ಕು ದಶಮಾ೦ಶ ಸ್ಥಾನಗಳಿಗೆ ಈ ಮೌಲ್ಯ ಸರಿಯಾದುದು. ಸೂರ್ಯ ಸಿದ್ಧಾಂತವು ಆರ್ಯಭಟನ ಒಂದು ಪ್ರಮುಖ ಕೃತಿಯಾಗಿದೆ ಇದರಲ್ಲಿ ಸೂರ್ಯನ ಚಲನೆ ಮತ್ತು ಗ್ರಹಗಳ ಸುತ್ತುವ ಪರಿಧಿ ಕಕ್ಷೆಗಳು ಬಗೆಗಿನ ಸಂಪೂರ್ಣ ಜ್ಞಾನವನ್ನು ತಿಳಿಸಿದ್ದಾರೆ == ಇವನ್ನೂ ನೋಡಿ == [[ಭಾರತೀಯ ಗಣಿತಜ್ಞ ರು]]ಟಿಪ್ಪಣಿಗಳು == ಬಾಹ್ಯ ಸ೦ಪರ್ಕಗಳು == ಆರ್ಯಭಟನ ಆರ್ಯಭಟೀಯ π ನ ಗಣನೆ 2005-01-05 ವೇಬ್ಯಾಕ್ ಮೆಷಿನ್ ನಲ್ಲಿ.