ಇದೊಂದು "ಮಾತೃ ಭೂಮಿಯನ್ನು ಪೂಜಿಸುವ ಉತ್ಸವ"ವಾಗಿದ್ದು ದಕ್ಷಿಣ ಭಾರತದ ತುಳುನಾಡಿನ ಪ್ರದೇಶದಲ್ಲಿ ಭೂಮಿ ಪೂಜೆಯೆಂದೇ ಜನಪ್ರಿಯವಾಗಿದೆ.ಇದು ತುಳು ತಿಂಗಳ ಪೋನಿ (ಗ್ರೆಗೋರಿಯನ್ ತಿಂಗಳು ಫೆಬ್ರುವರಿ) ನ ಮುಕ್ತಾಯದ ದಿನಗಳಲ್ಲಿ ಆಚರಿಸಲಾಗುವ ಪ್ರಮುಖ ನಾಲ್ಕು ದಿನಗಳ ಉತ್ಸವವಾಗಿದೆ. ಈ ಹಬ್ಬವು ಆ ಪ್ರದೇಶದಲ್ಲಿ ವಾಸಿಸುವ ಜನರಲ್ಲಿ ಪ್ರಕೃತಿಯ ಅರಿವು ಮೂಡಿಸುತ್ತದೆ. == ಪದ ವ್ಯುತ್ಪತ್ತಿ == ಕೆಡ್ಡಸ ಎಂಬ ಪದ ಅರ್ಥ ಕೇಟ. ಎಂದರೆ ಬೇಟೆ ಎಂಬ ಅರ್ಥವನ್ನು ನೀಡುತ್ತದೆ. == ಆಚರಣೆ == ಫೆಬ್ರವರಿಯಲ್ಲಿ ಸಾಮಾನ್ಯವಾಗಿ ಕೆಡ್ಡಸವು ಬರುತ್ತದೆ ಮತ್ತು ಇದರಲ್ಲಿ ಮೂರು ವಿಧ ಇದ್ದು ಕೆಡ್ಡಸ >, ನಡು ಕೆಡ್ಡಸ , ಕಡೆ ಕೆಡ್ಡಸ ಎಂದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ಕಡೆ ಕೆಡ್ಡಸದ ಸಮಯದಲ್ಲಿಕುಟುಂಬದ ಓರ್ವ ವಯಸ್ಸಾದಮಹಿಳೆಈ ಆಚರಣೆಗಳನ್ನು ನಿರ್ವಹಿಸುತ್ತಾಳೆ,ಈ ದಿನದಂದು 'ಸಾರ್ನಡ್ಡೆ(ತುಳುನಾಡಿನ ಖಾದ್ಯ)' ಮತ್ತು ವಿವಿಧ ಭಕ್ಷ್ಯಗಳನ್ನು ತಯಾರಿಸಿ ತುಳಸಿ ಕಟ್ಟೆಯ ಮುಂದೆ ಇಡಲಾಗುತ್ತದೆ. ಮುಂಜಾನೆ ಅವಳು ಎಚ್ಚರಗೊಂಡು ತುಳಸಿ ಕಟ್ಟೆಯ ಸುತ್ತ ಹಸುವಿನ ಸಗಣಿ ('ಅಂಬಿ' ತುಳುವಿನಲ್ಲಿ)ಯನ್ನು ಸಾರಿಸಿ ಸುತ್ತಲು ದೀಪ ಬೆಳಗಲಾಗುತ್ತದೆ.ಇದರ ಜೊತೆಯಲ್ಲಿ ಕುಂಕುಮ, ಸೀಗೆ ಕಾಯಿಯನ್ನು ಕಟ್ಟೆಯ ಮುಂದೆಬಾಳೆಎಲೆಯಲ್ಲಿ ಬಡಿಸುತ್ತಾರೆ.ನಂತರ ಆಕೆ ತೆಂಗಿನ ಎಣ್ಣೆಯನ್ನು ಮಣ್ಣಿಗೆ ಸುರಿಯುತ್ತಾಳೆ(ಇದು ಭೂಮಿತಾಯಿಗೆ ಮಾಡುವ ಅಭಿಷೇಕ ಎಂಬ ನಂಬಿಕೆ),ನಂತರ ಅವಳು ಸ್ನಾನ ಮಾಡಿ ಬರುತ್ತಾಳೆ. == ವಿಧಿವಿಧಾನ == ತುಳುನಾಡಿನಲ್ಲಿ ವಾರ್ಷಿಕಾವರ್ತನದಲ್ಲಿ ಆಚರಣೆಯಾಗುವ ಒಂದು ಹಬ್ಬ. ಕೃಷಿ ಸಂಬಂಧಿಯಾಗಿ ಇದರ ಆಚರಣೆಯಾಗುತ್ತದೆ. ಸಮೃದ್ಧಿ ಮತ್ತು ‍ಫಲಾಪೇಕ್ಷೆಯ ಆಶಯದಿಂದ ಇದು ಆಚರಣೆಯಾಗುತ್ತದೆ. ಕೆಡ್ಡಸ ಆಚರನಣೆಯನ್ನು ಭೂಮಿ ತಾಯಿಯ ಮಿಯಾದ ಹಬ್ಬವೆಂದು ಕರೆದು ಭೂಮಿಯನ್ನು ಸಾಮಾನ್ಯ ಸ್ತ್ರೀಯೆಂಬಂತೆ ಅವರು ಪರಿಭಾವಿಸಿದ್ದಾರೆ . ಹೆಣ್ಣಿನಂತೆ ಭೂಮಿಯು ಮುಟ್ಟಾಗುತ್ತಾಳೆಂದು ಪರಿಭಾವಿಸಿ , ಆ ನಂಬಿಕೆಯ ಪ್ರಕಾರ ಅವಳನ್ನು ಮಡಿಗೊಳಿಸುವ ದಿನವೆಂದು ಈ ಆಚರಣೆಯನ್ನು ನಡೆಸುತ್ತಾರೆ. ಕೆಡ್ಡಸ ಆಚರಣೆಯ ಎರಡನೇ ದಿನವನ್ನು 'ನಡುಕೆಡ್ಡಸ'ವೆಂದು ಕರೆದು ಆ ದಿನ 'ಕೆಡ್ಡಸ'ದ ಬೇಟೆಯನ್ನು ನಡೆಸುತ್ತಾರೆ. ಕೆಡ್ಡಸಾಚರಣೆಯಲ್ಲಿ ಮಾಂಸದೂಟವ ಮಾಡಲೇ ಬೇಕೆಂಬ ನಂಬಿಕೆಯೂ ಇದೆ. ಕೆಡ್ಡಸದ ಮೂರು ದಿನ ಕೊಡಲಿ ಏಟು, ಹಾರೆ ,ಪಿಕ್ಕಾಸಿಗಳಲ್ಲಿ ಅಗೆಯುವಂತಿಲ್ಲ. ಮನೆಯ ಆವರಣವನ್ನು ಸ್ವಚ್ಛ ಮಾಡಿ ೭ ಬಗೆಯ ಧಾನ್ಯಗಳನ್ನು ಬೆರೆಸಿ ಬೂತಾಯಿಗೆ ಬಾಳೆಲೆಯಲ್ಲಿ ಇಡುವುದು ಕ್ರಮ. ಭೂದೇವಿಗೆ ವಸ್ತ್ರ,ಗೆಜ್ಜೆ, ಕತ್ತಿ, ಕಲಶ, ಅರಶಿನ ,ಕುಂಕುಮ ಇತ್ಯಾದಿಯನ್ನು ಇಡುವುದು ವಾಡಿಕೆ == ಕೆಡ್ಡಸ ಬೇಟೆ == ಈ ಕೆಡ್ಡಸ ಆಚರಣೆ ಸಂದರ್ಭದಲ್ಲಿ ಕಾಡುಪ್ರಾಣಿಗಳಿಗೆ ಕಾಲು ಒಡೆಯುವ ರೋಗ ಬರುತ್ತದೆ ಎಂದು ಜನ ನಂಬುತ್ತಾರೆ. ಈ ಅರ್ಥದಲ್ಲಿ ಬೇಟೆ ಕೆಡ್ದಸ ಆಚರಣೆಯ ಉಪಾಂಗವಾಗಿ ಜರಗುತ್ತದೆ.ಋತುಮಾನದ ವ್ಯತ್ಯಾಸವಾಗಿ ಮೃಗಗಳಿಗೆ ಕಾಲುರೋಗ ಸಂಭವನೀಯವಾದರು,ಅದಕ್ಕಿಂತ ಮುಖ್ಯವಾಗಿ ,ತಮ್ಮ ಬೆಳೆಗೆ ತೊಂದರೆಯನ್ನುಂಟು ಮಾಡುವ ಪ್ರಾಣಿಗಳ ಬೇಟೆ ಮಾಡಲು ಅವಕಾಶವಾಗುತ್ತದೆ .ನಡು ಕೆಡ್ಡಸದ ದಿನ ಪೂರ್ವ ನಿರ್ಧರಿತದಂತೆ ಊರ ಜನ ಒಂದೆಡೆ ಸೇರುತ್ತಾರೆ.ಕಲ್ಲೊಂದನ್ನು ನೆಟ್ಟು -ಹಣ್ಣು -ತೆಂಗಿನಕಾಯಿ ಕಾಡು ಹೂಗಳನ್ನಿಟ್ಟು -ಕಾಡು ದೈವವನ್ನು ನೆನೆದು ಪ್ರಾರ್ಥಿಸುತ್ತಾರೆ. ಈಡೊಂದನ್ನು ಸಿಡಿಸುತ್ತಾರೆ. ಅರಣ್ಯ ಸೇರಿ ಗಡಿಭಾಗಗಳೆಲ್ಲಾ ಕೋವಿ-ಆಯುಧ ಹಿಡಿದವರು ನಿಲ್ಲುತ್ತಾರೆ. ಉಳಿದವರು ಕಾಡೊಳಗೆ ಬೊಬ್ಬೆ ಹಾಕುತ್ತಾ ಪ್ರಾಣಿಗಳನ್ನು ಓಡಿಸುತ್ತಾರೆ. ಬೇಟೆಯಾದರೆ ಆರಂಭದಲ್ಲಿ ಸೇರಿದಲ್ಲಿಗೆ ಮರಳಿ ಬರುತ್ತಾರೆ. ಬೇಟೆಯಾದ ಪ್ರಾಣಿಗಳನ್ನು ಬೇಟೆ ಮಾಡಿದವರಿಗೆ ನಿಯಮದಂತೆ, 'ಅಜಕಲು ಮಾಡಿ' ಮಾಂಸವನ್ನು ಹಂಚಿ ಉಳಿದ ಹೆಚ್ಚುವರಿ ಮಾಂಸವನ್ನು ಸೇರಿದ ಉಳಿದವರಿಗೆ ಸಮಾನವಾಗಿ ಹಂಚ್ಚುತ್ತಾರೆ. ಒಂದಷ್ಟು ಮಾಂಸವನ್ನು ಅಲ್ಲಿಯೆ ಅಡುಗೆ ಮಾಡಿ ಕಾಡ ದೈವಕ್ಕೆ ಬಡಿಸಿ ಬಳಿಕ ಪ್ರಸಾದವಾಗಿ ಸೇವಿಸುತ್ತಾರೆ. ಕೆಡ್ಡಸ ಆಚರಣೆಯಲ್ಲಿ 'ಮಾಂಸದೂಟ' ಮಾಡದಿದ್ದರೆ 'ದೇಹದ ಎಲುಬು' ನುಚ್ಚು ನೂರಾಗುತ್ತದೆ ಎಂಬ ನಂಬಿಕೆ ಇದೆ. ಅದಕ್ಕನುಗುಣವಾಗಿ ಬೇಟೆಯನ್ನು ಮಾಂಸದಡುಗೆಗೆ ಪೂರಕವಾಗಿಸುವ ಆಶಯ ಹೊಂದಿಸಿಕೊಳ್ಳಲಾಗಿದೆ. ಬೇಟೆಯಲ್ಲಿ ಬೇಟೆಯಾಗದಿದ್ದರೆ ಬದನೆ-ನುಗ್ಗೆ ಕಾಯಿಯನ್ನಾದರೂ ಅಡುಗೆ ಮಾಡಲೇಬೇಕೆಂಬ ನಂಬಿಕೆಯನ್ನು ಕೆಡ್ಡಸ ಆಚರಣೆ ಹಿನ್ನಲೆಯಲ್ಲಿ ರೂಪಿಸಲಗಿದೆ ಭೂಮಿತಾಯಿಯು ಸೀಗೆಕಾಯಿಯಲ್ಲಿ ಸ್ನಾನಮಾಡುವಳೆಂಬ ನಂಬಿಕೆಯ ಮೇರೆಗೆ ಸೀಗೆಕಾಯಿಯನ್ನು ಇಡಲಾಗುತ್ತದೆ.ಸ್ನಾನದ ನಂತರ ಹಣೆಗೆ ಕುಂಕುಮ ಇಟ್ಟು ಕಟ್ಟೆಯ ಮುಂದೆ ಇರಿಸಲಾದ ಖಾದ್ಯ(ಸಾರ್ನಡ್ಡೆ)ಯನ್ನು ಸೇವಿಸುತ್ತಾಳೆ. === ಉದ್ದೇಶ === ಮಾನವ ಬದುಕಿಗೂ ಬೇಟೆಗೂ ಅನ್ಯೋನ್ಯ ಸಂಬಂಧವಿದೆ . ಆದಿಮೂಲದಲ್ಲಿ ಮಾನವನಿಗೆ ಬೇಟೆಯೇ ಆಹಾರದ ಮೂಲವಾಗಿತ್ತು . ಸಮುದಾಯ ಕಾಡನ್ನು ಆಂಶಿಕವಾಗಿ ಕೃಷಿಗೆ ಪೂರಕವಾಗಿ ಬಳಸಿಕೊಂಡಿದೆ. ಕೃಷಿ ಸಂಸ್ಕೃತಿಗೆ ಮಾನವ ವರ್ಗಾವಣೆ ಮಾಡುವುದರ ಮೂಲಕ ಬೇಟೆ ಅವನಿಗೆ ರಕ್ಷಣೆಯ ನೆಪವಾಯಿತು . ಪ್ರಾಣಿಗಳ ಕ್ರೌರ್ಯ ಮೂಲ ಪ್ರವೃತ್ತಿ ಮಾನವ ಭಯಕ್ಕೆ ಕಾರಣವಾಗಿ ಅದು ಕೂಡ ಬೇಟೆಗೆ ಹೇತುವಾಯಿತು . ಮೂಲದ ಪೃವೃತ್ತಿಯಾಗಿ ಬೇಟೆ ಕ್ರಮೇಣ ಅರಸುಗಳ ವಿನೋದದ ಅಂಗವಾಗಿ ರೂಢಿಯಲ್ಲಿತ್ತು . == ಕೆಡ್ಡಸದ ಕರೆಯೋಲೆ == ಕರಾವಳಿಯ ನಲಿಕೆ ಜನಾಂಗದವರು ಮನೆಮನೆ ಬಂದು ಕರೆ ಕಳಿಸುತ್ತಾರೆ ಅದು ಹೀಗೆ ಇದೆ. == ವಿಶೇಷ ಆಹಾರ == ಕುಡು ಅರಿ (ನನ್ಯೆರಿ) ಕೆಡ್ಡಸ ಸಮಯದಲ್ಲಿ ಕುಡು ಅರಿ (ಹುರುಳಿ,ಹೆಸರು ಕಾಳು, ಒಣಗಿದತೆಂಗಿನಕಾಯಿ,ಕುಚ್ಚುಲಕ್ಕಿಅಕ್ಕಿ , ಬೆಲ್ಲ ಮತ್ತು ಕಡಲೆಕಾಯಿಗಳ ಮಿಶ್ರಣ)ಯನ್ನು ಎಲ್ಲರಿಗೂ ಹಂಚಲಾಗುವುದು. ಏಕೆಂದರೆ ಚಳಿಗಾಲದಲ್ಲಿ ದೇಹಕ್ಕೆ ಬೇಕಾದ ಬಹಳಷ್ಟು ಪೌ‌‍‍ಷ್ಟಿಕಾಂಶಗಳನ್ನು ಮತ್ತು ಎಣ್ಣೆ ಅಂಶಗಳನ್ನು ಇದು ಒದಗಿಸುತ್ತದೆ. ಈ ಮಿಶ್ರಣವು ದೇಹವು ಚಟುವಟಿಕೆಯಿಂದಿರಲು ಸಹಾಯವಾಗುತ್ತದೆ. == ದೈವಗಳು == ಕೋಟಿ-ಚೆನ್ನಯ ಮುಗೇರ್ಲು ಉಳ್ಳಾಕುಲು == ಉಲ್ಲೇಖ ==