ಕೇಂದ್ರ ಸಾಹಿತ್ಯ ಅಕಾಡೆಮಿಯು ಒಂದು ಕೇಂದ್ರ ಸರಕಾರದ ಅನುದಾನದಲ್ಲಿ ನಡೆಯುವ ಸ್ವಾಯತ್ತ ಸಂಸ್ಥೆಯಾಗಿದೆ. ಭಾರತೀಯ ಭಾಷೆಗಳ ಅಭಿವೃದ್ಧಿ ಇದರ ಮುಖ್ಯ ಗುರಿ. ಇದನ್ನು ೧೯೫೪ರಲ್ಲಿ ಸ್ಥಾಪಿಸಲಾಯಿತು. ಸಂಶೋಧನೆ, ಪ್ರಕಾಶನ, ಗ್ರಂಥಾಲಯ, ವಿಚಾರ ಸಂಕಿರಣಗಳು ಮುಂತಾಗಿ ಹಲವಾರು ವಿಧಗಳಿಂದ ಭಾರತೀಯ ಭಾಷೆಗಳ ಅಬಿವೃದ್ದಿಗೆ ಶ್ರಮಿಸುತ್ತಿದೆ. ಇದರ ಅಂಗವಾಗಿ ೧೯೫೫ರಿಂದ ಪ್ರತಿವರ್ಷ ಸಾಹಿತ್ಯದಲ್ಲಿ ಉತ್ತಮ ಕೃಷಿ ಮಾಡಿದ ಸಾಹಿತಿಗಳಿಗೆ ಪ್ರಶಸ್ತಿ ನೀಡುತ್ತಿದೆ. == ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ == ಭಾರತದ ಈ ಕೆಳಕಂಡ ೨೪ ಭಾಷೆಗಳಲ್ಲಿ ಉತ್ತಮ ಸಾಧನೆ ಮಾಡಿರುವ ಸಾಹಿತಿಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಅಸ್ಸಾಮಿ, ಬಂಗಾಳಿ, ಬೋಡೋ, ಇಂಗ್ಲಿಷ್, ಡೋಗ್ರಿ, ಗುಜರಾತಿ, ಹಿಂದಿ, ಕನ್ನಡ, ಕಾಷ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ರಾಜಸ್ಥಾನಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಹಾಗು ಉರ್ದು ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡುವ ಕಾರ್ಯ ಸುಮಾರು ೧೨ ತಿಂಗಳು ನಡೆಯುತ್ತದೆ. ವಿಜೇತರಿಗೆ ೧ ಲಕ್ಷ ರೂ ನಗದು ಹಾಗು ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ. ಭಾರತೀಯ ಭಾಷೆಗಳ ಉತ್ತಮ ಸಾಹಿತಿಗಳನ್ನು ಗುರುತಿಸಿ, ಪ್ರೋತ್ಸಾಹಿಸುವುದು ಹಾಗು ಸಾಹಿತ್ಯ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗುರುತಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. == ಮಾಹಿತಿ ಕುತೂಹಲ == ಕೇಂದ್ರ ಸಾಹಿತ್ಯ ಅಕಾಡೆಮಿ ಪಡೆದ ತಂದೆ ಮತ್ತು ಮಗ ಎಂಬ ದಾಖಲೆ ನಿರ್ಮಿಸಿದ ಕನ್ನಡದ ಎರಡು ಜೋಡಿ: ಡಿ.ವಿ.ಗುಂಡಪ್ಪ (೧೯೬೭) - ಬಿ.ಜಿ.ಎಲ್.ಸ್ವಾಮಿ (೧೯೭೮) ಕುವೆಂಪು (೧೯೫೫) - ಕೆ.ಪಿ.ಪೂರ್ಣಚಂದ್ರ ತೇಜಸ್ವಿ (೧೯೮೭) == ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕನ್ನಡದ ಕೃತಿಗಳು ==