ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ಪ್ರಸ್ತುತ ರಾಜ್ಯಪಾಲರಾಗಿದ್ದಾರೆ. ಅವರು ಮಧ್ಯಪ್ರದೇಶದಿಂದ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ ಮೊದಲ ವ್ಯಕ್ತಿ. ಜುಲೈ 6, 2021 ರಂದು ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡು ೨೦೨೧ ರ ಜುಲೈ ೧೧ ರಂದು ಅಧಿಕಾರ ವಹಿಸಿಕೊಂಡರು.ಅವರು 2014 ರಿಂದ 2021 ರವರೆಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಭಾರತೀಯ ಸಂಸತ್ತಿನ ಮೇಲ್ಮನೆಯಲ್ಲಿ ಸದನದ ನಾಯಕರಾಗಿದ್ದರು. ಅವರು ಸಂಸದೀಯ ಮಂಡಳಿ ಮತ್ತು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿದ್ದರು. == ಆರಂಭಿಕ ಜೀವನ == ಗೆಹ್ಲೋಟ್ ರವರು ಜನಿಸಿದ್ದು ಭಾರತದ ಮಧ್ಯಪ್ರದೇಶದ ನಾಗ್ಡಾದ ರುಪೆಟಾ ಗ್ರಾಮದಲ್ಲಿ. ಅವರದ್ದು ದಲಿತ ಕುಟುಂಬ. ಅವರು ಭಾರತೀಯ ಜನತಾ ಪಕ್ಷದ ಹಿರಿಯ ಸದಸ್ಯರಾಗಿದ್ದಾರೆ ಹಾಗೂ ಅವರು ಕೇಂದ್ರ ಸರ್ಕಾರದಲ್ಲಿ ಹಲವಾರು ಬಾರಿ ಮಂತ್ರಿ ಸ್ಥಾನ ಪಡೆದರು. == ಉಲ್ಲೇಖಗಳು ==