ದಕ್ಷಿಣ ಕನ್ನಡ (ತುಳು: ಕುಡ್ಲ) ಕರ್ನಾಟಕ ರಾಜ್ಯದ ಒಂದು ಕರಾವಳಿ ಜಿಲ್ಲೆ. ಈ ಜಿಲ್ಲೆಯ ಕೇಂದ್ರಸ್ಥಳ ಹಾಗೂ ಮುಖ್ಯ ನಗರ ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆಯ ಜನಸಂಖ್ಯೆ ೨೦,೮೯,೬೪೯ ಆಗಿದ್ದು ಇದರಲ್ಲಿ ಪುರುಷರು ೧೦,೩೪,೭೧೪ ಹಾಗೂ ಮಹಿಳೆಯರು ೧೦,೫೪,೯೩೫ (೨೦೧೧ರ ಜನಗಣತಿಯಂತೆ) . ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ತಾಲ್ಲೂಕುಗಳಿವೆ. ಅವೆಂದರೆ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಬೆಳ್ತಂಗಡಿ, ಮೂಡಬಿದಿರೆ,ಹಾಗೂ ಕಡಬ. ಕೆಲವು ವರ್ಷಗಳ ಹಿಂದೆ ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳೂ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ್ದವು . ಆಗಸ್ಟ್ ೧೯೯೭ ರಲ್ಲಿ ಈ ತಾಲೂಕುಗಳನ್ನು ಉಡುಪಿ ಜಿಲ್ಲೆಯ ಭಾಗವಾಗಿ ಘೋಷಿಸಲಾಯಿತು. == ಇತಿಹಾಸ == ಹಿಂದೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಟ್ಟಾಗಿ ಕೆನರಾ '(ಕನ್ನಡ ಶಬ್ದದ ಆಂಗ್ಲೀಕೃತ ರೂಪ) ಎಂದು ಕರೆಯಲಾಗುತ್ತಿತ್ತು. ೧೮೬೦ ರಲ್ಲಿ ಬ್ರಿಟಿಷರು ಈ ಭಾಗವನ್ನು ಉತ್ತರ ಕೆನರ( ) ಮತ್ತು ದಕ್ಷಿಣ ಕೆನರ( )ಎಂದು ವಿಂಗಡಿಸಿದರು. ೧೮೬೨ ರಲ್ಲಿ ಉತ್ತರ ಕೆನರವನ್ನು ಬೋಂಬೆ ಪ್ರೆಸಿಡೆನ್ಸಿ ಹಾಗೂ ದಕ್ಷಿಣ ಕೆನರವನ್ನು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಸಲಾಯಿತು. ಕುಂದಾಪುರ ತಾಲೂಕು ಮೊದಲು ಉತ್ತರ ಕೆನರದಲ್ಲಿದ್ದರೂ ನಂತರ ದಕ್ಷಿಣ ಕೆನರಕ್ಕೆ ಸೇರಿಸಲಾಯಿತು.ಸ್ವಾತಂತ್ರ್ರ್ಯಾನಂತರ ಈ ಎರಡೂ ಜಿಲ್ಲೆಗಳು ದಕ್ಷಿಣ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾಗಿ ಬದಲಾದವು. ಸ್ವಾತಂತ್ರ್ಯದ ನಂತರ ಈ ಜಿಲ್ಲೆ ಈಗಿನ ದಕ್ಷಿಣ ಕನ್ನಡ, ಉಡುಪಿ ಹಾಗು ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡಿತ್ತು. ೧೯೫೬ರ ಪುನರ್ ವಿಂಗಡನೆ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡವನ್ನು ಮೈಸೂರು ರಾಜ್ಯಕ್ಕೆ ಹಾಗೂ ಕಾಸರಗೋಡು ಜಿಲ್ಲೆಯನ್ನು ಕೇರಳ ರಾಜ್ಯಕ್ಕೆ ಸೇರಿಸಲಾಯಿತು. ಕರ್ನಾಟಕ ಸರ್ಕಾರ ಆಗಸ್ಟ್ ೧೯೯೭ರಲ್ಲಿ, ಆಡಳಿತ ದೃಷ್ಟಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಾಗಿ ವಿಂಗಡಿಸಿತು. ಜನ ನಂಬುಗೆಯಂತೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಪಶ್ಚಿಮ ಘಟ್ಟದಿಂದ ಕರಾವಳಿವರೆಗಿನ ’ಪರಶುರಾಮ ಸೃಷ್ಟಿ’ಯ ಭಾಗವಾಗಿದೆ. ಈ ನಂಬುಗೆಯಂತೆ, ಕ್ಷತ್ರಿಯರನ್ನು ಭೂಲೋಕದಿಂದ ನಿರ್ಮೂಲನ ಮಾಡುವ ಪ್ರತಿಜ್ಙೆ ಕೈಗೊಂಡ ಪರಶುರಾಮನು ಭೂಮಿಯನ್ನು ೨೧ ಬಾರಿ ಸುತ್ತಿ ಸಕಲ ಕ್ಷತ್ರಿಯರನ್ನೂ ನಿರ್ಮೂಲನ ಮಾಡಿದ ನಂತರ ತಾನು ನೆಲೆಸಲು ಕ್ಷತ್ರಿಯರು ಕಾಲಿಡದ ಜಾಗವೊಂದನ್ನು ಸೃಷ್ಟಿಸಬಯಸುತ್ತಾನೆ. ಅದರಂತೆ ಪಶ್ಚಿಮ ಘಟ್ಟದ ಶಿಖರವೊಂದರ ಮೇಲೆ ನಿಂತು ರಕ್ತದಿಂದ ಮಲಿನವಾದ ತನ್ನ ಕೊಡಲಿ(ಪರಶು)ಯನ್ನು ಸಮುದ್ರದೆಡೆಗೆ ಎಸೆಯಲು ಸಮುದ್ರ ರಾಜನು ಕೊಡಲಿ ಬಿದ್ದಲ್ಲಿಯವರೆಗೆ ಹಿಂದೆ ಸರಿದು ಸೃಷ್ಟಿಯಾದ ಭೂಭಾಗವೇ ಈ ಪರಶುರಾಮ ಸೃಷ್ಟಿ. ಬಹುಶಃ ಪಶ್ಚಿಮ ಘಟ್ಟದ ಕೆಳಗಿನ ಭೂಭಾಗದಲ್ಲಿ ಈ ಜಿಲ್ಲೆ ಇರುವುದರಿಂದ ಈ ನಂಬಿಕೆಗೆ ಪುಷ್ಟಿ ಬಂದಿರಬಹುದು. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ೧೫೦ ಕಿಲೋ ಮೀಟರ್ ಕರಾವಳಿ ಪ್ರದೇಶವನ್ನು ಹೊಂದಿದೆ. ಇಲ್ಲಿನ ಮುಖ್ಯ ಕಸುಬು ಮೀನುಗಾರಿಕೆ. ಇಲ್ಲಿ ಆಳವಾದ ಮೀನುಗಾರಿಕೆಯನ್ನು ಮಾಡುತ್ತಾರೆ. ಭತ್ತ ಮತ್ತು ತೆಂಗು ಇಲ್ಲಿಯ ಮುಖ್ಯ ಬೆಳೆಗಳು. ಜಿಲ್ಲೆಗಳಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯಂತ ಅಭಿವೃದ್ದಿ ಹೊಂದಿದ ಜಿಲ್ಲೆ.ಮಂಗಳೂರು ನಗರವು ಇಲ್ಲಿಯ ಜಿಲ್ಲಾ ಕೇಂದ್ರವಾಗಿದೆ. ಮಂಗಳೂರು ನಗರವು ತ್ವರಿತಗತಿಯಲ್ಲಿ ಅಭಿವೃದ್ದಿ ಹೊಂದುತ್ತ ಇದೆ.ಬೆಂಗಳೂರಿನ ನಂತರ ೨ನೇ ಅಭಿವೃದ್ದಿ ಹೊಂದುತ್ತಿರುವ ನಗರ. ಇಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ,ಪ್ರಮುಖ ಬಂದರು ಇದೆ ಇದು ದೇಶದಲ್ಲಿಯೇ ೭ ಬೃಹತ್ ಬಂದರು. ಇಲ್ಲಿನ ರೈಲು ನಿಲ್ದಾಣವು ದೇಶದ ಪ್ರಮುಖ ನಿಲ್ದಾಣಗಳಲ್ಲಿ ಒಂದು.ಈ ಜಿಲ್ಲೆಯನ್ನು ಬುದ್ದಿವಂತರ ಜಿಲ್ಲೆಯೆಂದು ಕರೆಯುತ್ತಾರೆ. ಶೈಕ್ಷಣಿಕವಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಕ್ರಾಂತಿಯಲ್ಲಿ ಬಹಳ ಮುಂದುವರಿದಿದೆ. ಜಿಲ್ಲೆಯು ನೈಸಗಿ೯ಕವಾಗಿ ನೋಡಲು ಚೆಂದ ಇಲ್ಲಿಯ ಪ್ರಕೃತಿ ಸೌಂದಯ೯ವನ್ನು ನೋಡಲು ದೇಶ ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ರಮಣೀಯವಾದಂತ ಗುಡ್ಡ ಬೆಟ್ಟಗಳು, ಬಯಲು ಸೀಮೆಗಳು, ನಿತ್ಯಹರಿದ್ವಣ೯ದ ಕಾಡುಗಳು,ಸಂಜೆಯ ಹೊತ್ತಿಗೆ ಕಡಲ ತೀರದಲ್ಲಿ ಸೂಯ೯ನು ಸಮುದ್ರವನ್ನು ತನ್ನ ಅಂತರಂಗದಲ್ಲಿ ಅದುಮಿಟ್ಟಾಗೆ ಪ್ರವಾಸಿಗರಿಗೆ ಗೋಚರಿಸಲ್ಪಡುತ್ತದೆ. ಜಿಲ್ಲೆಯು ಮುಖ್ಯವಾಗಿ ಶೈಕ್ಷಣಿಕವಾಗಿ ಬಹಳ ಮುಂದುವರಿದಿದೆ. ಇಲ್ಲಿ ಅತ್ಯಂತ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತದೆ ವೈದ್ಯಕೀಯ, ದಂತ, ನಸಿ೯ಂಗ್, ಬಿ.ಪಿ.ಟಿ, ಇಂಜಿನಿಯರಿಂಗ್, ಯಮ್.ಬಿ.ಎ, ಮುಂತಾದ ಕೋಸ್೯ಗಳು ಇಲ್ಲಿ ಲಭ್ಯವಿದೆ, ಅತೀ ಕಡಿಮೆ ವೆಚ್ಚದಲ್ಲಿ ಶಿಕ್ಷಣವನ್ನು ನೀಡಲಾಗುತ್ತಿದೆ. ಸ್ವಾತಂತ್ರ್ಯದ ನಂತರ ಈ ಜಿಲ್ಲೆ ಈಗಿನ ದಕ್ಷಿಣ ಕನ್ನಡ, ಉಡುಪಿ ಹಾಗು ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡಿತ್ತು. ೧೯೫೬ರ ಪುನರ್ ವಿಂಗಡನೆ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡವನ್ನು ಮೈಸೂರು ರಾಜ್ಯಕ್ಕೆ ಹಾಗೂ ಕಾಸರಗೋಡು ಜಿಲ್ಲೆಯನ್ನು ಕೇರಳ ರಾಜ್ಯಕ್ಕೆ ಸೇರಿಸಲಾಯಿತು. ದಕ್ಷಿಣ ಕನ್ನಡವನ್ನು ಬುದ್ದಿವಂತರ ನಾಡು ಎಂದು ಕರೆಯಲಾಗುತ್ತದೆ. == ಭಾಷೆಗಳು == ತುಳು ಮಾತನಾಡುವ ಜನ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಉಡುಪಿ ಜಿಲ್ಲೆಯ ತೆಂಕು ಭಾಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಬಡಗು ಭಾಗವನ್ನು ಒಟ್ಟಾಗಿ ತುಳುನಾಡು ಎಂದು ಕರೆಯುತ್ತಾರೆ. === ಇಲ್ಲಿನ ಇತರ ಭಾಷೆಗಳೆಂದರೆ === ತುಳು ಕನ್ನಡ ಹವ್ಯಕ ಕನ್ನಡ ಕುಂದಾಪುರ ಕನ್ನಡ ಅರೆಬಾಸೆ ಕೊಂಕಣಿ ಬ್ಯಾರಿ ಭಾಷೆ == ಐತಿಹಾಸಿಕ ಸ್ಥಳಗಳು == == ಇವನ್ನೂ ನೋಡಿ == ಕರ್ನಾಟಕದ ಜಿಲ್ಲೆಗಳು ದಕ್ಷಿಣ ಕನ್ನಡ (ಲೋಕ ಸಭೆ ಚುನಾವಣಾ ಕ್ಷೇತ್ರ) ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಹಳ್ಳಿಗಳು == ಉಲ್ಲೇಖಗಳು ==