ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನವು ಭಾರತದ ರಾಷ್ಟ್ರೀಯ ಉದ್ಯಾನವನವಾಗಿದೆ. ಇದು ಭಾತದ ಕರ್ನಾಟಕದಲ್ಲಿರುವ ಬೆಂಗಳೂರಿನಲ್ಲಿದೆ. ಇದನ್ನು ೧೯೭೦ ರಲ್ಲಿ ಸ್ಥಾಪಿಸಲಾಯಿತು. ಇದನ್ನು ೧೯೭೪ ರಲ್ಲಿ ರಾಷ್ಟ್ರೀಯ ಉದ್ಯಾನವನವೆಂದು ಘೋಷಿಸಲಾಯಿತು. ೨೦೦೨ ರಲ್ಲಿ, ಉದ್ಯಾನದ ಒಂದು ಸಣ್ಣ ಭಾಗವು ಬನ್ನೇರುಘಟ್ಟ ಜೈವಿಕ ಉದ್ಯಾನವನವಾಗಿ ಪ್ರಾಣಿಶಾಸ್ತ್ರದ ಉದ್ಯಾನವಾಯಿತು. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನವು ಟ್ರೆಕ್ಕಿಂಗ್ ಮತ್ತು ಹೈಕಿಂಗ್‌ಗೆ ಒಂದು ತಾಣವಾಗಿದೆ. ರಾಷ್ಟ್ರೀಯ ಉದ್ಯಾನವನದ ಪ್ರದೇಶದಲ್ಲಿ ಕುರಿ ಮತ್ತು ಜಾನುವಾರು ಸಾಕಣೆಗಾಗಿ ಮೂರು ದೊಡ್ಡ ಆವರಣಗಳಲ್ಲಿ ಸುತ್ತುವರಿದ ಆರು ಗ್ರಾಮೀಣ ಹಳ್ಳಿಗಳಿವೆ. ೨೫ ಸಾವಿರ ಎಕರೆ ಪ್ರದೇಶದಷ್ಟು ವಿಸ್ತಾರ ಹೊಂದಿರುವ ಈ ಮೀಸಲು ಪ್ರದೇಶ ಹುಲಿ, ಸಿಂಹ, ಚಿರತೆ, ಕಾಡುಕೋಣ, ಜಿಂಕೆ, ಕರಡಿಗಳು, ಪಕ್ಷಿಗಳು ಮತ್ತು ವಿವಿಧ ಜಾತಿಯ ಚಿಟ್ಟೆಗಳ ನೆಲೆಯಾಗಿದೆ. ಪ್ರವಾಸಿಗರು ಸಫಾರಿ ಮಾಡುವಾಗ ಚಿರತೆಗಳು, ಬಿಳಿ ಹುಲಿಗಳು, ಬಂಗಾಳದ ಹುಲಿ, ಮತ್ತು ಕಾಡಿನ ರಾಜ ಸಿಂಹ ಅರಣ್ಯದಲ್ಲಿ ಸುತ್ತಾಡುವುದನ್ನು ನೋಡಬಹುದು. ಇಲ್ಲಿರುವ ಕೆಲವು ಪ್ರಾಣಿಗಳು ಸರ್ಕಸ್‌ಗಳಿಂದ ರಕ್ಷಿಸಲ್ಪಟ್ಟವುಗಳು. ಇನ್ನು ಕೆಲವು ದೇಶದ ಇತರೆಡೆಗಳಿಂದ ಕೂಡ ತರಿಸಿಕೊಳ್ಳಲಾಗಿದೆ. ಸಂಪೂರ್ಣ ರಕ್ಷಣೆಯಲ್ಲಿರುವ ಈ ಪ್ರಾಣಿಗಳು ನಾಡಿಗೆ ಬರದಂತೆ ಅರಣ್ಯದ ಸೂಕ್ಷ್ಮ ಸ್ಥಳಗಳಲ್ಲಿ ಬೇಲಿಯನ್ನು ಹಾಕಲಾಗಿದೆ. == ಭೂಗೋಳಶಾಸ್ತ್ರ == ೬೫,೧೨೭.೫ ಎಕರೆ (೨೬೦.೫೧ ಚದರ ಕಿಲೋಮೀಟರ್) ಇರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನವು ಬೆಂಗಳೂರಿನಿಂದ ದಕ್ಷಿಣಕ್ಕೆ ೨೨ ಕಿಮೀ ದೂರದಲ್ಲಿ ಆನೇಕಲ್ ಶ್ರೇಣಿಯ ಬೆಟ್ಟಗಳಲ್ಲಿ ೧೨೪೫ - ೧೬೩೪ ಮೀ ಎತ್ತರದಲ್ಲಿದೆ. ಈ ಉದ್ಯಾನವನವು ತೇವಾಂಶವುಳ್ಳ ಎಲೆಯುದುರುವ ಅರಣ್ಯ ಕಣಿವೆಗಳು ಮತ್ತು ಎತ್ತರದ ಪ್ರದೇಶಗಳಲ್ಲಿ ಕುರುಚಲು ಪ್ರದೇಶದ ಅಡಿಯಲ್ಲಿ ಗ್ರಾನೈಟ್ ಹಾಳೆಗಳ ಗುಡ್ಡಗಾಡು ಪ್ರದೇಶವನ್ನು ಹೊಂದಿದೆ. == ಹುಲಿ ಮತ್ತು ಸಿಂಹಧಾಮ == ಬನ್ನೇರುಘಟ್ಟ ಹುಲಿ ಮತ್ತು ಸಿಂಹಧಾಮ ಹುಲಿ, ಇಂಡಿಯನ್ ಹುಲಿಗಳನ್ನು ,ಸಿಂಹಗಳನ್ನು ಮತ್ತು ಇತರೆ ಸಸ್ತನಿಗಳನ್ನು ಹೊಂದಿದೆ. ಇಲ್ಲಿ ಹುಲಿ, ಸಿಂಹಗಳನ್ನು ನೋಡಲು ಮಿನಿ-ಸಫಾರಿಯ ವ್ಯವಸ್ಥೆ ಕೂಡ ಇದೆ. == ಮೃಗಾಲಯ == ಮೃಗಾಲಯದಲ್ಲಿ ಮೃಗಾಲಯದಲ್ಲಿ ಒಂದು ವಸ್ತು ಸ೦ಗ್ರಹಾಲಯವೂ ಸಹ ಇದೆ. ಅದರಲ್ಲಿ ಪ್ರಾಣಿಶಾಸ್ತ್ರಕ್ಕೆ ಸ೦ಬ೦ಧಪಟ್ಟ ವಸ್ತುಗಳ ಪ್ರದರ್ಶನ ಮಾಡಲಾಗಿದೆ. ಈ ಮೃಗಾಲಯದಲ್ಲಿ ಸರೀಸೃಪ ಉದ್ಯಾನ ಮತ್ತು ಒಂದು ಸಣ್ಣ ರ೦ಗಮ೦ದಿರವನ್ನೂ ಸಹ ಇದು ಹೊಂದಿದೆ. == ಜಂಗಲ್ ಸಫಾರಿ == ಬನ್ನೇರಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಕೂಡ ಮಾಡಬಹುದು. ಪ್ರವಾಸಿಗರು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಮಾಡುತ್ತ ಕಾಡಾನೆಗಳು, ಕಾಡುಹಂದಿ, ಮಚ್ಚೆಯುಳ್ಳ ಜಿಂಕೆ ಸೇರಿದಂತೆ ವಿವಿಧ ಜಾತಿ ಜಿಂಕೆ, ಸಾಂಬಾರ್, ಗುಳ್ಳೆನರಿ, ಕರಡಿ, ಕಾಡು ಹಂದಿ, ಲಂಗೂರ್ ಗಳು ಮತ್ತು ಕೋತಿಗಳನ್ನು ನೋಡಬಹುದು. ಜಂಗಲ್ ಸಫಾರಿಯೊಂದಿಗೆ ಆನೆ ಸವಾರಿಯನ್ನು ಸಹ ಮಾಡಬಹುದು. ಬನ್ನೇರಘಟ್ಟ ಅರಣ್ಯ ಪ್ರದೇಶದಲ್ಲಿಯೇ ಹುಟ್ಟಿದ ಸ್ವರ್ಣಮುಖಿ ಹೊಳೆಯು ಅರಣ್ಯದುದ್ದಕ್ಕೂ ಹರಿಯುತ್ತದೆ. ಅಲ್ಲಿ ಚಂಪಕ ಧಾಮ ಸ್ವಾಮಿಯ ದೇವಸ್ಥಾನ ಇದೆ. ಭಗವಾನ್ ವಿಷ್ಣು ಮತ್ತು ಅವನ ಪತ್ನಿಯರಾದ, ಶ್ರೀ ದೇವಿ ಮತ್ತು ಭೂದೇವಿಯರಮೂರ್ತಿಗಳಿವೆ. ಮೃಗಾಲಯವು ವಾರದ ದಿನಗಳಲ್ಲಿ ಹಾಗೂ ವಾರದ ಕೊನೆಯ ದಿನಗಳಲ್ಲಿ (ರಜಾದಿನಗಳಲ್ಲಿ) ಬೇರೆ ಬೇರೆ ಪ್ರವೇಶ ಶುಲ್ಕವನ್ನು ಹೊಂದಿರುತ್ತದೆ. == ಬಟರ್‌ಫ್ಲೈ ಪಾರ್ಕ್ == ಈ ಉದ್ಯಾನವನದಲ್ಲಿ ದೇಶದಲ್ಲೇ ಮೊಟ್ಟ ಮೊದಲನೇಯದಾದ ಚಿಟ್ಟೆಗೆಂದೇ ಇರುವ ಉದ್ಯಾನವನವಿದೆ. ಇದು ೭.೫ ಎಕರೆ ವಿಸ್ತೀರ್ಣದಲ್ಲಿದೆ. ಈ ಚಿಟ್ಟೆ ಉದ್ಯಾನವನವನ್ನು ೨೦೦೬ ರಲ್ಲಿ ಕೇಂದ್ರ ಸಚಿವ ಕಪಿಲ ಸಿಬಲ್ ಉದ್ಘಾಟಿಸಿದ್ದಾರೆ. ಸುಮಾರು ೨೦ ರೀತಿಯ ವಿವಿಧ ಜಾತಿಯ ಚಿಟ್ಟೆಗಳನ್ನು ಬಟರ್‌ಫ್ಲೈ ಪಾರ್ಕ್‌ನಲ್ಲಿ ಕಾಣಬಹುದು.ಪ್ರತಿ ಮಂಗಳವಾರ ವಾರದ ರಜೆ ಇರುತ್ತದೆ. ಬಟರ್‌ಫ್ಲೈ ಸಂರಕ್ಷಣೆ ಮಾಡುವ ಸ್ಥಳವು ಒಂದು ಪಾಲಿಕಾರ್ಬೊನೇಟ್ ಮೇಲ್ಛಾವಣಿಯನ್ನು ಹೊಂದಿದೆ. ಇದು ಸುಮಾರು ೧೦,೦೦೦ ಚದರ ಅಡಿ (೧,೦೦೦ ಚದರ ಮೀಟರ್) ವಿಸ್ತಾರವಾಗಿದೆ. ಇದು ಗೋಳಾಕೃತಿಯ ಸುತ್ತುವರಿಕೆ ಇದ್ದು, ಒಳಭಾಗದಲ್ಲಿ ಸುಮಾರು ೨೦ ತಳಿಗಳ ಬಟರ್‌ಫ್ಲೈಗಳು ವಾಸಿಸಲು ಬೇಕಾದ ವಾತಾವರಣವನ್ನು ವಿನ್ಯಾಸಗೊಳಿಸಿದ್ದಾರೆ. == ನೀರಿನ ಮೂಲಗಳು == ಉದ್ಯಾನವನದಲ್ಲಿ ಮಳೆಯು ವರ್ಷಕ್ಕೆ ಸುಮಾರು ೭೦೦ ಮಿಮೀನಷ್ಟು ಸುರಿಯುತ್ತದೆ. ಸುವರ್ಣಮುಖಿ ಹೊಳೆಯು ಈ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದು ಹೋಗುತ್ತದೆ. ೧೫ ಮೇ ೨೦೧೪ ರಂದು ಒಣ(ಬೇಸಿಗೆ) ಸಮಯದಲ್ಲಿ ನೀರು ಒದಗಿಸಲು ನಾಲ್ಕು ಕೊಳವೆ ಬಾವಿಗಳನ್ನು ತೆರೆಯಲಾಯಿತು. == ಸಸ್ಯವರ್ಗ‌ಗಳು, ಪ್ರಾಣಿಸಂಕುಲಗಳು ಮತ್ತು ಸರೀಸೃಪಗಳು == == ಗ್ಯಾಲರಿ == ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ == ಸಹ ನೋಡಿ == ಬಯಲುಸೀಮೆ ತ್ಯಾವರೆಕೊಪ್ಪ ವನ್ಯಧಾಮ == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == , ’ , , 5. , 15 1992. 22 2015 ವೇಬ್ಯಾಕ್ ಮೆಷಿನ್ ನಲ್ಲಿ., .. , . " ". 4 ಮಾರ್ಚ್ 2016. 22 ಜೂನ್ 2017.