ಬೆಳ್ಳೂರು ಚಂದ್ರಶೇಖರಯ್ಯ ನಾಗೇಶ್ ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, ಅವರು ೦೪ ಆಗಸ್ಟ್ ೨೦೨೧ ರಿಂದ ಕರ್ನಾಟಕದ ಪ್ರಸ್ತುತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಮತ್ತು ಸಕಾಲ ಸಚಿವರಾಗಿದ್ದಾರೆ. ಅವರು ತಿಪಟೂರಿನಿಂದ ಎರಡು ಬಾರಿ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದಾರೆ . == ಆರಂಭಿಕ ಜೀವನ ಮತ್ತು ಶಿಕ್ಷಣ == ನಾಗೇಶ್ ಹುಟ್ಟಿದ್ದು ತುಮಕೂರು ಜಿಲ್ಲೆಯಲ್ಲಿ . ಅವರು ಬಿ ಎಂ ಶ್ರೀನೀವಾಸಯ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಪಡೆದರು. ಅಂತೆಯೇ ಅವರ ವಿದ್ಯಾರ್ಥಿ ದಿನಗಳಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನ ಭಾಗವಾಗಿದ್ದರು. ಪಾಲಕರು: ಬಿ ಎಸ್ ಚಂದ್ರಶೇಖರಯ್ಯ ಮತ್ತು ಬಿ ಸಿ ಸಾವಿತ್ರಮ್ಮ == ರಾಜಕೀಯ ವೃತ್ತಿಜೀವನ == ಅವರು ತಮ್ಮ ರಾಜಕೀಯ ಜೀವನವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಪ್ರಾರಂಭಿಸಿದರು ಮತ್ತು ಹಲವಾರು ವರ್ಷಗಳಿಂದ ಸಂಘದ ಪೂರ್ಣ ಸಮಯದ ಕಾರ್ಯಕರ್ತರಾಗಿದ್ದಾರೆ. ಅವರು ೧೯೮೪ ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. ಅವರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್ ಸಂತೋಷ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ನಾಗೇಶ್ ಅವರು ೨೦೦೮ ಮತ್ತು ೨೦೧೮ ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಿಪಟೂರು ಕ್ಷೇತ್ರದಿಂದ ಗೆದ್ದಿದ್ದರು. ೨೦೨೧ ರಲ್ಲಿ, ಅವರು ಬಸವರಾಜ ಬೊಮ್ಮಾಯಿ ಸಚಿವಾಲಯಕ್ಕೆ ಸೇರ್ಪಡೆಗೊಂಡರು ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದರು. == ಉಲ್ಲೇಖಗಳು ==