ಮಲ್ಲಿಕಾರ್ಜುನ ಭೀಮರಾಯಪ್ಪ ಮನ್ಸೂರ್ (೧೯೧೧–೧೯೯೨) ಒಬ್ಬ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ. ಇವರು ಜೈಪುರ-ಅತ್ರೋಲಿ ಘರಾನಾದ 'ಖಯಾಲಿ' ಶೈಲಿಯ ಸಂಗಿತಗಾರರಾಗಿದ್ದರು. ಇವರಿಗೆ ೩ ಪದ್ಮ ಪ್ರಶಸಿಗಳನ್ನು ನೀಡಿ ಭಾರತ ಸರ್ಕಾರ ಗೌರವಿಸಿದೆ: ೧೯೭೦ರಲ್ಲಿ ಪದ್ಮಶ್ರೀ, ೧೯೭೬ರಲ್ಲಿ ಪದ್ಮ ಭೂಷಣ, ಮತ್ತು ೧೯೯೨ರಲ್ಲಿ ಪದ್ಮವಿಭೂಷಣ. "ಮಲ್ಲಿಕಾರ್ಜುನ ಮನ್ಸೂರ್‌" ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕರಾಗಿದ್ದಾರೆ. == ಜನನ ಮತ್ತು ಆರಂಭಿಕ ಜೀವನ == ಮಲ್ಲಿಕಾರ್ಜುನರು ಜನಿಸಿದ್ದು ಧಾರವಾಡ ಸಮೀಪದ ‘ಮನಸೂರ’ ಎಂಬ ಗ್ರಾಮದಲ್ಲಿ ೧೯೧೧ರ ಡಿಸೆಂಬರ್ ೩೧ ರಂದು.ತಂದೆ ಭೀಮರಾಯಪ್ಪ ಊರಿನ ಗೌಡರು. ನಾಟಕ-ಸಂಗೀತದ ಪರಮಭಕ್ತರು. ತಾಯಿ ನೀಲಮ್ಮ ಜನಪದ ಗೀತೆಗಳ ಭಕ್ತೆ. ಗ್ರಾಮದಲ್ಲಿ ನಡೆದ ನಾಟಕ ತಾಲೀಮಿನತ್ತ ಬಾಲಕ ಮಲ್ಲಿಕಾರ್ಜುನನ ಲಕ್ಷ್ಯ ಹರಿಯಿತು. ಅಣ್ಣ ಬಸವರಾಜನೊಡನೆ ಶಾಲೆಗೆ ವಿದಾಯ ಹೇಳಿ ವಾಮನರಾವ್‌ ಮಾಸ್ತರ ನಾಟಕ ಕಂಪೆನಿಯಲ್ಲಿ ಸೇರ್ಪಡೆಯಾದ. ಮಧುರ ಕಂಠದಿಂದ ಗ್ವಾಲಿಯರ್ ಘರಾಣಿಯ ಪಂ. ನೀಲಕಂಠ ಬುವಾರ ಮನಗೆದ್ದ. ಮಿರಜಿಗೆ ಬಂದು ಅವರಲ್ಲಿ ನಾಲ್ಕಾರು ವರ್ಷ ಸಂಗೀತ ಕಲಿತ. ಮುಂದೆ ಮುಂಬೈಗೆ ಹೋದ ಮಲ್ಲಿಕಾರ್ಜುನ ಎಚ್‌.ಎಂ.ವಿ. ಕಂಪನಿಗೆ ಅನೇಕ ರಾಗ ಹಾಡಿದ ಜೈಪುರ ಕಿರಾಣಿಯ ವಿಖ್ಯಾತ ಗಾಯಕ ಉಸ್ತಾದ್‌ ಅಲ್ಲಾದಿಯಾ ಖಾನ್‌ ಮಕ್ಕಳಾದ ಮಂಜಿಖಾನ್‌ ನಂತರ ಬುರ್ಜಿಖಾನರಲ್ಲಿ ಸಂಗೀತದ ಉನ್ನತ ಶಿಕ್ಷಣ ಪಡೆದು ವಿಖ್ಯಾತ ಜೈಪುರು – ಅತ್ರೌಲಿ ಗಾಯಕರೆನಿಸಿದರು. == ವಿಶೇಷತೆ == ಮಲ್ಲಿಕಾರ್ಜುನ ಮನ್ಸೂರ್' ಕನ್ನಡ ನಾಡು ಕಂಡ ಶ್ರೇಷ್ಠ ಸಂಗೀತ ಪ್ರತಿಭೆ ಎಂದು ಪರಿಗಣಿಸಲಾಗಿದೆ. ಇವರು ಹಾಡಿದ್ದು ಹಿಂದೂಸ್ತಾನಿ ಖಯಾಲ್ ಸಂಗೀತ ಶೈಲಿಯ ಜೈಪುರಿ-ಅತ್ರೊಲಿ ಘರಾಣೆಯಯಲ್ಲಿ. ನೀಲಕಂಠ ಬುವಾ ಮತ್ತು ಪ್ರಖ್ಯಾತ ಸಂಗೀತಕಾರ ಅಲ್ಲಾದಿಯಾ ಖಾನ್ ಅವರ ಪುತ್ರರಾದ ಮಂಜಿ ಖಾನ್ ಹಾಗೂ ಬುರಜಿ ಖಾನ್ ಇವರ ಸಂಗೀತ ಗುರುಗಳಲ್ಲಿ ಪ್ರಮುಖರಾಗಿದ್ದಾರೆ. ಸುಮಾರು ೬೦ ವರುಷಗಳಿಗಿಂತ ಹೆಚ್ಚು ಕಾಲ ದೇಶ-ವಿದೇಶಗಳಲ್ಲಿ ಸಂಗೀತ ಸುಧೆಯನ್ನು ಹರಿಸಿದ ಮಹಾನ್ ಸಂಗೀತಗಾರ ಮಲ್ಲಿಕಾರ್ಜುನ ಮನ್ಸೂರ್. ಬಾಲ್ಯದಲ್ಲಿ ನಾಟಕಗಳಲ್ಲಿ ಪಾತ್ರ ಮಾಡಿ, ಪ್ರಹ್ಲಾದ, ಧ್ರುವ, ನಾರದ ಮೊದಲಾದ ಪಾತ್ರಗಳ ಅಭಿನಯಕ್ಕಾಗಿ ಅಪಾರ ಜನಪ್ರಿಯತೆ ಗಳಿಸಿದರೂ, ಸಂಗೀತದ ಒಲವು ಅವರನ್ನು ಸಂಗೀತದ ಸಾಧನೆಗೆ ಕರೆದೊಯ್ಯಿತು. ಬಡ ಕುಟುಂಬದಿಂದ ಬಂದ ಮಲ್ಲಿಕಾರ್ಜುನ ಮನ್ಸೂರ್, ಸರಳ ಜೀವನ, ವಿನಯತೆ ಮತ್ತು ನೇರನುಡಿಗಾಗಿ ಪ್ರಸಿದ್ಧರು. ಸಂಗೀತವೇ ನನ್ನ ಜೀವನ, ನನ್ನ ಕಾಯಕ ಮತ್ತು ಪೂಜೆ ಎಂದು ಹೇಳಿ, ಬಾಳಿದವರು ಮಲ್ಲಿಕಾರ್ಜುನ ಮನ್ಸೂರ್. ಮಹಾತ್ಮ ಗಾಂಧೀಜಿ ಮತ್ತು ಧಾರವಾಡದ ಮುರುಘಾ ಮಠದ ಮೃತ್ಯುಂಜಯ ಮಹಾಸ್ವಾಮಿಗಳವರಿಂದ ಪ್ರಭಾವಿತರಾದ ಇವರು, ವಚನ ಸಂಗೀತಕ್ಕಾಗಿ ನೀಡಿದ ಕೊಡುಗೆ ಅಪಾರ. ಇವರು ತಮ್ಮ ಜೀವನ ಚಿತ್ರವನ್ನು "ನನ್ನ ರಸಯಾತ್ರೆ" ಎಂಬ ಹೆಸರಿನ ಪುಸ್ತಕದಲ್ಲಿ ದಾಖಲಿಸಿದ್ದಾರೆ. ದೇಶದ ಪ್ರತಿಷ್ಠತ ಪ್ರಶಸ್ತಿ ಕಾಳಿದಾಸ ಸಮ್ಮಾನ್ ಪಡೆದ ಪ್ರಥಮ ಕನ್ನಡಿಗ ಸಂಗೀತಗಾರರು ಇವರು. ಕರ್ನಾಟಕ ವಿಶ್ವವಿದ್ಯಾಲಯವು ಇವರಿಗೆ ಗೌರವ ಡಾಕ್ಟರೇಟ್ ನೀಡಿದೆ.ಭಾರತ ಸರಕಾರ ಇವರಿಗೆ ಪದ್ಮವಿಭೂಷಣಪ್ರಶಸ್ತಿಯನ್ನಿತ್ತು ಗೌರವಿಸಿದೆ. ಪ್ರಚಾರ, ರಾಜಕೀಯದಿಂದ ದೂರ ಉಳಿದ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಗಳು,ಸನ್ಮಾನಗಳಿಗಾಗಿ ಹಾತೊರಯಲಿಲ್ಲ. ಇವರ ಸುಪುತ್ರ ರಾಜಶೇಖರ ಮನ್ಸೂರ್ ತಂದೆಯಂತೆ ಪ್ರಸಿದ್ಧ ಸಂಗೀತಕಾರರಾಗಿದ್ದಾರೆ. == ವೃತ್ತಿಜೀವನ == ಮನ್ಸೂರ್ ಅವರು ದೊಡ್ಡ ಪ್ರಮಾಣದ ಅಪರೂಪದ (ಅಪ್ರಚಲಿತ) ರಾಗಗಳಾದ ಶುದ್ಧ ನಾಟ, ಅಸಾ ಜೋಜಿಯ, ಹೇಮ್ ನಾಟ್ , ಲಚಚಾಕ್, ಖಾತ್, ಶಿವಮತ್ ಭೈರವ್, ಬಿಹಾರಿ, ಸಂಪೂರ್ಣ ಮಾಲ್ಕೌಂಸ್, ಲಾಜವಂತಿ, ಅಡಂಬರಿ ಕೇದಾರ್, ಏಕ್ ನಿಶಾದ್ ಬಿಹಾಗ್ಡಾ ಮತ್ತು ಬಹಾದುರಿ ತೋಡಿ ಗಳನ್ನು ಜನಪ್ರಿಯಗೊಳಿಸಿದರು. ಹಾಡಿನ ಭಾವನಾತ್ಮಕ ವಿಷಯವನ್ನು ಅವರು ಕಳೆದುಕೊಳ್ಳದೇ ನಿರಂತರ, ಮಧುರ ಮತ್ತು ಮೀಟರ್ನಲ್ಲಿ ಹಾಡುತ್ತಿದ್ದರು ಅವರ ಧ್ವನಿ ಮತ್ತು ಶೈಲಿ ಮಂಜಿ ಖಾನ್ ಮತ್ತು ನಾರಾಯಣರಾವ್ ವ್ಯಾಸ್ನಂತೆ ಹೋಲುತ್ತಿತ್ತು, ಆದರೆ ಕ್ರಮೇಣ ಅವರು ತಮ್ಮ ಸ್ವಂತ ಶೈಲಿಯ ಚಿತ್ರಣವನ್ನು ಅಭಿವೃದ್ಧಿಪಡಿಸಿದರು. ಅವರು ಅವರ ಮಾಸ್ಟರ್ಸ್ ವಾಯ್ಸ್ ಜೊತೆಗೆ ಸಂಗೀತ ನಿರ್ದೇಶಕರಾಗಿದ್ದರು ಮತ್ತು ಆಲ್ ಇಂಡಿಯಾ ಆಕಾಶವಾಣಿ ಕೇಂದ್ರ ಧಾರವಾಡದಲ್ಲಿ ಸಂಗೀತ ಸಲಹೆಗಾರಾಗಿದ್ದರು. == ಪ್ರಶಸ್ತಿಗಳು == ಅವರಿಗೆ ದೊರೆತ ಪ್ರಶಸ್ತಿ ಪುರಸ್ಕಾರಗಳು ಅನಂತ. ಗದುಗಿನ ಸಂಗೀತಾಸಕ್ತರ ಬಳಗದ ‘ಸಂಗೀತ ರತ್ನ (೧೯೩೦), ‘ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ’ ಪಡೆದ ‘ಮೊದಲ ಹಿಂದುಸ್ಥಾನಿ ಗಾಯಕ’ (೧೯೬೦) ‘ಕರ್ನಾಟಕ ಸಾರ್ವಜನಿಕ ಸೇವಾ ಪ್ರಶಸ್ತಿ’ (೧೯೬೮), ‘ಪದ್ಮಶ್ರೀ’ (೧೯೭೦), ‘ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ’ (೧೯೭೬), ‘ಪದ್ಮಭೂಷಣ’ (೧೯೭೬), ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ (೧೯೭೫), ಮಧ್ಯ ಪ್ರದೇಶ ಸರ್ಕಾರದ ಕಾಳಿದಾಸ ಸಮ್ಮಾನ’ (೧೯೮೧), ಕೋಲ್ಕತ್ತಾದ ವಿಶ್ವಭಾರತಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ (೧೯೭೫), ಮಧ್ಯ ಪ್ರದೇಶ ಸರ್ಕಾರದ ಕಾಳಿದಾಸ ಸಮ್ಮಾನ’ (೧೯೮೧), ಕೋಲ್ಕತ್ತಾದ ವಿಶ್ವಭಾರತಿ ವಿಶ್ವವಿದ್ಯಾಲಯದ ಪ್ರಪ್ರಥಮ ‘ದೇಶಿಕೋತ್ತಮ ಪ್ರಶಸ್ತಿ’ (೧೯೮೮), ‘ಉಸ್ತಾದ್‌ ಹಾಫೀಜ್‌ ಅಲಿಖಾನ್‌ ಪ್ರಶಸ್ತಿ’ (೧೯೯೧) ಕರ್ನಾಟಕ ಸರ್ಕಾರದ ‘ವಿಧಾನ ಪರಿಷತ್‌ ಸದಸ್ಯತ್ವದ ಗೌರವ ‘ಪದ್ಮ ವಿಭೂಷಣ ಪ್ರಶಸ್ತಿ- ಮುಂತಾದ ಪ್ರಶಸ್ತಿ ಪುರಸ್ಕಾರ ಅವರಿಗೆ ಸಂದಿವೆ. ಅ.ನ.ಕೃ. ಹಾಘೂ ಶಿ.ಶಿ. ಬಸವನಾಳರ ಪ್ರೇರಣೆ ಧಾರವಾಡ ಮುರುಘಾ ಮಠದ ಪೂಜ್ಯ ಶ್ರೀ ಮೃತ್ಯುಂಜಯ ಅಪ್ಪಗಳ ಆಶೀರ್ವಾದದ ಬಲದಿಂದ ಬಯಾಲದಷ್ಟೇ ಎತ್ತರವನ್ನು ವಚನಗಾಯನದಲ್ಲೂ ಪಡೆದವರು. ಕರ್ನಾಟಕ ವಿಶ್ವವಿದ್ಯಾಲಯ ಅವರಿಗೆ ‘ಸಂಗೀತ ರತ್ನ’ ಗೌರವ ಗ್ರಂಥ ಅರ್ಪಿಸಿದೆ. ‘ನನ್ನ ರಸ ಯಾತ್ರೆ’ ಅವರ ಆತ್ಮಚರಿತ್ರೆ ಗ್ರಂಥ. ಕರ್ನಾಟಕ ವಿಶ್ವವಿದ್ಯಾಲಯದ ಸಂಗೀತ ಅಧ್ಯಯನ ಪೀಠದ ಮೊದಲ ನಿರ್ದೇಶಕರಾಗಿ ಸೇವೆ. ೧೯೯೨ರ ಸೆಪ್ಟೆಂಬರ್ ೧೨ರಂದು ಲಿಂಗೈಕ್ಯರಾದ ಡಾ. ಮಲ್ಲಿಕಾರ್ಜುನ ಮನಸೂರ ಅವರ ಶಿಷ್ಯ ಸಂಪತ್ತು ಅಪಾರ. ಅವರ ಶಿಷ್ಯರಲ್ಲಿ ಪಂ ಸಿದ್ಧರಾಮ ಜಂಬಲದಿನ್ನಿ ಪಂ. ಪಂಚಾಕ್ಷರಿಸ್ವಾಮಿ ಮತ್ತಿಗಟ್ಟಿ. ಡಾ. ರಾಜಶೇಖರ ಮನಸೂರ (ಮಗ), ಶ್ರೀಮತಿ ನೀಲಮ್ಮ ಕೊಡ್ಲಿ (ಮಗಳು) ಪ್ರೊ. ಅಜ್ಜಣ್ಣ ಪಾಟೀಲ (ಅಳಿಯ), ಬಿ.ಸಿ. ಪಾಟೀಲ, ಪ್ರೊ. ರಾಜೀವ ಪುರಂದರೆ, ಗೀತಾ ಕುಲಕರ್ಣಿ, ಶಂಕರ ಮೊಕಾಶಿ ಪುಣೆಕರ, ಗೋದೂತಾಯಿ ಹಾನಗಲ್ಲ, ವಾಯ್‌, ಎಫ್‌, ಬಂಗ್ಲೇದ ಮುಂತಾದವರು ಸಂಗೀತ ಕ್ಷೇತ್ರದಲ್ಲಿ ಹೆಸರು ಪಡೆದಿದ್ದಾರೆ. ಕರ್ನಾಟಕ ಸರ್ಕಾರ ಧಾರವಾಡದಲ್ಲಿ ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಸ್ಥಾಪಿಸಿ, ಪ್ರತಿ ವರ್ಷ ರಾಷ್ಟ್ರ ಮಟ್ಟದ ಸಂಗೀತಗಾರರ ಮನಸೂರ ಸಮ್ಮಾನ ಪ್ರಶಸ್ತಿ ನೀಡುತ್ತಿದೆ. == ಬಾಹ್ಯ ಸಂಪರ್ಕಗಳು == : 2012-02-13 ವೇಬ್ಯಾಕ್ ಮೆಷಿನ್ ನಲ್ಲಿ. 2005-04-07 ವೇಬ್ಯಾಕ್ ಮೆಷಿನ್ ನಲ್ಲಿ. - , 2004 2007-09-29 ವೇಬ್ಯಾಕ್ ಮೆಷಿನ್ ನಲ್ಲಿ. [೧] == ಉಲ್ಲೇಖಗಳು == +