ಇದು ಕರ್ನಾಟಕ ಸರ್ಕಾರದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಿಂದ ತಯಾರಾಗುವ ಸಾಬೂನಿನ ಒಂದು ಬ್ರ್ಯಾಂಡ್. ಸಂಪೂರ್ಣ ಗಂಧದೆಣ್ಣೆಯಿಂದ ತಯಾರಿಸಲಾಗುವ ಜಗತ್ತಿನ ಏಕೈಕ ಸಾಬೂನು ಎಂದು ಪ್ರಸಿದ್ಧವಾಗಿದೆ. ಇದು ೧೯೧೬ರಿಂದ ತಯಾರಾಗುತ್ತಿದೆ. ಆಗ ಮೈಸೂರು ಸಂಸ್ಥಾನದ ರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ರು ಬೆಂಗಳೂರಿನಲ್ಲಿ ಸರ್ಕಾರಿ ಸೋಪ್ ಫ್ಯಾಕ್ಟರಿಯನ್ನು ಸ್ಥಾಪಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್, ವಿಶ್ವೇಶ್ವರಯ್ಯ, ಶ್ರೀ ಎಸ್. ಜಿ. ಶಾಸ್ತ್ರಿ ಈ ಮೂವರು ಮೈಸೂರು ಸ್ಯಾಂಡಲ್ ಸೋಪ್‍ನ ಪ್ರವರ್ತಕರು. ಮೊದಲನೇ ವಿಶ್ವಯುದ್ಧದ ಕಾರಣದಿಂದ ಯುರೋಪಿಗೆ ರಫ್ತು ಸಾಧ್ಯವಾಗದಿದ್ದಾಗ ಹೇರಳವಾಗಿ ದೊರೆಯುತ್ತಿದ್ದ ಗಂಧದ ಮರ ಮತ್ತು ಹೇರಳವಾಗಿದ್ದ ಗಂಧದ ಮರದ ದಾಸ್ತಾನು ಇದಕ್ಕೆ ಮುಖ್ಯ ಪ್ರೇರಣೆಯಾಗಿತ್ತು. ೧೯೮೦ರಲ್ಲಿ ಸರ್ಕಾರಿ ಸೋಪ್ ಕಾರ್ಖಾನೆ ಮತ್ತು ಶಿವಮೊಗ್ಗದ ಗಂಧದೆಣ್ಣೆ ಕಾರ್ಖಾನೆಗಳನ್ನು ಮಿಳಿತಗೊಳಿಸಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಂಪನಿ () ಮಾಡಲಾಯಿತು. 'ಭಾರತದ ಭೌಗೋಳಿಕ ಸಂಕೇತ 2013-08-26 ವೇಬ್ಯಾಕ್ ಮೆಷಿನ್ ನಲ್ಲಿ.' () ಅಡಿಯಲ್ಲಿ ಈ ಸಾಬೂನಿನ ಬ್ರ್ಯಾಂಡ್ ಹೆಸರು ಬಳಸಲು, ಗುಣಮಟ್ಟದ ಕಾಪಾಡುವಿಕೆಗೆ, ನಕಲು ತಡೆಯುವಿಕೆ ಮತ್ತು ಅನಧಿಕೃತ ಬಳಕೆ ತಡೆಯುವಿಕೆ ಮಾಡಲು ಹಕ್ಕುಸ್ವಾಮ್ಯ ಹೊಂದಿದೆ. == ಇತಿಹಾಸ == ಇಪ್ಪತ್ತನೇ ಶತಮಾನದ ಮೊದಲಲ್ಲಿ, ಮೈಸೂರು ರಾಜ್ಯವು ಜಗತ್ತಿನಲ್ಲಿ ದೊಡ್ಡಮಟ್ಟದ ಗಂಧದಮರ ಉತ್ಪಾದಕರಲ್ಲಿ ಒಂದಾಗಿತ್ತು. ಮರವನ್ನು ರಫ್ತು ಮಾಡುತ್ತಿತ್ತು. ಅದರಲ್ಲಿ ಹೆಚ್ಚಿನದು ಯುರೋಪಿಗೆ ರಫ್ತಾಗುತ್ತಿತ್ತು. ವಿಶ್ವಯುದ್ಧದ ಕಾರಣವಾಗಿ ರಫ್ತುಮಾಡಲು ಸಾಧ್ಯವಾಗದೇ ಇದ್ದಾಗ ಹೇರಳವಾದ ಗಂಧದಮರದ ದಾಸ್ತಾನು ಉಳಿಯಿತು. ಇದನ್ನು ಸದುಪಯೋಗಪಡಿಸಿಕೊಳ್ಳಲು ಮೈಸೂರಿನ ರಾಜ ನಾಲ್ವಡಿ ಕೃಷ್ಣರಾಜ ಒಡೆಯರರು ಸರ್ಕಾರಿ ಸಾಬೂನು ಕಾರ್ಖಾನೆಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದರು. ಅದೇ ವರ್ಷ ಮೈಸೂರಿನಲ್ಲಿ ಗಂಧದ ಮರದಿಂದ ಎಣ್ಣೆ ತೆಗೆಯುವಂತಹ ಕಾರ್ಖಾನೆಯೂ ಸ್ಥಾಪಿಸಲ್ಪಟ್ಟಿತು. ಶ್ರೀ ಎಸ್.ಜಿ.ಶಾಸ್ತ್ರಿ ಇವರು ೧೯೧೬ರಲ್ಲಿ ಅಭಿವೃದ್ಧಿಪಡಿಸಿದ ಶ್ರೀಗಂಧದ ಸುಗಂಧ ದ್ರವ್ಯವು ಸಾಬೂನು ತಯಾರಿಕೆಗೆ ಮೂಲದ್ರವ್ಯವಾಗಿ ಪರಿಗಣಿಸಲ್ಪಟ್ಟು ಬಳಸಲ್ಪಟ್ಟಿತು. ಶ್ರೀಗಂಧದೆಣ್ಣೆಯ ಸುಗಂಧವನ್ನು ಪ್ರಮುಖ ದ್ರವ್ಯ ವಸ್ತುವಾಗಿ ಬಳಸಿ, ಮೈಸೂರು ಸ್ಯಾಂಡಲ್ ಸಾಬೂನನ್ನು ವಿಶಿಷ್ಟ ಆಕಾರ, ಕವಚದಲ್ಲಿ ತಯಾರಿಸಿ, ಪ್ರಪ್ರಥಮವಾಗಿ ೧೯೧೮ ರ ನವಂಬರ್ ಮಾಹೆಯಲ್ಲಿ ಮಾರುಕಟ್ಟೆಗೆ ಪರಿಚಯಸಲಾಯಿತು. ನಂತರ ೧೯೪೪ರಲ್ಲಿ ಶಿವಮೊಗ್ಗದಲ್ಲಿ ಶ್ರೀಗಂಧದೆಣ್ಣೆ ಕಾರ್ಖಾನೆಯನ್ನು ಸ್ಥಾಪಿಸಲಾಯಿತು. ಕರ್ನಾಟಕ ಏಕೀಕರಣದ ನಂತರ ಈ ಕಾರ್ಖಾನೆಗಳು ಕರ್ನಾಟಕ ಸರ್ಕಾರದ ಸುಪರ್ದಿಗೆ ಬಂದವು. ಈ ಎಲ್ಲಾ ಕಾರ್ಖಾನೆಗಳನ್ನು ಮಿಳಿತಗೊಳಿಸಿ ಸರ್ಕಾರಿ ಸಾಬೂನು ಕಾರ್ಖಾನೆಯನ್ನು ೧೯೮೦ನೇ ಇಸವಿಯಲ್ಲಿ ಕರ್ನಾಟಕ ರಾಜ್ಯಸರ್ಕಾರದ ಸಾರ್ವಜನಿಕ ಸ್ವಾಮ್ಯದ ಉದ್ದಿಮೆಯಾಗಿ ಪರಿವರ್ತಿಸಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಎಂದು ಪುನರ್ ನಾಮಕರಣ ಮಾಡಲಾಯಿತು. ತದನಂತರ ಸಾಬೂನಿನ ಹೊರತಾಗಿ, ಅಗರಬತ್ತಿ, ಮೈಪೌಡರ್, ಮಾರ್ಜಕಗಳು, ಶ್ರೀಗಂಧದೆಣ್ಣೆ, ಹಾಗೂ ಶ್ರೀಗಂಧದ ಕೊರಡು ಮುಂತಾದ ಉತ್ಪನ್ನಗಳ ತಯಾರಿಕೆ ಆರಂಭಿಸಿತು. ೧೦ಮೇ೨೦೧೬ಕ್ಕೆ ಕಾರ್ಖಾನೆ ಸ್ಥಾಪನೆಯಾಗಿ ಒಂದು ಶತಮಾನ. == ವ್ಯಾಪಾರ ವಹಿವಾಟು == ಮಾರ್ಚ್ ೨೦೦೬ರ ಅಂಕಿಅಂಶದಂತೆ, ಭಾರತದ ವಾರ್ಷಿಕ ೪೫೦ ಸಾವಿರ ಟನ್ ಒಟ್ಟು ಸೋಪಿನ ಉತ್ಪಾದನೆ ಮತ್ತು ಮಾರಾಟದಲ್ಲಿ ಮೈಸೂರು ಸ್ಯಾಂಡಲ್ ಸೋಪು ೬೫೦೦ ಟನ್ ಭಾಗ ಹೊಂದಿದೆ. ಬೆಂಗಳೂರಿನಲ್ಲಿರುವ ಕೆ.ಎಸ್.ಡಿ.ಎಲ್. ಕಾರ್ಖಾನೆಯು ಭಾರತದಲ್ಲೇ ಒಂದು ದೊಡ್ಡ ಆ ರೀತಿಯ ಕಾರ್ಖಾನೆಯಾಗಿದ್ದು ವಾರ್ಷಿಕ ೨೬,೦೦ ಟನ್ ಗಳಷ್ಟು ಸಾಬೂನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಮೊದಲು ಅಷ್ಟೇನೂ ಮಾರ್ಕೆಟಿಂಗ್ ಇರದಿದ್ದ ಈ ಸಾಬೂನಿಗೆ ೨೦೦೬ರಲ್ಲಿ ಭಾರತದ ಕ್ರಿಕೆಟ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರನ್ನ ಮೈಸೂರು ಸ್ಯಾಂಡಲ್ ಸಾಬೂನಿನ ಮೊದಲ ಬ್ರ್ಯಾಂಡ್ ರಾಯಭಾರಿ ಮಾಡಿಕೊಳ್ಳಲಾಯಿತು. ವಿವಿಧ ಮಾರ್ಕೆಟಿಂಗ್ ತಂತ್ರಗಳನ್ನು ಅಳವಡಿಸಿಕೊಂಡು ಪ್ರಚಾರ ಮಾಡಲಾಯಿತು. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯದಲ್ಲಿ ಹೆಚ್ಚು (ಶೇಕಡಾ ೮೫) ಮಾರುಕಟ್ಟೆ ಹೊಂದಿದೆ. ಮೈಸೂರು ಸ್ಯಾಂಡಲ್ ಬೇಬಿ ಸೋಪ್ ತಯಾರಿಕೆ ಕೂಡ ನಡೆಯುತ್ತಿದೆ. ಕರ್ನಾಟಕದಲ್ಲಿ ಗಂಧದ ಮರಗಳು ಕಡಿಮೆಯಾಗುತ್ತಿರುವ ಕಾರಣ ತಯಾರಿಕೆಗೆ ಬೇಕಾದ ಕಚ್ಛಾವಸ್ತುವಿನ ಕೊರತೆಯಿಂದಾಗಿ ತನ್ನ ಸಾಮರ್ಥ್ಯದ ಕಾಲುಭಾಗವಷ್ಟೇ ಉತ್ಪಾದನೆ ಸಾಧ್ಯವಾಗುವಂತಾಯಿತು. ಇದರ ಸಲುವಾಗಿ ನೇರಮಾರುಕಟ್ಟೆಯಲ್ಲಿ ಖರೀದಿಸಲು ಆರಂಭಿಸಿದೆ ಮತ್ತು ಹೊರದೇಶಗಳಿಂದ ಆಮದು ಮಾಡಿಕೊಳ್ಳುವದನ್ನೂ ಪರಿಗಣಿಸಿದೆ. == ಉಲ್ಲೇಖಗಳು == == ಇವನ್ನೂ ನೋಡಿ == ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಮೈಸೂರು ಅಗರಬತ್ತಿ == ಹೊರಕೊಂಡಿಗಳು == 'ಮೈಸೂರು ಸ್ಯಾಂಡಲ್ ಸೋಪ್' ಕಾರ್ಖಾನೆ ಜಾಲತಾಣ 2014-02-21 ವೇಬ್ಯಾಕ್ ಮೆಷಿನ್ ನಲ್ಲಿ. ವಿವಿಧ ಮೈಸೂರು ಸ್ಯಾಂಡಲ್ ಸಾಬೂನುಗಳು ಮೈಸೂರು ಸ್ಯಾಂಡಲ್ ಸೋಪ್‌ನ ‘ಸುಗಂಧ’ದ ಕಥೆ 2016-09-27 ವೇಬ್ಯಾಕ್ ಮೆಷಿನ್ ನಲ್ಲಿ., ಜಸ್ಟ್ ಕನ್ನಡ ತಾಣ ಈ ಸೋಪಿನ ಬಗ್ಗೆ ತಿಳ್ಕೊಬೇಕಾದ ೧೩ ಘಮಘಮ ಸತ್ಯಗಳು 2016-07-08 ವೇಬ್ಯಾಕ್ ಮೆಷಿನ್ ನಲ್ಲಿ., ಅಂತೆಕಂತೆ.ಕಾಂ