ಕನ್ನಡ ಮತ್ತು ತುಳವಿನ ವಿದ್ವಾಂಸರು, ಸಂಶೋಧಕರು,ತುಳುವಿನ ಸಾಹಿತಿಯಾಗಿ ಗುರುತಿಸಿಕೊಂಡಿದ್ದಾರೆ. == ಜನನ == ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನಂದಾವರ. ತಂದೆ ಬಾಬು ಬಾಳೆಪುಣಿ, ತಾಯಿ ಪೂವಮ್ಮರವರ ಮಗನಾಗಿ ೧೫.೧೧.೧೯೪೪ರಂದು ಜನಿಸಿದರು. == ವಿದ್ಯಾಭ್ಯಾಸ == ಬಂಟ್ವಾಳ ತಾಲ್ಲೂಕಿನ ಮುದುಂಗಾರು ಕಟ್ಟೆ ಸರಕಾರಿ ಎಲಿಮೆಂಟರಿ ಶಾಲೆ, ಪಾಣೆಮಂಗಳೂರಿನ ಎಸ್.ವಿ.ಎಸ್ ಹೈಯರ್ ಎಲಿಮೆಂಟರಿ ಶಾಲೆ, ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ, ಬೋರ್ಡು ಹೈಸ್ಕೂಲು ಕುರ್ನಾಡ್‌, ಆನಂದಾಶ್ರಮ ಪ್ರೌಢಶಾಲೆ,ಕೋಟೆಕಾರ್ ಮಂಗಳೂರು ಸಂತ ಅಲೋಶಿಯಸ್ ಕಾಲೇಜು ಬಿ.ಎಸ್‌ಸಿ ಪದವಿ. ಮಂಗಳೂರು ಸರಕಾರಿ ಮಹಾವಿದ್ಯಾಲಯದಲ್ಲಿ ಬಿ.ಇಡಿ ಪದವಿ. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಎಂ.ಎ (ಕನ್ನಡ) ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಎಂ.ಎಡ್ ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಎ.ವಿವೇಕ ರೈಯವರ ಮಾರ್ಗದರ್ಶನದಲ್ಲಿ 'ಕೋಟಿ ಚೆನ್ನಯ ಜಾನಪದೀಯ ಅಧ್ಯಯನ’ ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪದವಿ. == ಉದ್ಯೋಗ == ಬೆಂಗಳೂರುದ ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಸಹಾಯಕ ಅಧ್ಯಾಪಕರಾಗಿ ಶಿಕ್ಷಣ ವೃತ್ತಿ ಸೇಂಟ್ ಆನ್ಸ್ ಪ್ರೌಢಶಾಲೆಯ ಸಹಾಯಕ ಅಧ್ಯಾಪಕರಾಗಿ ಸೇವೆ ಸೇಂಟ್ ಆನ್ಸ್ ಮಹಿಳಾ ಶಿಕ್ಷಕ-ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ. ಸಹ್ಯಾದ್ರಿ ಶಿಕ್ಣಣ ಸಂಸ್ಥೆಯ ಸ್ಥಾಪಕ ಪ್ರಾಂಶುಪಾಲ ಇಂದಿರಾ ಗಾಂಧಿ ರಾಷ್ತ್ರೀಯ ಮುಕ್ತ ವಿಶ್ವವಿದ್ಯಾಲಯದ ಅಧ್ಯಯನ ಮಾರ್ಗದರ್ಶಕರು ಪಿಲಿಕುಳ ನಿಸರ್ಗಧಾಮದ ಯೋಜನಾಧಿಕಾರಿ ಮಂಗಳೂರು ದರ್ಶನ ಯೋಜನೆದ ಸಹಾಯಕ ಸಂಪಾದಕರು == ಕೃತಿಗಳು == ತಾಳಮೇಳ (ಕನ್ನಡ ಕವನ ಸಂಕಲನ) ೧೯೭೫ ಓಲೆಪಟಾಕಿ (ಸ್ವತಂತ್ರ ತುಳು ಕನ್ನಡ ಒಗಟುಗಳ ಸಂಕಲನ)೧೯೮೦ ತುಳುವೆರೆ ಕುಸಾಲ್ ಕುಸೆಲ್ (ತುಳು ಜಾನಪದ ಪ್ರಬಂಧ) ೧೯೮೭/೧೯೮೮ ಸಿಂಗದನ (ತುಳು ಜಾನಪದ ಅಧ್ಯಯನ ಪ್ರಬಂಧ) ೧೯೮೭/೧೯೮೮ ತುಳುಟು ಪನಿಕತೆ (ತುಳುತ್ತ ದಂತ ಕತೆಕುಲು) ೧೯೮೮ ಅವಳಿ ವೀರರೆ ಕುರಿತ ಜಾನಪದ ಮಹಾಕಾವ್ಯ ‘ಕೋಟಿ ಚೆನ್ನಯ' 'ಜಾನಪದ ಸುತ್ತಮುತ್ತ’. ಡಿ.ವಿ.ಜಿ.ಯವರ ಸಾಹಿತ್ಯ ವಿಮರ್ಶೆ ‘ನಂಬಿಕೆ’ ಅಭಿನಂದನ ಗ್ರಂಥ ‘ಕಾಕಾನ ಅಭಿನಂದನೆ’ ಸ್ಮರಣ ಸಂಚಿಕೆ ‘ಪೆಂಗದೂಮ’ ಬರಹಗಾರರ ಕೈಪಿಡಿ ‘ತುಳು ಸಾಹಿತಿ ಕಲಾವಿದರ ಮಾಹಿತಿ’ ಕನ್ನಡ ಸಾಹಿತ್ಯ ಸಮ್ಮೇಳನದ ‘ಪೊನ್ನ ಕಂಠಿ’, ‘ಅಜ್ಜಿ ತಾಂಕಿನ ಪುಳ್ಳಿ’, ‘ನೆತ್ತರಾ ನೀರಾ’, ಇಂಚಿತ್ತಿ ತುಳು ನಾಟಕೊಲು, ತುಳು ಸಾಹಿತ್ಯ ಚರಿತ್ರೆ, ತುಳು ಜಾನಪದದ ಆಚರಣೆ, ತುಳು ಭಾಷಾ ಸಾಹಿತ್ಯ ಡಿ.ಕೆ. ಚೌಟ ಇಂಚಿತಿ ವ್ಯಕ್ತಿ ಚಿತ್ರ ಮನಶಾಸ್ತ್ರ ವಿಜ್ಞಾನಿಯ ಜೀವನ – ಸಾಧನೆ ಕುರಿತ ‘ಸರ್ ಜೀಮ್ಸ್ ಜಾರ್ಜ್ ಫ್ರೆಜರ್‌’ ತುಳು ಕವನ ಸಂಕಲನ ‘ಬೀರ’. ತುಳು ದಂತಕತೆ ‘ತುಳುಟು ಪನಿಕತೆ’ ಮತ್ತು ‘ಒಂಜಿ ಕೋಪೆ ಕತೆಕುಲು’, ತುಳು ಜಾನಪದ ಕತೆ ‘ಕಿಡಿಗೇಡಿಯ ಕೀಟಲೆ’, ಮಕ್ಕಳ ಕಥೆ ‘ಕೋಟಿ ಚೆನ್ನಯ’ == ಸಾಧನೆ == ರಾಷ್ಟ್ರೀಯ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಜಾನಪದ ಸಿದ್ಧಾಂತದ ಅಧ್ಯಯನ, ಕಮ್ಮಟ. ತುಳು ಪಠ್ಯ ಪುಸ್ತಕ ಸಮಿತಿ, ತುಳು ನಿಘಂಟು ಯೋಜನೆ, ತುಳು ಜಾನಪದ ಪತ್ರಿಕೆ ಮಂಡಲಿಯಲ್ಲಿ ಕೂಡ ಸೇವೆ ಸಲ್ಲಿಸಿದ್ದಾರೆ.. ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷ ಬಂಟ್ವಾಳ ತಾಲ್ಲೂಕು ೧೨ನೆದ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ == ಪ್ರಶಸ್ತಿ == ತುಳುವರ ಕುಸಾಲ್ ಕುಸೆಲ್ ಕೃತಿಗೆ ಭಾರತೀಯ ಭಾಷಾ ಕೇಂದ್ರೀಯ ಸಂಸ್ಥೆಯ ಪ್ರಶಸ್ತಿ, ಸಿಂಗದನ ಮತ್ತು ಜಾನಪದ ಸುತ್ತ ಮುತ್ತ ಕೃತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪುರಸ್ಕಾರ, 'ಕೋಟಿ ಚೆನ್ನಯ ಜಾನಪದೀಯ ಅಧ್ಯಯನದ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಬಹುಮಾನ. ಬನ್ನಂಜೆ ಬಾಬು ಅಮಿನ್ ಪ್ರಶಸ್ತಿ. ತುಳು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಪೊಳಲಿ ಶೀನಪ್ಪ ಹೆಗ್ಗಡೆ ಪ್ರಶಸ್ತಿ. ನಾಟಕ ಅಕಾಡೆಮಿ ಗೌರವ ಪ್ರಶಸ್ತಿ, ಕಾಂತಾವರ ಕನ್ನಡ ಸಂಘದ ಪುರಸ್ಕಾರ == ಉಲ್ಲೇಖ ==