ರಂಗನಾಥ್ ವಿನಯ್ ಕುಮಾರ್ (ಜನನ: ಫೆಬ್ರವರಿ ೧೨, ೧೯೮೪ ದಾವಣಗೆರೆ, ಕರ್ನಾಟಕದಲ್ಲಿ) ಭಾರತ ಕ್ರಿಕೆಟ್ ತಂಡದ ಆಟಗಾರ. ವಿನಯ್ ಕುಮಾರ್ ಬಲಗೈ ಮಧ್ಯಮ ವೇಗದ ಬೌಲರ್. ೨೦೦೮ರಲ್ಲಿ ಜಿಂಬಾಬ್ವೆ ವಿರುದ್ಧ ತಮ್ಮ ಮೊದಲ ಏಕದಿನ ಪ೦ದ್ಯವನ್ನು ಆಡಿ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ ವಿನಯ್ ಕುಮಾರ್ ಈವರೆಗೆ ೧೯ ಏಕದಿನ ಪಂದ್ಯವನ್ನು ಆಡಿದ್ದಾರೆ. ರಣಜಿ ಟ್ರೋಫಿಯಲ್ಲಿ ಕರ್ನಾಟಕ ಕ್ರಿಕೆಟ್ ತ೦ಡದ ಪರವಾಗಿ ಆಡುತ್ತಾರೆ. ವಿನಯ್ ಕುಮಾರ್ ದಾವಣಗೆರೆ ಎಕ್ಸ್‌ಪ್ರೆಸ್ ಎಂದೇ ಪ್ರಸಿದ್ಧರಾಗಿದ್ದಾರೆ. == ಐಪಿಎಲ್ == ಮೊದಲ ಮೂರು ಐಪಿಎಲ್ ಆವೃತ್ತಿಗಳಲ್ಲಿ ವಿನಯ್ ಕುಮಾರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಆಡಿದರು. ೪ನೇ ಆವೃತ್ತಿಯಲ್ಲಿ ಕೊಚ್ಚಿ ಟಸ್ಕರ್ಸ್ ಪರವಾಗಿ ಆಡಿದರು. ೫ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮರಳಿದ್ದಾರೆ.