ಸಿದ್ದಾಪುರ ಕೆ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನಲ್ಲಿದೆ. == ಭೌಗೋಳಿಕ == ಗ್ರಾಮವು ಭೌಗೋಳಿಕವಾಗಿ 16* 32' 10" ಉತ್ತರ ಅಕ್ಷಾಂಶ ಮತ್ತು 75* 31' 19" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಜನಸಂಖ್ಯೆ == ಗ್ರಾಮದಲ್ಲಿ ಜನಸಂಖ್ಯೆ ಸುಮಾರು 2500 ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ. == ಹವಾಮಾನ == ಬೇಸಿಗೆಕಾಲ - ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 42° ವರೆಗೆ(ಎಪ್ರೀಲನಲ್ಲಿ), ಅತೀ ಕಡಿಮೆ ಅಂದರೆ 9° ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - 35° - 42° ಮಳೆಗಾಲ - 18° - 32° ಚಳಿಗಾಲ - 15° - 28° ಮಳೆ - ಪ್ರತಿ ವರ್ಷ 300 - 600ಮಿಮಿ ಗಳಸ್ಟು ಆಗಿತ್ತದೆ == ಆಹಾರ == ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ಗಾಂಧಿ ಟೋಪಿ ಅಥವಾ ಬಿಳಿ/ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ. ಮಹಿಳೆಯರು ಇಲಕಲ್ಲ ಸೀರೆಯನ್ನು ಧರಿಸುತ್ತಾರೆ. == ಕಲೆ == ಲಾವಣಿ ಪದ, ಡೊಳ್ಳಿನ ಪದ, ಗೀಗೀ ಪದ, ಹಂತಿ ಪದ, ಜಾನಪದ, ಡೊಳ್ಳು ಕುಣಿತ, ಕರಡಿ ಮಜಲು, ಮೊಹರಮ ಹೆಜ್ಜೆ ಕುಣಿತ, ಹರಿ ಭಜನೆ ಮತ್ತು ಶಿವ ಭಜನೆ ಇತ್ಯಾದಿ ಗ್ರಾಮದ ಕಲೆಯಾಗಿದೆ. == ಧರ್ಮ == ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. == ದೇವಾಲಯ == ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶ್ರೀ ದುರ್ಗಾದೇವಿ ದೇವಾಲಯ ಶ್ರೀ ಮಲ್ಲಿಕಾರ್ಜುನ ದೇವಾಲಯ ಶ್ರೀ ಬಸವೇಶ್ವರ ದೇವಾಲಯ ಶ್ರೀ ಪಾಂಡುರಂಗ ದೇವಾಲಯ ಶ್ರೀ ಹಣಮಂತ ದೇವಾಲಯ ಶ್ರೀ ಮಲ್ಲಿಕಾರ್ಜುನ ದೇವಾಲಯ ಶ್ರೀ ಸೋಮಲಿಂಗೇಶ್ವರ ದೆವಾಲಯ == ಮಸೀದಿ == ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ಹಬ್ಬ == ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಕೃಷಿ == ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು 75% ಜನರು ಕೆಲಸ ಮಾಡುತ್ತಾರೆ. == ನೀರಾವರಿ == ಗ್ರಾಮದಲ್ಲಿ ಬಹುಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ(ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಉದ್ಯೋಗ == ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 70% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಆಡು(ಮೇಕೆ) ಸಾಕಾಣಿಕೆ ಮತ್ತು ಕುರಿ ಸಾಕಾಣಿಕೆ ಉಪಕಸುಬುಗಳಾಗಿವೆ. == ಬೆಳೆ == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಸಸ್ಯ == ಆಲದ ಮರ, ಬೇವಿನ ಮರ, ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ. == ಪ್ರಾಣಿ == ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ ಮತ್ತು ಕೋಗಿಲೆ ಇತ್ಯಾದಿ. == ಆರ್ಥಿಕತೆ == ಗ್ರಾಮದ ಆರ್ಥಿಕ ಪರಿಸ್ಥಿತಿ ಮಧ್ಯಮ ತರಗತಿಯಲ್ಲಿದೆ. == ಶಿಕ್ಷಣ == ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಸರಕಾರಿ ಪ್ರೌಡ ಶಾಲೆ, ಸಿದ್ದಾಪೂರ ಕೆ. == ಸಾಕ್ಷರತೆ == ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು 75%. ಅದರಲ್ಲಿ 85% ಪುರುಷರು ಹಾಗೂ 68% ಮಹಿಳೆಯರು ಸಾಕ್ಷರತೆ ಹೊಂದಿದೆ. == ರಾಜಕೀಯ == ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. == ಗ್ರಾಮಪಂಚಾಯತ ಕಾರ್ಯಾಲಯ == ಗ್ರಾಮಪಂಚಾಯತ ಕಾರ್ಯಾಲಯ ಸಿದ್ದಾಪೂರ (ಕೆ) ತಾ.ಜಿ.ವಿಜಯಪುರ 586130 ಸಿದ್ದಾಪೂರ ಕೆ ಗ್ರಾಮ ಪಂಚಾಯತಿಯು ವಿಜಯಪುರ ತಾಲೂಕು ಹಾಗೂ ಜಿಲ್ಲೆಯಲ್ಲಿದ್ದು,ವಿಜಯಪುರ ಜಿಲ್ಲೆಯಿಂದ ಸುಮಾರು 22 ಕಿ.ಮಿ. ದೂರದಲ್ಲಿದೆ.ಈ ಪಂಚಾಯತ ವ್ಯಾಪ್ತಯಲ್ಲಿ ಸಿದ್ದಾಪೂರ ಕೆ (ಕಾರಿಕೋಳ)ಗ್ರಾಮ ಹಾಗೂ ಮಲಕನದೇವರಟ್ಟಿ ಮತ್ತು ಸೋಮದೇವರಹಟ್ಟಿ ಗ್ರಾಮ ಹಾಗೂ 3 ತಾಂಡಾಗಳು ಕಂಡುಬರುತ್ತವೆ.ವಿಜಯಪುರದಿಂದ ಸಿದ್ದಾಪೂರ ಕೆ ಗ್ರಾಮ ಪ್ರವೇಶಿಸುತ್ತಿದ್ದಂತೆ ಎಡಭಾಗದಲ್ಲಿ ದ್ವಾರಬಾಗಿಲು ಬಲಭಾಗದಲ್ಲಿ ಪ್ರಥಮ ಹಾಲು ಉತ್ಪಾದಕ ಡೇರಿ ಮತ್ತು ಗ್ರಂಥಾಲಯ ಇದೆ. ಪಷ್ಚಿಮ ಆವರಣದಲ್ಲಿ ಗ್ರಾಮ ಪಂಚಾಯತ ಕಾರ್ಯಾಲಯ ಕಟ್ಟಡವಿದೆ.ಈ ಸಿದ್ದಾಪೂರ ಗ್ರಾಮದಲ್ಲಿ ರೇವಣಸಿದ್ದೇಶ್ವರ ಮತ್ತು ಲಕ್ಷ್ಮಿದೇವಿ ಗ್ರಾಮ ದೇವರುಗಳಾಗಿವೆ ,ವರ್ಷಕ್ಕೊಮ್ಮೆ ಅತಿ ವಿಜೃಂಭನೆಯಿಂದ 3 ದಿನಗಳ ಜಾತ್ರೆ ನೆರವೇರುತ್ತದೆ.ಈ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟು 3 ಗ್ರಾಮಗಳು ಹಾಗೂ 3 ತಾಂಡಾಗಳಿವೆ.