ಬೆಂಗಳೂರು: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು 2.50ಲಕ್ಷ ರೂ.ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ವಿದ್ಯಾರ್ಥಿವೇತನ ತಂತ್ರಾಂಶ(ಎಸ್‍ಎಸ್‍ಪಿ)ದಲ್ಲಿ ಫೆ.29ರೊಳಗೆ ಸಲ್ಲಿಸಬೇಕೆಂದು ಕೃಷಿ ಇಲಾಖೆ ಅಧಿಕೃತ ಪ್ರಕಟಣೆ ತಿಳಿಸಿದೆ.   