ಚಿಕ್ಕಮಗಳೂರು : ಮನೆಯಲ್ಲಿ ತಯಾರಿಸಿದ್ದ  ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥಗೊಂಡ ಘಟನೆ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ಸೋಮವಾರ ನಡೆದಿದೆ.  ಕಾರ್ಯಕ್ರಮ ನಿಮಿತ್ತ ಮನೆಯಲ್ಲಿ ಸಂಬಂಧಿಕರು ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ  ತಯಾರಿಸಿದ್ದ ಮಾಂಸಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.ಅಸ್ವಸ್ಥಗೊಂಡ ಎಲ್ಲರನ್ನೂ ಕಡೂರು ಆಸ್ಪತ್ರೆಗೆ ದಾಖಲಿಸಾಲಾಗಿದೆ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಕಡೂರು ಶಾಸಕ ಕೆ.ಎಸ್.ಆನಂದ್ ಭೇಟಿ ನೀಡಿದ್ದರು.