ಕಲಬುರಗಿ: ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿರುವ ಆರೋಪದಲ್ಲಿ ನಗರದ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಬೀದರ್ ವಲಯ ಅರಣ್ಯಧಿಕಾರಿಯಾಗಿರುವ ಬಸವರಾಜ್ ಡಾಂಗೆ ಹಾಗೂ ದೇವದುರ್ಗದ KBJNL ತಿಪ್ಪಣ್ಣ ಅನ್ನದಾನಿ ಬಲೆಗೆ ಬಿದ್ದ ಅಧಿಕಾರಿಗಳು.ಲೋಕಾಯುಕ್ತ ಎಸ್ಪಿ ಕರ್ನೂಲ್ ನೇತೃತ್ವದಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.