ಬೆಂಗಳೂರು, ಅ.4: ಬೆಂಗಳೂರಿನ ಹಝತ್ ಹಮೀದ್ ಶಾ ಮತ್ತು ಮುಹೀಬ್ ಶಾ ರಕ್ತ ಕೇಂದ್ರದ ಸಹಯೋಗದಲ್ಲಿ ಮಲ್ಲೇಶ್ವರದಲ್ಲಿ ಬೆಂಗಳೂರು ಕೇಂದ್ರ ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷ ಶವೀಝ್ ಅಹ್ಮದ್ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ, ಕನ್ನಡಕ ವಿತರಣೆ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.  ಶಿಬಿರದಲ್ಲಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಮಂಜುನಾಥ್‌, ಹಝತ್ ಹಮೀದ್ ಶಾ ಮತ್ತು ಮುಹೀಬ್‌ ಶಾ ದರ್ಗಾ ಸಮಿತಿ ಅಧ್ಯಕ್ಷ ಜಿ.ಎ.ಬಾವ ಪಾಲ್ಗೊಂಡಿದ್ದರು.  